ಹೊನ್ನಾವರ: ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ, ಮೂವರು ಪಾರು

ಹೊನ್ನಾವರ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ನಾಡದೋಣಿ ಮುಳುಗಡೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಸಮೀಪ ಸೋಮವಾರ ಬೆಳಿಗ್ಗೆ ಸಂಭವಿಸಿದ ಬಗ್ಗೆ ವರದಿಯಾಗಿದೆ. ದೋಣಿಯಲ್ಲಿದ್ದ ನಾಲ್ವರಲ್ಲಿ ಒಬ್ಬ ನಾಪತ್ತೆಯಾಗಿದ್ದು, ಉಳಿದ ಮೂವರು ಸುರಕ್ಷಿತವಾಗಿ ಬಂದಿದ್ದಾರೆ. ಸೋಮವಾರ ಬೆಳಗ್ಗೆ ಮೀನುಗಾರುಕೆಗೆ ತೆರಳಿದ್ದ ದೋಣಿ ಹೊನ್ನಾವರದ ಇಕೋ ಬೀಚ್ ಬಳಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿದೆ. … Continued