ಹಠಾತ್‌ ಭೀಕರ ಪ್ರವಾಹಕ್ಕೆ ನೇಪಾಳ ತತ್ತರ ; ಸಾವಿನ ಸಂಖ್ಯೆ 353ಕ್ಕೆ ಏರಿಕೆ, 1300ಕ್ಕೂ ಹೆಚ್ಚು ಜನರು ನಾಪತ್ತೆ

ಕಠ್ಮಂಡು: ನೇಪಾಳವನ್ನು ತತ್ತರಗೊಳಿಸಿರುವ ಭೀಕರ ಹಠಾತ್‌ ಪ್ರವಾಹ ದುರಂತದಲ್ಲಿ ಸಾವಿನ ಸಂಖ್ಯೆ 353ಕ್ಕೆ ಏರಿಕೆಯಾಗಿದ್ದು, 1,300ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಬದುಕುಳಿದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಯುದ್ಧೋಪಾದಿಯಲ್ಲಿ ಮುಂದುವರಿದಿವೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭೋಟೆಕೋಶಿ (Bhotekoshi) ನದಿಯಲ್ಲಿ ಏಕಾಏಕಿ ಉಂಟಾದ ಭೀಕರ ಪ್ರವಾಹವು ನೇಪಾಳದ ಮೂರು … Continued

ನೇಪಾಳ ಪ್ರವಾಹ ದುರಂತ: ಕರ್ನಾಟಕದ 8 ಮಂದಿ ಸೇರಿ ದಕ್ಷಿಣ ಭಾರತದ 168 ಜನರು ನಾಪತ್ತೆ

ನವದೆಹಲಿ: ಕೈಲಾಸ ಮಾನಸರೋವರ ಯಾತ್ರೆ ಸೇರಿದಂತೆ ವಿವಿಧ ಕಾರಣಕ್ಕೆ ನೇಪಾಳಕ್ಕೆ ತೆರಳಿದ್ದ ದಕ್ಷಿಣ ಭಾರತದ ಸುಮಾರು 168ಕ್ಕೂ ಹೆಚ್ಚು ಯಾತ್ರಿಕರು ಹಾಗೂ ಪ್ರವಾಸಿಗರು ಹಿಮ-ಬಂಡೆಗಳ ಕುಸಿತದಿಂದ ಉಂಟಾದ ಹಠಾತ್‌ ಭೀಕರ ಪ್ರವಾಹದ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ಸಿಲುಕಿಕೊಂಡಿದ್ದು, ಕೆಲವರು ನಾಪತ್ತೆಯಾಗಿದ್ದಾರೆ ಹಾಗೂ ಇನ್ನೂ ಹಲವರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ. ನೇಪಾಳದ ರಸುವಾ … Continued

ನೇಪಾಳ ಪ್ರವಾಹ ದುರಂತ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ ಶಂಕೆ, ರಕ್ಷಣಾ ಕಾರ್ಯಕ್ಕೆ ಸದ್ಗುರು ಸಜ್ಜು

ನವದೆಹಲಿ/ಕಠ್ಮಂಡು: ನೇಪಾಳದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಹಠಾತ್‌ ಪ್ರವಾಹದಲ್ಲಿ (ಫ್ಲ್ಯಾಶ್ ಫ್ಲಡ್) ಸದ್ಗುರು ಅವರ ಇಶಾ ಫೌಂಡೇಶನ್‌ಗೆ ಸೇರಿದ ಕನಿಷ್ಠ 77 ಯಾತ್ರಿಕರು ನಾಪತ್ತೆಯಾಗಿದ್ದಾರೆ ಎಂಬ ಶಂಕೆ ಇದೆ. ಕೈಲಾಸ-ಮಾನಸಸರೋವರ ಯಾತ್ರೆ ಮುಗಿಸಿ ಟಿಬೆಟ್‌ನಿಂದ ಹಿಂದಿರುಗುತ್ತಿದ್ದ ವೇಳೆ ಅವರು ವಲಸೆ (ಇಮಿಗ್ರೇಶನ್) ಕಚೇರಿಯಲ್ಲಿ ಇದ್ದಾಗ ಈ ದುರಂತ ಸಂಭವಿಸಿದೆ ಎಂದು ಸದ್ಗುರು ಸಾಮಾಜಿಕ ಜಾಲತಾಣದಲ್ಲಿ … Continued

ಏಕಾಂಗಿಯಾಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಬೆಂಗಳೂರಿನ ಟೆಕ್ಕಿಗಾಗಿ ಹುಡುಕಾಟ

