ಬಾಲಿವುಡ್‌ ನಟ ಜೂನಿಯರ್ ಮೆಹಮೂದ್ ನಿಧನ

ಮುಂಬೈ: ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಹಿರಿಯ ನಟ ಜೂನಿಯರ್ ಮೆಹಮೂದ್ ಅವರು ಗುರುವಾರ ರಾತ್ರಿ ಮುಂಬೈನಲ್ಲಿ ತಮ್ಮ 67 ನೇ ವಯಸ್ಸಿನಲ್ಲಿ ನಿಧನರಾರಾಗಿದ್ದಾರೆ. ಗುರುವಾರ ರಾತ್ರಿ ಅವರ ಸ್ಥಿತಿ ಹದಗೆಟ್ಟಿತು. ಅವರು ಮುಂಬೈನ ತಮ್ಮ ಮನೆಯಲ್ಲಿ ನಿಧನರಾದರು. ಅವರು ತಮ್ಮ ಐದು ದಶಕಗಳ ವೃತ್ತಿಜೀವನದಲ್ಲಿ 250 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಜೂನಿಯರ್ ಮೆಹಮೂದ್ ಅವರ … Continued

1900ರ ನಂತರ ಇದೇ ಮೊದಲ ಬಾರಿಗೆ 2028ರ ಒಲಿಂಪಿಕ್ ಗೇಮ್ಸ್ ಗೆ ಕ್ರಿಕೆಟ್ ಸೇರ್ಪಡೆ

ಮುಂಬೈ: ಕ್ರಿಕೆಟ್ ಮತ್ತೆ ಒಲಿಂಪಿಕ್ ಕ್ರೀಡೆಯಾಗಿದೆ. ಫ್ಲ್ಯಾಗ್ ಫುಟ್ಬಾಲ್ ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಕ್ರಿಕೆಟ್ , ಬೇಸ್‌ಬಾಲ್-ಸಾಫ್ಟ್‌ಬಾಲ್, ಲ್ಯಾಕ್ರೋಸ್ ಮತ್ತು ಸ್ಕ್ವ್ಯಾಷ್‌ ಸೇರಿದಂತೆ ಐದು ಆಟಗಳನ್ನು ಸೋಮವಾರ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು 2028 ರ ಲಾಸ್ ಏಂಜಲೀಸ್ ಒಲಿಂಪಿಕ್ ಗೇಮ್ಸ್‌ಗೆ ಸೇರಿಸಿದೆ. ಒಂದು ವಾರದ ಹಿಂದೆ ಲಾಸ್ ಏಂಜಲೀಸ್ ಅಧಿಕಾರಿಗಳು ಪ್ರಸ್ತಾಪಿಸಿದ ಮತ್ತು ಐಒಸಿ ಕಾರ್ಯಕಾರಿ … Continued

ಮುಂಬೈಯಲ್ಲಿ ಘೋರ ಅಗ್ನಿ ದುರಂತ: 7 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ | ವೀಡಿಯೊ

ಮುಂಬೈ: ಶುಕ್ರವಾರ ಮುಂಜಾನೆ ಮುಂಬೈನ ಗೋರೆಗಾಂವ ಪಶ್ಚಿಮದ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ. ಗೋರೆಗಾಂವ್ ವೆಸ್ಟ್‌ನ ಆಜಾದ್ ನಗರ ಪ್ರದೇಶದಲ್ಲಿರುವ ಜಯ ಭವಾನಿ ಕಟ್ಟಡದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) … Continued

ಜಿಎಸ್‌ಬಿ ಸೇವಾ ಮಂಡಳದ ಗಣೇಶ ಅತ್ಯಂತ ಶ್ರೀಮಂತ ….: 69 ಕೆ.ಜಿ. ಚಿನ್ನ, 336 ಕೆ.ಜಿ. ಬೆಳ್ಳಿಯಿಂದ ಗಣೇಶನಿಗೆ ಅಲಂಕಾರ, ಈ ವರ್ಷದ ವಿಮೆ ಮೊತ್ತ 360 ಕೋಟಿ ರೂ. | ವೀಕ್ಷಿಸಿ

