“ನೀವೇ ಅನುಮತಿ ನೀಡಿದ್ದೀರಿ, ಈಗ ಗುಂಡು ಹಾರಿಸುತ್ತಿದ್ದೀರಿ?”: ಇರಾನ್ ದಾಳಿ ವೇಳೆ ಭಾರತೀಯ ಹಡಗಿನ ಸಂಭಾಷಣೆಯ ಆಡಿಯೋ ಬಹಿರಂಗ !

ನವದೆಹಲಿ/ದುಬೈ: ಜಗತ್ತಿನ ಒಟ್ಟು ತೈಲ ಮತ್ತು ಅನಿಲ ಪೂರೈಕೆಯ ಐದನೇ ಒಂದು ಭಾಗದಷ್ಟು ಸಂಚಾರ ನಡೆಸುವ ಹೋರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಶನಿವಾರ ಇರಾನ್‌ನ ಸಣ್ಣ ಯುದ್ಧನೌಕೆಗಳು (Gunboats) ಭಾರತದ ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಈ ಘಟನೆಯ ಬೆನ್ನಲ್ಲೇ ಭಾರತೀಯ ಹಡಗುಗಳು ಅಲ್ಲಿಂದ ಹಿಂದೆ ಸರಿದಿವೆ. ಅದೃಷ್ಟವಶಾತ್, … Continued

ಅಮೆರಿಕದ ದಾಳಿಯಲ್ಲಿ ಇರಾನಿನ ಹಲವು ಉನ್ನತ ಸೇನಾಧಿಕಾರಿಗಳು ಸಾವು ಎಂದ ಟ್ರಂಪ್‌ ; ವಿಡಿಯೊ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್ : ಇರಾನ್ ರಾಜಧಾನಿ ತೆಹ್ರಾನ್ ಮೇಲೆ ಅಮೆರಿಕ “ಬೃಹತ್ ದಾಳಿ” ನಡೆಸಿದ್ದು, ಇದರಲ್ಲಿ ಇರಾನ್‌ನ ಹಲವಾರು ಉನ್ನತ ಸೇನಾ ಅಧಿಕಾರಿಗಳು ಹತರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಶನಿವಾರ (ಅಮೆರಿಕ ಕಾಲಮಾನ) ತಮ್ಮ ‘ಟ್ರುತ್ ಸೋಷಿಯಲ್’ (Truth Social) ಜಾಲತಾಣದಲ್ಲಿ ಅವರು ಈ  ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದಾಳಿಯ ನಂತರದ ದೃಶ್ಯಾವಳಿ ಎನ್ನಲಾದ … Continued

ಚಿಂತೆ ಬೇಡ, ಭಾರತೀಯರು ಸುರಕ್ಷಿತ”: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಭರವಸೆ

ತೆಹ್ರಾನ್/ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ರಾಯಭಾರ ಕಚೇರಿಯು ಭಾರತಕ್ಕೆ ಮಹತ್ವದ ಭರವಸೆ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗುವ ಭಾರತದ ಹಡಗುಗಳು ಮತ್ತು ನಾಗರಿಕರ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಬೇಡ ಎಂದು ಇರಾನ್ ಭರವಸೆ ನೀಡಿದೆ. “ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸುವ ಅಗತ್ಯವಿಲ್ಲ” … Continued

ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿಗೆ ಗಂಭೀರ ಗಾಯ ; ಅಮೆರಿಕ ರಕ್ಷಣಾ ಸಚಿವ

ವಾಷಿಂಗ್ಟನ್: ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ವಿರೂಪಗೊಂಡಿರುವ ಸಾಧ್ಯತೆಯಿದೆ ಎಂದು ಅಮೆರಿಕದ ರಕ್ಷಣಾ ಸಚಿವ (Secretary of War) ಪೀಟ್ ಹೆಗ್ಸೆತ್ ಶುಕ್ರವಾರ ತಿಳಿಸಿದ್ದಾರೆ. ಇರಾನ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ತಮ್ಮ ತಂದೆ ಅಲಿ ಖಮೇನಿ ನಿಧನದ ನಂತರ ಮೊಜ್ತಬಾ ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ … Continued

ವೀಡಿಯೊ | ಭಾರತದಿಂದ ವಾಪಸಾಗುತ್ತಿದ್ದ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ಜಲಾಂತರ್ಗಾಮಿ ದಾಳಿ : 87 ಸಿಬ್ಬಂದಿ ಸಾವು

ವಾಷಿಂಗ್ಟನ್/ಗಾಲೆ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ ಇರಾನ್‌ನ ಯುದ್ಧನೌಕೆಯನ್ನು ಅಮೆರಿಕದ ಜಲಾಂತರ್ಗಾಮಿ ನೌಕೆಯು ಟಾರ್ಪಿಡೊ (Torpedo) ಬಳಸಿ ಹೊಡೆದುರುಳಿಸಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, “ಎರಡನೇ ಮಹಾಯುದ್ಧದ ನಂತರ ಶತ್ರು ದೇಶದ ಹಡಗನ್ನು ಟಾರ್ಪಿಡೊ ಮೂಲಕ ಮುಳುಗಿಸಿದ … Continued

ಖಮೇನಿ ಹತ್ಯೆಗೆ ಪಾಕಿಸ್ತಾನದಲ್ಲಿ ಆಕ್ರೋಶ ; ಅಮೆರಿಕ ಕಾನ್ಸುಲೇಟ್ ಕಚೇರಿಮೇಲೆ ದಾಳಿ ; ಹಿಂಸಾಚಾರದಲ್ಲಿ 21 ಮಂದಿ ಸಾವು

ಇಸ್ಲಾಮಾಬಾದ್‌ : ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಾದ್ಯಂತ ಭಾನುವಾರ ಪ್ರತಿಭಟನೆಗಳು ಭುಗಿಲೆದ್ದವು. ಹಲವಾರು ಶಿಯಾ ಬಹುಸಂಖ್ಯಾತ ಪ್ರದೇಶಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು, ಬೆಂಕಿ ಹಚ್ಚಿದ ಘಟನೆಗಳು ಮತ್ತು ಅಮೆರಿಕ ವಿರೋಧಿ ಪ್ರದರ್ಶನಗಳಿಗೆ ಕಾರಣವಾಯಿತು. ಹಲವಾರು ನಗರಗಳಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಈವರೆಗೆ ಕನಿಷ್ಠ 21 ಜನರು ಸಾವಿಗೀಡಾಗಿದ್ದಾರೆ ಎಂದು … Continued

ಮಧ್ಯಪ್ರಾಚ್ಯ ನೋಡಿದರೆ… ಭಾರತೀಯರಾಗಿ ನಾವು ಅದೃಷ್ಟವಂತರು’ : ಪ್ರಧಾನಿ ಮೋದಿ, ಅಮಿತ್ ಶಾರನ್ನು ಹೊಗಳಿದ ಅವರಿಬ್ಬರ ಕಟು ಟೀಕಾಕಾರ್ತಿ ಶೆಹ್ಲಾ ರಶೀದ್

ನವದೆಹಲಿ: ಪ್ರಧಾನಿ ಮೋದಿ ಕಟು ಟೀಕಾಕಾರ್ತಿ ಹಾಗೂ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆ ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ್ದಾರೆ. ಶನಿವಾರ ಇಸ್ರೇಲ್-ಹಮಾಸ್ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರ ಈ ಪ್ರಶಂಸೆ ಬಂದಿದೆ. … Continued