ವಿಡಿಯೋ ವೈರಲ್‌ | ದಿಢೀರನೆ ಬಂದು ನಾಯಿ ಮರಿ ಹೊತ್ತೊಯ್ದು ಮರ ಏರಿ ಕುಳಿತ ದೈತ್ಯ ಮಂಗ…! ಮುಂದೇನಾಯ್ತು ಗೊತ್ತೆ…?

ಪ್ರಕೃತಿಯಲ್ಲಿ ಪ್ರಾಣಿಗಳ ನಡುವಿನ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಕೊನೆಯಿಲ್ಲ ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಲ್ಲಿನ ರೇವಾಲ್ಸರ್ ಪ್ರದೇಶದಲ್ಲಿ ಕೋತಿಯೊಂದು ನಾಯಿ ಮರಿಯನ್ನು ಹೊತ್ತೊಯ್ದು ಮರದ ಮೇಲೆ ಕುಳಿತು ಪ್ರೀತಿಯಿಂದ ನೋಡಿಕೊಂಡ ದೃಶ್ಯ ಸ್ಥಳೀಯರ ಮನಗೆದ್ದಿದೆ. ಸ್ಥಳೀಯರು ನೀಡಿದ … Continued

ವಿಡಿಯೋ | ಭೀಕರ ಬೇಸಿಗೆಗೆ ತತ್ತರಿಸಿದ ವನ್ಯಜೀವಿಗಳು : ನೀರಿಗಾಗಿ ಸಾರಿಗೆ ಬಸ್ಸನ್ನೇ ತಡೆದು ನಿಲ್ಲಿಸಿದ ಕೋತಿಗಳ ಹಿಂಡು !

ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆದ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು, ತೀವ್ರ ಬೇಸಿಗೆಯ ಶಾಖವು ವನ್ಯಜೀವಿಗಳ ಮೇಲೆ ಬೀರುತ್ತಿರುವ ಭೀಕರ ಪರಿಣಾಮವನ್ನು ಕಣ್ಣಿಗೆ ಕಟ್ಟುವಂತೆ ಮಾಡಿದೆ. ಯವತ್ಮಾಲ್ ಜಿಲ್ಲೆಯ ಪುಸಾದ್ ಬಳಿಯ ಖಂಡಾಲಾ ಘಾಟ್‌ನಲ್ಲಿ, ಬಾಯಾರಿಕೆಯಿಂದ ತತ್ತರಿಸಿದ್ದ ಮಂಗಗಳು ನೀರಿಗಾಗಿ ಚಲಿಸುತ್ತಿದ್ದ ರಾಜ್ಯ ಸಾರಿಗೆ ಬಸ್ಸನ್ನು ತಡೆದು ನಿಲ್ಲಿಸಿದ ಘಟನೆ ಪ್ರಯಾಣಿಕರನ್ನು ಭಾವುಕರನ್ನಾಗಿಸಿದೆ. ಬುಧವಾರ ಮಧ್ಯಾಹ್ನ ಸುಮಾರು … Continued

ವಿಡಿಯೋ..| 3 ತಿಂಗಳ ಮಗುವನ್ನು 2 ತಾಸು ಒತ್ತೆ ಇರಿಸಿಕೊಂಡ ಮಂಗ : ಇದರ ಹಿಂದಿನ ಕಾರಣ ತಿಳಿದರೆ ಕಣ್ಣಾಲಿಗಳು ಒದ್ದೆಯಾಗುತ್ತವೆ…!

ಮನೆಯೊಳಗೆ ಇದ್ದ ಹಸುಗೂಸು, ಒಳಗೆ ನುಗ್ಗಿದ ಕೋತಿಯ ಕಪಿಮುಷ್ಠಿಯಲ್ಲಿ ಸಿಲುಕಿದರೆ ಹೇಗಿರುತ್ತದೆ? ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ಈ ಘಟನೆ ಕೇವಲ ಸುದ್ದಿಯಲ್ಲ, ಅದು ಆಶ್ಚರ್ಯಚಕಿತಗೊಳಿಸುವ ಮತ್ತು ಆತಂಕಕ್ಕೀಡು ಮಾಡುವ ಘಟನೆಯೊಂದು ನಡೆದಿದೆ. ಮಂಗವೊಂದು ಮನೆಯೊಳಗೆ ನುಗ್ಗಿ ಕೇವಲ ಮೂರು ತಿಂಗಳ ಹಸುಗೂಸಿನ ಬಳಿ ಸುಮಾರು ಎರಡು ಗಂಟೆಗಳ ಕಾಲ ಕಾಲ ಕಳೆದಿದ್ದು, ಇಡೀ ನಗರದಲ್ಲಿ … Continued