ಮುಂಬೈ: ಮುಂಬೈನ ಜನಪ್ರಿಯ ಗಣೇಶ ಮಂಡಳದಲ್ಲಿ ಒಂದಾದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸೇವಾ ಮಂಡಲವು ಹಬ್ಬದ ಪೂರ್ವಭಾವಿಯಾಗಿ ಸೋಮವಾರ 69 ಕೆಜಿ ಚಿನ್ನ ಮತ್ತು 336 ಕೆಜಿ ಬೆಳ್ಳಿಯಿಂದ ಅಲಂಕರಿಸಲ್ಪಟ್ಟ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿದೆ. ಈ ವರ್ಷ ಗಣೇಶ ಚತುರ್ಥಿಗೆ ದೇಣಿಗೆಯಾಗಿ 36 ಕೆಜಿ ಬೆಳ್ಳಿ ಹಾಗೂ 250 ಗ್ರಾಂ ಚಿನ್ನದ ಪೆಂಡೆಂಟ್ ಸ್ವೀಕರಿಸಿದ್ದೇವೆ … Continued

ಜಾಹೀರಾತು ಮೂಲಕ ಆನ್​ಲೈನ್ ಗೇಮಿಂಗ್​ ಪ್ರಚಾರ ; ಸಚಿನ್‌ ತೆಂಡೂಲ್ಕರ್ ನಿವಾಸದ ಬೃಹತ್ ಪ್ರತಿಭಟನೆ

ಮುಂಬೈ: ಆನ್​ಲೈನ್​​ ಗೇಮಿಂಗ್ ಆ್ಯಪ್​​ಗಳ ಕುರಿತ ಜಾಹೀರಾತಿಯನಲ್ಲಿ ನಟಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರದ ಆಡಳಿತರೂಢ ಸರ್ಕಾರದ ಮೈತ್ರಿಪಕ್ಷ ಪ್ರಹಾರ ಜನಶಕ್ತಿ ಪಕ್ಷದ (PJP) ಶಾಸಕ ಬಚ್ಚು ಕಡು ಮತ್ತು ಅವರ ಬೆಂಬಲಿಗರು ಗುರುವಾರ (ಆಗಸ್ಟ್​ 31) ಬಾಂದ್ರಾದಲ್ಲಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಯುವಕರನ್ನು ಹಾಳು ಮಾಡುವ ಆನ್‌ಲೈನ್ … Continued

ಮ್ಯೂಸಿಕ್ ಕಂಪನಿ ಸಿಇಒ ಕಿಡ್ನಾಪ್ ಮಾಡಿದ ಶಿವಸೇನಾ ಶಾಸಕನ ಪುತ್ರನ ವಿರುದ್ಧ ಎಫ್‌ ಐಆರ್ | ವೀಡಿಯೊ

ಮುಂಬೈ : ಬುಧವಾರ (ಆಗಸ್ಟ್‌ 9) ಗೋರೆಗಾಂವ್ ಪೂರ್ವ ಪ್ರದೇಶದಿಂದ ಸುಲಿಗೆ ಮಾಡಲು ಉದ್ಯಮಿ ರಾಜಕುಮಾರ ಸಿಂಗ್ ಅವರನ್ನು ಅಪಹರಿಸಿದ ಆರೋಪದಲ್ಲಿ ಶಿವಸೇನಾ (ಶಿಂಧೆ ಬಣ) ಶಾಸಕ ಪ್ರಕಾಶ ಸುರ್ವೆ ಅವರ ಪುತ್ರ ರಾಜ್ ಸುರ್ವೆ ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ವನರಾಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. … Continued

