ಮಂಗಳೂರು : ಮೊಬೈಲ್‌ ಫೋನ್‌ ವಿಚಾರಕ್ಕೆ ಜಗಳ ; ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ಮಂಗಳೂರು : ಮೊಬೈಲ್‌ ಫೋನ್‌ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ತಮ್ಮ ತನ್ನ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಸಮೀಪ ಭಾನುವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 40 ವರ್ಷದ ಅಡಿವಪ್ಪ ಎಂದು ಗುರುತಿಸಲಾಗಿದ್ದು, ಆರೋಪಿ 36 ವರ್ಷದ ತಮ್ಮ ರಾಜು ಎಂದು ಪೊಲೀಸರು … Continued

ಧಾರವಾಡ : ರೈಲಿನ ಬೋಗಿಯಲ್ಲಿ ಸೀಟ್ ಕೆಳಗಡೆ ಮಹಿಳೆಯ ಶವ ಪತ್ತೆ

ಧಾರವಾಡ: ಮಹಾರಾಷ್ಟ್ರದ ಸೊಲ್ಲಾಪುರದಿಂದ ಧಾರವಾಡಕ್ಕೆ ಭಾನುವಾರ ಬಂದ ರೈಲಿನ ಮಹಿಳಾ ಬೋಗಿಯ ಆಸನದ ಕೆಳಗೆ ಅಡಗಿಸಿಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ರೈಲ್ವೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆಯ ವಯಸ್ಸು ಸುಮಾರು 30ರಿಂದ 35 ವರ್ಷಗಳ ನಡುವೆ ಇರಬಹುದೆಂದು ಅಂದಾಜಿಸಲಾಗಿದೆ. ರೈಲು ಬೆಳಿಗ್ಗೆ ಸುಮಾರು 9:30ಕ್ಕೆ ಧಾರವಾಡ … Continued

ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ಹೃದಯಾಘಾತದಿಂದ ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪತಿ ಅರೆಸ್ಟ್‌

ಹೊನ್ನಾವರ: ಹೆಂಡತಿಯನ್ನು ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ್ದ ಗಂಡನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಠಾಣೆ ವ್ಯಾಪ್ತಿಯ ದೊಡ್ಡಗುಂದೆಂಬಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ದೊಡ್ಡಗುಂದ ಗ್ರಾಮದ ಗಣಪತಿ ನಾಯ್ಕ ಬಂಧಿತ ಆರೋಪಿಯಾಗಿದ್ದು, . ಆತನ ಪತ್ನಿ ಮಂಗಲಾ ನಾಯ್ಕ (28) ಕೊಲೆಯಾದ … Continued

ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued

27 ಬಾರಿ ಇರಿತ..‘ಬಾಬು’ ಎಂಬ ಕೊನೆಯ ಪದ: ಪ್ರಾಂಶುಪಾಲೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಇಬ್ಬರು ವಿದ್ಯಾರ್ಥಿಗಳ ಬಂಧನ

ಹೈದರಾಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ 48 ವರ್ಷದ ಶಾಲಾ ಪ್ರಾಂಶುಪಾಲೆ ಹಾಗೂ ನಿರ್ದೇಶಕಿಯ ಭೀಕರ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಹಣ ಮತ್ತು ಐಷಾರಾಮಿ ಜೀವನ ನಡೆಸುವ ಆಸೆಯಿಂದ ಕೊಲೆಗೆ ಸಂಚು ರೂಪಿಸಿದ್ದರೆನ್ನಲಾದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಕೊಂಡಮಲ್ಲೇಪಲ್ಲಿಯ ನಾಗಾರ್ಜುನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಹಾಗೂ ನಿರ್ದೇಶಕಿ ಕಲ್ಲು ರೂಪಾ ರೆಡ್ಡಿ … Continued

ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿ

ಬೆಂಗಳೂರು : ನಗರದ ಚಿಕ್ಕಬಾಣಾವರದಲ್ಲಿ ಗಂಡ ಹಾಗೂ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲಗಿದ್ದಲ್ಲೇ ಪತಿ ಮತ್ತು ನಾಲ್ಕು ವರ್ಷದ ಮುಗ್ಧ ಕಂದಮ್ಮನ ಜೀವ ತೆಗೆದ ಪತ್ನಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆರೋಪಿಗಳನ್ನು ಹರಿಣಿ ಮತ್ತು ವಿನಯಕುಮಾರ ಎಂದು ಗುರುತಿಸಲಾಗಿದೆ. … Continued

ಬೆಂಗಳೂರು : ಟೆಕ್ಕಿ ಪತ್ನಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್‌ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವೆ ನಡೆದ ಜಗಳವು ಹಿಂಸಾತ್ಮಕ ರೂಪ ಪಡೆದುಕೊಂಡು, ಬೆಳಗಾಗುವಷ್ಟರಲ್ಲಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸಿವಿಲ್ ಎಂಜಿನಿಯರ್‌ ಆಗಿದ್ದ ಸುಮಂತ್ ಜೈನ್ ಹಾಗೂ ಅವರ ಪತ್ನಿ, ಸಾಫ್ಟ್‌ವೇರ್ ಎಂಜಿನಿಯರ್‌ ಆಗಿದ್ದ ಪದ್ಮಾವತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, … Continued

ಬೆಳಗಾವಿ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆ ; ಆರು ತಿಂಗಳ ಬಳಿಕ ಪತ್ನಿ, ಪ್ರಿಯಕರ ಬಂಧನ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ. ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ … Continued

ಕಾಂಗ್ರೆಸ್‌ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued

ಉಡುಪಿ: ಕಾಂಗ್ರೆಸ್‌ ಮುಖಂಡ- ಉದ್ಯಮಿ ಡೇವಿಡ್ ಡಿ’ಸೋಜಾಗೆ ಗುಂಡಿಕ್ಕಿ ಹತ್ಯೆ

ಉಡುಪಿ : ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿ’ಸೋಜಾ (ಡೇವಿಡ್ ಡಾಲಿಯಾ) ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು  ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯಲ್ಲಿ ಮುದರಂಗಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ … Continued