ವಿಡಿಯೊ | ಸಭೆಯ ನಡುವೆಯೇ ಎಂಟ್ರಿ ಕೊಟ್ಟು ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕುಳಿತ ಮಂಗ

ಉತ್ತರ ಪ್ರದೇಶದ  ಬಾಗಪತ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಪರೂಪದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಧಿಕಾರಿಯೊಬ್ಬರ ಪ್ರಾಣಿ ಪ್ರೇಮ ಮತ್ತು ಶಾಂತ ಸ್ವಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಗಪತ್ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ‘ರೈತರ ದಿನಾಚರಣೆ’ ಅಂಗವಾಗಿ ಜಿಲ್ಲಾಧಿಕಾರಿಗಳು ಹಾಗೂ ರೈತರ ನಡುವೆ ಮಹತ್ವದ ಸಭೆ ನಡೆಯುತ್ತಿತ್ತು. ಜಿಲ್ಲಾಧಿಕಾರಿ ಅಸ್ಮಿತಾ ಲಾಲ್ ಮತ್ತು … Continued

ವಿಡಿಯೋ : ಚನ್ನಪಟ್ಟಣ : ವೃದ್ಧೆ ಮೃತದೇಹದ ಮೇಲೆ ಮಲಗಿ ದುಃಖಿಸಿದ ಮಂಗ ; ಅಲ್ಲಿದ್ದವರ ಕಣ್ಣಲ್ಲಿ ನೀರು

ರಾಮನಗರ : ತನ್ನನ್ನು ಪ್ರೀತಿಯಿಂದ ಸಲಹುತ್ತಿದ್ದ ವೃದ್ಧೆಯೊಬ್ಬರ ಅಗಲಿಕೆಗೆ ಮಂಗವೊಂದು ಮರುಗಿದ ರೀತಿಗೆ ಗ್ರಾಮಸ್ಥರು ಕಣ್ಣಿರಾಗಿದ್ದಾರೆ. ತನಗೆ ಪ್ರತಿದಿನ ಹಣ್ಣುಹಂಪಲು ನೀಡುತ್ತಿದ್ದ ವೃದ್ಧೆಯೊಬ್ಬರ ಸಾವಿಗೆ ಮಂಗ ದುಃಖಿಸಿದೆ. ಹಾಗೂ ತನ್ನ ಸಲಹುತ್ತಿದ್ದ ಅಜ್ಜಿಯ ಮೃತದೇಹದ ಮೇಲೆ ಮಲಗಿ ದುಃಖಿಸಿದ ಅಸಾಮಾನ್ಯ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. … Continued

ತಾಯಿಯ ಕೈಯಲ್ಲಿದ್ದ 20 ದಿನದ ಶಿಶುವನ್ನು ಹೊತ್ತೊಯ್ದು ಬಾವಿಗೆ ಎಸೆದ ಮಂಗ ; ಮಗುವನ್ನು ಕಾಪಾಡಿದ ಡೈಪರ್‌…!

ರಾಯ್ಪುರ: ಛತ್ತೀಸ್‌ಗಢದ ಜಾಂಜ್‌ಗೀರ್-ಚಂಪಾ ಜಿಲ್ಲೆಯ ಸೆವ್ನಿ ಗ್ರಾಮದಲ್ಲಿ ಮೈಮನ ಜುಂ ಎನಿಸುವ ಘಟನೆಯೊಂದು ನಡೆದಿದೆ. ಮಂಗವೊಂದು ತಾಯಿಯ ಮಡಿಲಲ್ಲಿದ್ದ 20 ದಿನದ ಹಸುಗೂಸನ್ನು ಹೊತ್ತೊಯ್ದು ಬಾವಿಗೆ ಎಸೆದಿತ್ತು,  ಗ್ರಾಮಸ್ಥರ ಸಮಯಪ್ರಜ್ಞೆ ಮತ್ತು ನರ್ಸ್ ಒಬ್ಬರ ಸಮಯೋಚಿತ ಚಿಕಿತ್ಸೆಯಿಂದ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದೆ.  ಬುಧವಾರ ಸುನೀತಾ ರಾಥೋಡ ಎಂಬ ಮಹಿಳೆ ತಮ್ಮ 20 ದಿನದ ಹೆಣ್ಣು … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued

ವೀಡಿಯೊ..| ಕೊಡೈಕೆನಾಲ್​​​ನಲ್ಲಿ ಕರ್ನಾಟಕದ ಪ್ರವಾಸಿಗರ ₹500 ನೋಟುಗಳ ಬಂಡಲ್ ಗಳನ್ನೇ ಕದ್ದೊಯ್ದ ಕೋತಿ ಮುಂದೆ ಮಾಡಿದ್ದೇನು ಗೊತ್ತೆ..?

