ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ ನಾಯಕ ಅಖಂಡ ಶ್ರೀನಿವಾಸಮೂರ್ತಿ

ಶಿರಸಿ : ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದು ವಿಧಾನಸಭೆ ಪ್ರವೇಶಿಸಿದ್ದ ಇವರು ಟಿಕೆಟ್‌ ಘೋಷಣೆಯಾಗದ ಕಾರಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಭಾನುವಾರ ರಾತ್ರಿ 8:30ರ ಸುಮಾರಿಗೆ ರಾಜೀನಾಮೆ ಪತ್ರ … Continued