ಕ್ವಿಟ್ ಇಂಡಿಯಾ ದಿನದ ಮೆರವಣಿಗೆಗೆ ಮುಂಚಿತವಾಗಿ ಮಹಾತ್ಮಾ ಗಾಂಧಿ ಮರಿಮೊಮ್ಮಗನ ಬಂಧನ, ಬಿಡುಗಡೆ

ಮುಂಬೈ: ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ಚಳುವಳಿಯ ವಾರ್ಷಿಕೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದರು. ಬಳಿಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಯಿತು. ಅವರು ಮೆರವಣಿಗೆಯ ಸ್ಥಳವಾದ ಆಗಸ್ಟ್ ಕ್ರಾಂತಿ ಮೈದಾನಕ್ಕೆ ಪ್ರಯಾಣಿಸುತ್ತಿದ್ದಾಗ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಅವರನ್ನು ಬಂಧಿಸಲಾಯಿತು. ಆಗಸ್ಟ್ 1942 ರಲ್ಲಿ ಮಹಾತ್ಮಾ ಗಾಂಧಿಯವರ … Continued

ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲ ತಾಪದಿಂದ 11 ಮಂದಿ ಸಾವು

ಮುಂಬೈ: ಭಾನುವಾರ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಯಲಿನಲ್ಲಿ ಕುಳಿತಿದ್ದ 11 ಮಂದಿ ಬಿಸಿಲ ತಾಪದಿಂದ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಸುಮಾರು 50 ಜನರು ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ, ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು … Continued

ಮುಂಬೈ: ಬಾಟಲಿಯಲ್ಲಿ ಪಟಾಕಿ ಸಿಡಿಸಲು ಆಕ್ಷೇಪಿಸಿದ್ದಕ್ಕೆ ವ್ಯಕ್ತಿಯನ್ನು ಇರಿದು ಕೊಂದ 15 ವರ್ಷದ ಬಾಲಕ …!

ಮುಂಬೈ: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದು ಬೇಡ ಎಂದು  ಆಕ್ಷೇಪಿಸಿದ ವ್ಯಕ್ತಿಯೊಬ್ಬನನ್ನು ಬಾಲಕ ಚಾಕುವಿನಿಂದ  ಇರಿದು ಕೊಂದಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಆರೋಪಿಗಳಲ್ಲಿ 14 ಮತ್ತು 15 ವರ್ಷದ ಇಬ್ಬರನ್ನು ಬಂಧಿಸಲಾಗಿದ್ದು, 12 ವರ್ಷದ ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು 21 ವರ್ಷದ ಸುನಿಲ್ ನಾಯ್ಡು ಎಂದು ಗುರುತಿಸಲಾಗಿದೆ. ಪೊಲೀಸರ … Continued

ಹಿರಿಯ ನಟ ಅರುಣ್ ಬಾಲಿ ಮುಂಬೈನಲ್ಲಿ ನಿಧನ

ಮುಂಬೈ: ಬಾಲಿವುಡ್‌ನ ಹಲವು ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಎಲ್ಲರನ್ನೂ ಸೆಳೆದಿದ್ದ ಹಿರಿಯ ನಟ ಅರುಣ ಬಾಲಿ ಇನ್ನಿಲ್ಲ. ಅವರು ಮುಂಬೈನಲ್ಲಿ 79 ನೇ ವಯಸ್ಸಿನಲ್ಲಿ ನಿಧನರಾದರು. ಕೆಲ ಸಮಯದಿಂದ ಅರುಣ ಬಾಲಿ ಅವರು ಅಪರೂಪದ ನರ ಕಾಯಿಲೆಯಾದ ಮೈಸ್ತೇನಿಯಾ ಗ್ರ್ಯಾವಿಸ್‌ನಿಂದ ಬಳಲುತ್ತಿದ್ದರು. ಈ ವರ್ಷದ ಆರಂಭದಲ್ಲಿ ನಟನನ್ನು ಮುಂಬೈನ ಹಿರ್ನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರುಣ್ … Continued