ಕೊಡೈಕೆನಾಲ್: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡೈಕೆನಾಲ್‌ನ ಗುಣ ಗುಹೆಗಳ ಬಳಿ ವ್ಯಕ್ತಿಯೊಬ್ಬರಿಂದ 500 ರೂಪಾಯಿ ನೋಟುಗಳ ಬಂಡಲ್ ಅನ್ನು ಕೋತಿಯೊಂದು ಕದ್ದೊಯ್ದಿದೆ. ನಂತರ ಮರದ ಮೇಲೆ ಏರಿದ ಕೋತಿ ಅಲ್ಲಿಂದ ನೋಟುಗಳನ್ನು ಕೆಳಕ್ಕೆ ಎಸೆದಿದೆ. 500 ರೂಪಾಯಿ ನೋಟುಗಳ ಅನೇಕ ಬಂಡಲ್‌ಗಳನ್ನು ಒಯ್ದಿದ್ದ ಕರ್ನಾಟಕದ ಪ್ರವಾಸಿಗರಿಂದ ಮಂಗ ಹಣವನ್ನು ಕಸಿದುಕೊಂಡಿದೆ. ಮಂಗ ಅನಿರೀಕ್ಷಿತವಾಗಿ ಪ್ರತ್ಯಕ್ಷವಾಯಿತು. … Continued

ಅದ್ಭುತ ವೀಡಿಯೊ…| ಔಷಧದ ಅಂಗಡಿ ಹುಡುಕಿಕೊಂಡು ಬಂದು ತನ್ನ ಗಾಯಕ್ಕೆ ಬ್ಯಾಂಡೇಜ್‌ ಹಾಕಿಸಿಕೊಂಡ ಮಂಗ….!

ಅಪರೂಪ ಮತ್ತು ಹೃದಯಸ್ಪರ್ಶಿ ಘಟನೆಯೊಂದು ನಡೆದಿದ್ದು, ಗಾಯಗೊಂಡ ಕೋತಿ ಅಗತ್ಯ ಆರೈಕೆ ಮಾಡಿಸಿಕೊಳ್ಳಲು ಮೆಡಿಕಲ್ ಶಾಪ್ ಗೆ ಬಂದಿದೆ. ಈ ಘಟನೆ ಈ ತಿಂಗಳು ಬಾಂಗ್ಲಾದೇಶದ ಮೆಹರ್‌ಪುರ ಪಟ್ಟಣದಲ್ಲಿ ನಡೆದಿದ್ದು, ಆ ಪ್ರದೇಶದಲ್ಲಿನ ಅಲ್ಹೇರಾ ಫಾರ್ಮಸಿಯಲ್ಲಿ ಮಂಗ ತನ್ನ ಗಾಯಕ್ಕೆ ಸೂಕ್ತ ಬ್ಯಾಂಡೇಜ್‌ ಹಾಕಿಸಿಕೊಂಡ ಆರೈಕೆ ಮಾಡಿಸಿಕೊಂಡಿದೆ. ವೀಡಿಯೋದಲ್ಲಿ ಸೆರೆಯಾಗಿರುವ ಈ ಅಸಾಮಾನ್ಯ ದೃಶ್ಯ ಈಗ … Continued

ವೀಡಿಯೊ |”ಮಂಗಗಳು ಕೂಡ ಅದನ್ನು ಮಾಡಲ್ಲ…”: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಸೋತ ಪಾಕ್‌ ತಂಡದ ಬಗ್ಗೆ ವಾಸಿಂ ಅಕ್ರಂ ಹೀಗೇಕಂದ್ರು..?

ಪಾಕಿಸ್ತಾನ ಕೋಪಗೊಂಡಿದೆ. ಪಾಕಿಸ್ತಾನ ಹೊಗೆಯಾಡುತ್ತಿದೆ. ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನವು ಸಾಂಪ್ರದಾಯಿಕ ವೈರಿ ಭಾರತದ ವಿರುದ್ಧದ ಹೀನಾಯವಾಗಿ ಸೋತಿದ್ದು, ಇದಾದದ ಒಂದು ದಿನದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಗುಂಪು ಹಂತದಲ್ಲೇ ಟೂರ್ನಿಯಿಂದಲೇ ಹೊರಬಿದ್ದಿದೆ. ಕಳೆದ ವರ್ಷಗಳಿಂದ ಪಾಕಿಸ್ತಾನವು ಅನಿರೀಕ್ಷಿತವಾದ ತಂಡವಾಗಿತ್ತು. ಮತ್ತು ಅದು ಅವರ ಕ್ರಿಕೆಟ್ ಬ್ರ್ಯಾಂಡ್ … Continued