ಲೋಕಸಭೆ ಚುನಾವಣೆ ಸನಿಹದಲ್ಲಿ ಜೆಡಿಎಸ್‌ ಗೆ ಶಾಕ್‌ : ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿ ಹೊರಟ್ಟಿ ತಿಳಿಸಿದ್ದಾರೆ. ರಾಜೀನಾಮೆ … Continued

ಹಣ ಇದ್ರೆ ಮಾತ್ರ ಜೆಡಿಎಸ್‌ಲ್ಲಿ​ ಟಿಕೆಟ್, ಜೆಡಿಎಸ್​ ಅಭ್ಯರ್ಥಿಗೆ ಮತ ಕೇಳಲ್ಲ: ವರಿಷ್ಠರ ವಿರುದ್ಧ ಬಹಿರಂಗವಾಗೇ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ

ಮಂಡ್ಯ: ಮಂಡ್ಯ: ಹಣ ಇದ್ದರೆ ಮಾತ್ರ ಜೆಡಿಎಸ್‌ನಲ್ಲಿ ಟಿಕೆಟ್ ಸಿಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಜೆಡಿಎಸ್‌ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಕೀಲಾರ ಜಯರಾಂಗೆ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿರುವ ಮರಿತಿಬ್ಬೇಗೌಡ ಅವರು, ನಾನು ಜೆಡಿಎಸ್​ ಅಭ್ಯರ್ಥಿ ಪರವಾಗಿ ಮತ ಕೇಳುವುದಿಲ್ಲ ಎಂದು … Continued

ಶಿಕ್ಷಕ ಸಮುದಾಯದ ಧ್ವನಿ ಹೊರಟ್ಟಿಗೆ ಈಗ ಸಭಾಪತಿ ಗೌರವ

ನಿಸ್ವಾರ್ಥ ಸೇವೆಯಿಂದ ಜನಮೆಚ್ಚಿನ ನಾಯಕರಾಗಿರುವ ರಾಜಕಾರಣಿಗಳಲ್ಲಿ ಸಂಖ್ಯೆ ತುಂಬ ಕಡಿಮೆ. ಅಂತಹ ಮಹಾನ್ ಮುತ್ಸದ್ದಿಗಳಲ್ಲಿ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ಒಬ್ಬರು. ಕುದುರೆ ವ್ಯಾಪಾರದಿಂದ, ಕಲುಷಿತ ಸಾಗರವಾಗಿರುವ ಇಂದಿನ ಆಯಾರಾಂ-ಗಯಾರಾಂ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದಿನಿಂದಲೂ ಪಕ್ಷ ನಿಷ್ಠೆ ಹೊಂದಿ, ಜನಾನುರಾಗಿಯಾಗಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಿದ ಕೆಲವು ರಾಜಕಾರಣಿಗಳಲ್ಲಿ ಬಸವರಾಜ ಹೊರಟ್ಟಿ ಪ್ರಮುಖರಾಗಿದ್ದಾರೆ. … Continued