ಬಾಂಗ್ಲಾದೇಶ: ಪೆಟ್ರೋಲ್ ಹಣ ಕೇಳಿದ್ದಕ್ಕೆ ಹಿಂದೂ ಯುವಕನ ಮೇಲೆ ಕಾರು ಹರಿಸಿ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಎಸ್‌ಯುವಿ (SUV) ಕಾರನ್ನು ತಡೆಯಲು ಯತ್ನಿಸಿದ ಹಿಂದೂ ಯುವಕನನ್ನು ಕಾರು ಓಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಯುವಕನನ್ನು 30 ವರ್ಷದ ರಿಪಾನ್ ಸಹಾ ಎಂದು ಗುರುತಿಸಲಾಗಿದೆ. ಈತ ರಾಜಬರಿ ಜಿಲ್ಲೆಯ ಗೋವಾಲಂದ ಮೋರ್‌ನಲ್ಲಿರುವ ಕರೀಂ ಫಿಲ್ಲಿಂಗ್ … Continued

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ಹಿಂಸಾಚಾರ: ಮತ್ತೊಬ್ಬ ಹಿಂದೂವಿನ ಹತ್ಯೆ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯ ನಡುವೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುಂದುವರಿದಿದೆ. ಭಾನುವಾರ (ಜನವರಿ 11) ರಾತ್ರಿ ಫೆನಿ ಜಿಲ್ಲೆಯ ದಗೊನ್ಬುಯಾನ್ ಪ್ರದೇಶದಲ್ಲಿ ಸಮೀರಕುಮಾರ ದಾಸ್ (28) ಎಂಬ ಆಟೋ ಚಾಲಕನನ್ನು ಗುಂಪೊಂದು ಹೊಡೆದು ಕೊಂದಿದೆ. ಈ ಘಟನೆಯೊಂದಿಗೆ, ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ದಾಳಿಕೋರರು … Continued

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued

ಬಾಂಗ್ಲಾದೇಶ | ಬಂಧಿತ ಹಿಂದೂ ಸ್ವಾಮೀಜಿಯ ವಕೀಲರ ಮೇಲೆ ದಾಳಿ ; ಐಸಿಯುನಲ್ಲಿ ಚಿಕಿತ್ಸೆ : ಇಸ್ಕಾನ್

ನವದೆಹಲಿ: ಬಂಧಿತ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿಯ ಪರ ವಾದಿಸುತ್ತಿರುವ ಬಾಂಗ್ಲಾದೇಶದ ವಕೀಲರ ಮೇಲೆ “ಇಸ್ಲಾಮಿಸ್ಟ್‌ಗಳು ಅವರ ಮನೆಯಲ್ಲಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಮತ್ತು ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಇಸ್ಕಾನ್ ಇಂಡಿಯಾ ಹೇಳಿಕೊಂಡಿದೆ. ದೇಶದ್ರೋಹದ ಆರೋಪದ ಮೇಲೆ ಸನ್ಯಾಸಿಯ ಬಂಧನದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರದ … Continued

ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ 3 ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ಹಾನಿ ಮಾಡಿದ ಗುಂಪು..

ಢಾಕಾ: ಹಿಂದೂ ಧಾರ್ಮಿಕ ನಾಯಕ ಚಿನ್ಮಯ ಕೃಷ್ಣ ದಾಸ್‌ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಿದಾಗಿನಿಂದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಶುಕ್ರವಾರ ಮೂರು ಹಿಂದೂ ದೇವಾಲಯಗಳಿಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಬಂದರು ನಗರದ ಹರೀಶ್ ಚಂದ್ರ ಮುನ್ಸೆಫ್ ಲೇನ್‌ನಲ್ಲಿ ಮಧ್ಯಾಹ್ನ ಶುಕ್ರವಾರ 2:30 ರ ಸುಮಾರಿಗೆ ದಾಳಿ ನಡೆದಿದ್ದು, … Continued