ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್‌, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿ ಜಪ್ತಿ…!

ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಸೆ.6ರಂದು ನಡೆಸಿದ್ದ ದಾಳಿ ವೇಳೆ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್‌ಗಳು, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿಗಳು, 24 ಕೋಟಿ ಮೌಲ್ಯದ 1 ಕೆಜಿ ಚಿನ್ನಾಭರಣಗಳನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ED) ತಿಳಿಸಿದೆ. … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ವೀಡಿಯೊ…| ಧರ್ಮಸ್ಥಳ ಪ್ರಕರಣ | ತನಿಖೆ ಆರಂಭಿಕ ಹಂತದಲ್ಲೇ ಎಡವಿದೆ ; ತಮ್ಮದೇ ಸರ್ಕಾರ ಟೀಕಿಸಿದ ಕಾಂಗ್ರೆಸ್‌ ಶಾಸಕ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ… ಧರ್ಮಸ್ಥಳ ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿರುವುದಾಗಿ ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ … Continued

ಬಹುಕೋಟಿ ಬೆಟ್ಟಿಂಗ್ ದಂಧೆ ; ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ : ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನಾಭರಣಗಳು ವಶಕ್ಕೆ

ಬೆಂಗಳೂರು : ಜಾರಿ ನಿರ್ದೇಶನಾಲಯವು ಶನಿವಾರ ಭಾರತದಾದ್ಯಂತ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ನಂತರ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ‘ಪಪ್ಪಿ’ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಶಾಸಕರಿಗೆ ಬಂಪರ್ : ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ, ಅದರಲ್ಲಿಯೂ ಕಾಂಗ್ರೆಸ್‌ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಸುದ್ದಿ ನೀಡಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. … Continued

ಬೆಂಗಳೂರು | ರೌಡಿಶೀಟರ್​ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ ಸೇರಿ ಐವರ ವಿರುದ್ಧ ಎಫ್​ಐಆರ್​

ಬೆಂಗಳೂರು: ರೌಡಿಶೀಟರ್​​ ಶಿವಪ್ರಕಾಶ ಅಲಿಯಾಸ್​ ಬಿಕ್ಲು ಶಿವ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಸೇರಿ ಐವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರೌಡಿಶೀಟರ್ ಶಿವಕುಮಾರ ಅಲಿಯಾಸ್ … Continued

ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ಬಳ್ಳಾರಿ ಜಿಲ್ಲೆಯ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆಎಂದು ವರದಿಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆರಬಹುದು ಎಂದು ಭಾವಿಸಲಾಗಿದೆ. ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. … Continued