ವಿಡಿಯೊ | ಸಭೆಯ ನಡುವೆಯೇ ಎಂಟ್ರಿ ಕೊಟ್ಟು ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕುಳಿತ ಮಂಗ

ಉತ್ತರ ಪ್ರದೇಶದ  ಬಾಗಪತ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಪರೂಪದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಧಿಕಾರಿಯೊಬ್ಬರ ಪ್ರಾಣಿ ಪ್ರೇಮ ಮತ್ತು ಶಾಂತ ಸ್ವಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಗಪತ್ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ‘ರೈತರ ದಿನಾಚರಣೆ’ ಅಂಗವಾಗಿ ಜಿಲ್ಲಾಧಿಕಾರಿಗಳು ಹಾಗೂ ರೈತರ ನಡುವೆ ಮಹತ್ವದ ಸಭೆ ನಡೆಯುತ್ತಿತ್ತು. ಜಿಲ್ಲಾಧಿಕಾರಿ ಅಸ್ಮಿತಾ ಲಾಲ್ ಮತ್ತು … Continued

ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ದ ಬೃಹತ್ ಪ್ರತಿಭಟನಾ ಸಮಾವೇಶ

ಹೊನ್ನಾವರ  :  ನದಿ ತಾನು ಹರಿಯುವ ದಿಕ್ಕಿನ ವಿರುದ್ಧ ಹರಿದರೆ ಅದು ನಾಶಕ್ಕೆ ಮುನ್ನುಡಿ. ನದಿಯ ನೀರನ್ನು ಸುರಂಗ‌ ಕೊರೆದು ಹಿಂದಕ್ಕೆ ಒಯ್ಯುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ. ಯೋಜನೆ ನಿಲ್ಲಿಸಲು ಎಲ್ಲರೂ ಒಂದಾಗಬೇಕು. ಎಲ್ಲರೂ ಸೇರಿ ಒಗ್ಗಟ್ಟಿನಲ್ಲಿ ಹೋರಾಟ ಮಾಡೋಣ ಎಂದು ನುಡಿದರು. ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ  … Continued

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾರ್ವಜನಿಕರ ತೀವ್ರ ವಿರೋಧ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಶ್ರೀ ಗುತ್ತಿಕನ್ನಿಕಾ ನಗರದೇವಿ ದೇವಾಲಯದ ಸಭಾಭವನದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಕುರಿತು ನಡೆದ ಸಾರ್ವಜನಿಕ ಆಕ್ಷೇಪಣೆ ಸಭೆಯಲ್ಲಿ ಸಾರ್ವಜನಿಕರು ಯೋಜನೆಯ ವಿರುದ್ಧ ತಮ್ಮ ಬಲವಾದ ವಿರೋಧ ವ್ಯಕ್ತಪಡಿಸಿದರು. ಈ ಸಭೆ ಕೇವಲ ಒಂದು ಕಾಟಾಚಾರದ ಪ್ರಕ್ರಿಯೆ ಎಂಬಂತೆ ನಡೆಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. … Continued

ಪ್ರಧಾನಿ ಮೋದಿ ಜೊತೆ ಕಾರಿನಲ್ಲಿ ಹೋಗಲು 10 ನಿಮಿಷಗಳ ಕಾಲ ಕಾದ ಪುತಿನ್; 45 ನಿಮಿಷಗಳ ಕಾಲ ಕಾರಿನಲ್ಲೇ ಮಾತುಕತೆ…!

ಬೀಜಿಂಗ್: ಚೀನಾದ ಟಿಯಾಂಜಿನ್‌ನಲ್ಲಿರುವ ಎಸ್‌ಸಿಒ (SCO) ಶೃಂಗಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಸೋಮವಾರ ಒಂದೇ ವಾಹನದಲ್ಲಿ ತಮ್ಮ ದ್ವಿಪಕ್ಷೀಯ ಸಭೆಯ ಸ್ಥಳಕ್ಕೆ ಪ್ರಯಾಣಿಸಿದ್ದಾರೆ. – ಇದು ರಷ್ಯಾ ಜೊತೆಗಿನ ಭಾರತದ ತೈಲ ವ್ಯಾಪಾರದ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ದಾಳಿಯ ಮಧ್ಯೆ ಬಂದಿದೆ. … Continued

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ; ಕಾಲಮಿತಿಯಲ್ಲಿ 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿನ 34,863 ಖಾಲಿ ಹುದ್ದೆಗಳನ್ನು (Government Jobs) ಕಾಲಮಿತಿಯೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ವೀಡಿಯೊ..| ಹಳಿಯಾಳ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ, ನೂಕಾಟ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ ನಡೆದಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮಾಜಿ ಶಾಸಕ ಸುನಿಲ ಹೆಗಡೆ ಬಣ ಹಾಗೂ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿ ಗುಂಪಿಗಳ ಮಧ್ಯೆ ಗಲಾಟೆಯಾಗಿದೆ. ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಕರ್ಕಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ … Continued

ಬೆಳಗಾವಿ ಬಳಿಯ ರೆಸಾರ್ಟ್‌ನಲ್ಲಿ ಬಿಜೆಪಿ ಅತೃಪ್ತ ನಾಯಕರ ಸಭೆ…!

ಬೆಳಗಾವಿ: ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದ ಬಳಿಯ ರೆಸಾರ್ಟ್‌ನಲ್ಲಿ ಬಿಜೆಪಿ ಅತೃಪ್ತ ನಾಯಕರು ಭಾನುವಾರ ಸಭೆ ನಡೆಸಿದರು. ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಜಿ.ಎಂ.ಸಿದ್ಧೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಪ್ರತಾಪ ಸಿಂಹ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಆದರೆ, ಮುಡಾ ಹಗರಣ ವಿರೋಧಿಸಿ ಬಿಜೆಪಿ … Continued

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತೀರಿ ಏಕೆ : ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಸಂಗ್ರಹ ಮಾಡುತ್ತಿದ್ದೀರಿ. ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಈವರೆಗೂ ಮುಕ್ತಾಯಗೊಳಿಸದೆ, ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಲೋಕಸಭೆ ಚುನಾವಣೆ: ಸುಮಲತಾ ಭೇಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಅವರ ನಿವಾಸಕ್ಕೆ ಭಾನುವಾರ (ಮಾ. 31ರಂದು) ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ, ಸುಮಲತಾ ಅವರ ಪುತ್ರ ಅಭಿಷೇಕ ಅಂಬರೀಶ ಇದ್ದರು. ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮುನಿಸು ಮರೆತು … Continued