ಬೆಂಗಳೂರು: ಬೆಂಗಳೂರಿನ ಹೊರವಲಯದ ಶಿವಗಂಗೆ ಬೆಟ್ಟಕ್ಕೆ ಏಕಾಂಗಿಯಾಗಿ ಚಾರಣಕ್ಕೆ ತೆರಳಿದ್ದ 31 ವರ್ಷದ ಸಾಫ್ಟ್‌ವೇರ್ ವೃತ್ತಿಪರ ಅದ್ವೈತ ಉಪಾಧ್ಯಾಯ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ವಿವಿಧ ರಕ್ಷಣಾ ಸಂಸ್ಥೆಗಳ 100ಕ್ಕೂ ಹೆಚ್ಚು ಸಿಬ್ಬಂದಿ ಬೆಟ್ಟದ ಕಲ್ಲುಬಂಡೆಗಳು, ಪೊದೆಗಳು ಮತ್ತು ದಟ್ಟ ಸಸ್ಯವರ್ಗದ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮೂಲದ ಉಪಾಧ್ಯಾಯ, ವೈಟ್‌ಫೀಲ್ಡ್‌ನ … Continued

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಕೊಡಗು : ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ ; ಅರಣ್ಯದಲ್ಲಿ ಆಹಾರವಿಲ್ಲದೆ ಇದ್ದಿದ್ದು ಹೇಗೆ ?

ಮಡಿಕೇರಿ: ಕೊಡಗಿನ ಅತ್ಯುನ್ನತ ಶಿಖರ ‘ತಡಿಯಂಡಮೋಲ್’ ಚಾರಣಕ್ಕೆ ತೆರಳಿ ದಾರಿ ತಪ್ಪಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಜಿ.ಎಸ್ (36) ಅವರು ನಾಲ್ಕು ದಿನಗಳ ಭೀಕರ ಸವಾಲುಗಳ ನಂತರ ಭಾನುವಾರ (ಏಪ್ರಿಲ್ 5) ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಆದಿವಾಸಿಗಳು ಮತ್ತು ಜಿಲ್ಲಾಡಳಿತ ನಡೆಸಿದ ತೀವ್ರ ಶೋಧ ಕಾರ್ಯದ ಫಲವಾಗಿ ಅವರು ಪತ್ತೆಯಾಗಿದ್ದು, ಕುಟುಂಬಸ್ಥರು ನಿಟ್ಟುಸಿರು … Continued

ಯಲ್ಲಾಪುರ : ಕಾನೂರು ಜಲಪಾತದಲ್ಲಿ ವಿದ್ಯಾರ್ಥಿ ನಾಪತ್ತೆ

ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ … Continued

ಶಿರಸಿ : ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಓರ್ವ ನಾಪತ್ತೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಸಮೀಪದ ಬೆಣ್ಣೆಹೊಳೆ ಜಲಪಾತ ನೋಡಲು ಭಾನುವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ನಾಪತ್ತೆಯಾಗಿದ್ದಿನ್ನೋರ್ವ ವಿದ್ಯಾರ್ಥಿಯನ್ನು ಶೋಧ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ನಗರದ ಅರಣ್ಯ ಪದವಿ ಕಾಲೇಜಿನ ರಾಹುಲ್ ಎಂಬಾತ ನೀರಿನಲ್ಲಿ ಕಣ್ಮರೆಯಾದ ವಿದ್ಯಾರ್ಥಿ. ಎನ್ನಲಾಗಿದೆ. … Continued

ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಮೀನುಗಾರರು ನಾಪತ್ತೆಯಾಗಿರುವ ಘಟನೆ … Continued

62 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಜೀವಂತವಾಗಿ ಪತ್ತೆ…!

ಗಮನಾರ್ಹ ಘಟನೆಯೊಂದರಲ್ಲಿ, ಆರು ದಶಕಗಳಿಗೂ ಹೆಚ್ಚು ಕಾಲ ಕಾಣೆಯಾಗಿದ್ದ ವಿಸ್ಕಾನ್ಸಿನ್‌ನ ಮಹಿಳೆಯೊಬ್ಬರು “ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗ 82 ವರ್ಷದ ಆಡ್ರೆ ಬ್ಯಾಕೆಬರ್ಗ್ ಜುಲೈ 1962 ರಲ್ಲಿ 20 ನೇ ವಯಸ್ಸಿನಲ್ಲಿ ನಾಪತ್ತೆಯಾಗಿದ್ದರು, ಆದರೆ ಇತ್ತೀಚಿನ ತನಿಖೆಯಲ್ಲಿ ಅವರು ರಾಜ್ಯದಿಂದ ಹೊರಗೆ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸೌಕ್ ಕೌಂಟಿ ಶೆರಿಫ್ ಕಚೇರಿ, ಪತ್ರಿಕಾ … Continued