ಸಂಡೂರಿನಲ್ಲಿ ಸಿಕ್ಕಿಬಿದ್ದ ʼಬ್ಲ್ಯಾಕ್ ಮೇಲ್ʼ ಕಾಮುಕ ; ಈತನ ಮೊಬೈಲ್‌ ನಲ್ಲಿತ್ತು 13500ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೋ, ವೀಡಿಯೊಗಳು !

ಮುಂಬೈ ಪೊಲೀಸರು ಎರಡು ವರ್ಷಗಳ ಕಾಲ ಹುಡುಕಾಟ ನಡೆಸಿದ ನಂತರ ಸೈಬರ್ ಲೈಂಗಿಕ ಅಪರಾಧಗಳಿಗೆ ಬೇಕಾಗಿದ್ದ 25 ವರ್ಷದ ವ್ಯಕ್ತಿಯನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಶುಭಂ ಕುಮಾರ ಮನೋಜಪ್ರಸಾದ ಸಿಂಗ್ ಎಂಬಾತನನ್ನು ಸಂಡೂರು ಪಟ್ಟಣದಲ್ಲಿ ಪತ್ತೆಹಚ್ಚಲಾಗಿದ್ದು, ಅಲ್ಲಿ ಈತ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಮುಂಬೈನ ವಿದ್ಯಾರ್ಥಿನಿಯೊಬ್ಬರು ನೀಡಿದ … Continued

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಸೈಫ್‌ ಅಲಿ ಖಾನ್‌ ಇರಿತ ಪ್ರಕರಣ : ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಕೆಲಸ ಹೋಯ್ತು, ಮದುವೆಯೇ ಮುರಿದುಬಿತ್ತು….!

ಮುಂಬೈ : ಜನವರಿ 16ರಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚಾಕು ಇರಿತದ ಪ್ರಕರಣದಲ್ಲಿ ಛತ್ತೀಸ್‌ಗಢದ ದುರ್ಗ್‌ನಲ್ಲಿ ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸ್ಪಟ್ಟ ವ್ಯಕ್ತಿಯ ಜೀವನವೇ ಈಗ ಬರ್ಬಾದ್‌ ಆಗಿದೆ. ಪೊಲೀಸರು ತಪ್ಪಾಗಿ ಆತನನ್ನು ಬಂಧಿಸಿದ್ದರಿಂದ ಆತನ ಕೆಲಸವೂ ಹೋಗಿದೆ, ಜೊತೆಗೆ ಆತನ ಮದುವೆ ನಿಶ್ಚಿತಾರ್ಥವೂ ಮುರಿದುಬಿದ್ದಿದೆ ಎಂದು ವರದಿಯಾಗಿದೆ. … Continued

ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!

ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued

ಸೈಫ್ ಅಲಿ ಖಾನ್‌ ಗೆ ಚಾಕು ಇರಿತ ಪ್ರಕರಣ : ಛತ್ತೀಸ್‌ಗಢದಲ್ಲಿ ಶಂಕಿತನ ಬಂಧನ ; ವಿಚಾರಣೆ ನಡೆಸಲಿರುವ ಮುಂಬೈ ಪೊಲೀಸರು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮುಂಬೈನ ಮನೆಯೊಳಗೆ ಇರಿತಕ್ಕೆ ಒಳಗಾದ ಘಟನೆಗೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯು ಘಟನೆಯಲ್ಲಿ ಭಾಗಿಯಾಗಿರುದ್ದಾನೆಯೇ ಅಥವಾ ಈತ ಬೇರೆ ವ್ಯಕ್ತಿಯೇ ಎಂಬ ಬಗ್ಗೆ ಮುಂಬೈ ಪೊಲೀಸರು ವಿಚಾರಣೆ ನಡೆಸಿ ಖಚಿತಪಡಿಸಲಿದ್ದಾರೆ. 54 ವರ್ಷದ ಸೈಫ್ ಅಲಿ ಖಾನ್ ಅವರ ಕುತ್ತಿಗೆ ಮತ್ತು … Continued

ಸೈಫ್ ಅಲಿ ಖಾನಗೆ ಚಾಕು ಇರಿತ : ಮಧ್ಯಪ್ರದೇಶದಲ್ಲಿ ಶಂಕಿತನೊಬ್ಬನ ಬಂಧನ

ಮುಂಬೈ : ಬಾಲಿವುಡ್‌ ನಟ ಸೈಫ್‌ ಆಲಿ ಖಾನ್‌ (Saif Ali Khan) ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಶಂಕಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣದ ಶಂಕಿತನನ್ನು ರೈಲ್ವೆ ಸಂರಕ್ಷಣಾ ಪಡೆ ಮಧ್ಯ ಪ್ರದೇಶದಲ್ಲಿ ಬಂಧಿಸಿದೆ. ವರದಿ ಪ್ರಕಾರ, ಸೈಫ್‌ … Continued

ಸೈಫ್ ಅಲಿ ಖಾನ್ ಪ್ರಕರಣ | ಈವರೆಗೆ ಯಾರನ್ನೂ ಬಂಧಿಸಿಲ್ಲ; ಪೊಲೀಸರ ಸ್ಪಷ್ಟನೆ

ಮುಂಬೈ: ಶುಕ್ರವಾರ ಮುಂಬೈನಲ್ಲಿ ಬಂಧನಕ್ಕೊಳಗಾದ ವ್ಯಕ್ತಿಯೊಬ್ಬ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ನಡೆದ ದಾಳಿಗೆ ಸಂಬಂಧ ಹೊಂದಿದ್ದಾನೆ ಎಂದು ಮಧ್ಯಮಗಳಲ್ಲಿ ವರದಿಯಾದ ನಂತರ ಮುಂಬೈ ಪೊಲೀಸರು ಅದು ನಿಜವಲ್ಲ, ಈ ವ್ಯಕ್ತಿಗೂ ಸೈಫ್‌ ಅಲಿ ಖಾನ್‌ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ, ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ವಿಚಾರಣೆಗಾಗಿ ಬಾಂದ್ರಾ … Continued

ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued

ರಾಜೀನಾಮೆ ನೀಡಿ ಇಲ್ಲವೇ ಬಾಬಾ ಸಿದ್ದಿಕಿಯಂತೆ ಕೊಲ್ಲುತ್ತೇನೆ ; ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ

ಮುಂಬೈ : ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು … Continued