ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್‌ ನನ್ನು ಹುಬ್ಬಳ್ಳಿಯ ನ್ಯಾಯಾಲಯವು ಬುಧವಾರ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ ನಾಯ್ಕ ನಡೆಸಿದರು. ನಂತರ ತನಿಖಾ ತಂಡದ … Continued

ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಮಗನೇ ಸುಪಾರಿ ಕೊಟ್ಟಿದ್ದ…! 8 ಮಂದಿ ಬಂಧನ

ಗದಗ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಾಲ್ವರು ಅಮಾಯಕರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ತಂದೆ-ತಾಯಿ ಕೊಲೆಗೆ ಸುಪಾರಿ ಕೊಟ್ಟಿದ್ದ ಹಿರಿಯ ಮಗ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಗದಗ ಎಸ್​​ಪಿ ಬಿ.ಎಸ್. ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಘಟನೆ ನಡೆದ 48 ಗಂಟೆಗಳ ಒಳಗಾಗಿಯೇ … Continued

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗ : ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಲಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರಸಭೆ  ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ … Continued

ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ಮನೆಯಲ್ಲಿ ಮಗಳು-ಆಕೆಯ ಪ್ರಿಯಕರನನ್ನು ಒಟ್ಟಿಗೆ ನೋಡಿದ ನಂತರ ಮಗಳನ್ನೇ ಕೊಂದ ತಾಯಿ…!

ಹೈದರಾಬಾದ್‌ : ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ತನ್ನ 19 ವರ್ಷದ ಮಗಳನ್ನು ಆಕೆಯ ಪ್ರಿಯಕರನೊಂದಿಗೆ ತಮ್ಮ ಮನೆಯಲ್ಲಿ ಒಟ್ಟಾಗಿ ಇರುವುದನ್ನು ಕಂಡ ನಂತರ ಮಗಳನ್ನೇ ಹತ್ಯೆಗೈದ ಾರೋಪಿತ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಜಂಗಮ್ಮ ಎಂದು ಗುರುತಿಸಲಾಗಿದ್ದು, ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ಊಟಕ್ಕೆ ಮನೆಗೆ ಬಂದಿದ್ದಾಗ ಮಗಳು ಭಾರ್ಗವಿ ತನ್ನ … Continued

ಹರ್ಯಾಣ ಐಎನ್‌ಎಲ್‌ಡಿ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ : ನಫೆ ಸಿಂಗ್ ಕಾರಿನ ಮೇಲೆ ಬಂದೂಕುಧಾರಿಗಳಿಂದ ದಾಳಿ

ಚಂಡೀಗಢ : ಭಾರತೀಯ ರಾಷ್ಟ್ರೀಯ ಲೋಕದಳ(INLD)ದ ಹರ್ಯಾಣ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಜಜ್ಜರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಪಕ್ಷದ ಮತ್ತೊಬ್ಬ ನಾಯಕ ಕೂಡ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದಾಗ … Continued

ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನಾ ನಾಯಕನ ಹತ್ಯೆ ಮಾಡಲು ಖತರ್ನಾಕ್‌ ಸಂಚು ರೂಪಿಸಿದ್ದ ನೊರೊನ್ಹಾ ಕಾರ್ಯಗತಗೊಳಿಸಿದ್ದು ಹೇಗೆ..?

ಮುಂಬೈ : ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನೆಯ (ಯುಬಿಟಿ) ಯುವ ನಾಯಕನನ್ನು ಗುಂಡಿಕ್ಕಿ ಕೊಂದ ಮಾರಿಸ್ ನೊರೊನ್ಹಾ, ತನ್ನ ‘ಸೇಡು ತೀರಿಸಿಕೊಳ್ಳಲು’ ಕೆಲವು ಸಮಯದಿಂದ ಯೋಜನೆ ರೂಪಿಸಿದ್ದ ಎಂದು ವರದಿಯೊಂದು ತಿಳಿಸಿದೆ. ಶಿವಸೇನಾ (UBT) ನಾಯಕನ ಮಗ ಅಭಿಷೇಕ ಘೋಸಲ್ಕರ್ ಅವರು ನೊರೊನ್ಹಾ ಯೋಜನೆ ಬಗ್ಗೆ ಬಹುಶಃ ಅನುಮಾನಿಸಲಿಲ್ಲ, ಏಕೆಂದರೆ ಅವರು ನೊರೊನ್ಹಾ ಅವರೊಂದಿಗಿನ ಭೇಟಿಯು ತಮ್ಮ … Continued

ಸಾಲದ ವಿಚಾರದಲ್ಲಿ ಮದುವೆಗೆಂದು ಕರೆದೊಯ್ದು ದೆಹಲಿ ಉನ್ನತ ಪೋಲೀಸ್ ಅಧಿಕಾರಿ ಮಗನ ಕೊಲೆ

ನವದೆಹಲಿ : ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹರ್ಯಾಣಾಕ್ಕೆ ತೆರಳಿದ್ದ ದೆಹಲಿ ಪೊಲೀಸ್‌ ಸಹಾಯಕ ಆಯುಕ್ತ ಯಶಪಾಲ ಸಿಂಗ್‌ ಅವರ ಪುತ್ರ 24ರ ಹರೆಯದ ಲಕ್ಷ್ಯ ಚೌಹಾಣ ಅವರ ಕೊಲೆಯಾಗಿದೆ. ಆತನ ದೇಹವು ಕಾಲುವೆಯಲ್ಲಿ ಕಂಡುಬಂದಿದೆ. ತೀಸ್ ಹಜಾರಿ ನ್ಯಾಯಾಲಯದ ವಕೀಲರಾದ ಸಾಕ್ಷ್ಯ ಚೌಹಾಣ ಅವರನ್ನು ಅವರ ಇಬ್ಬರು ಸ್ನೇಹಿತರಾದ ವಿಕಾಸ ಭಾರದ್ವಾಜ ಮತ್ತು ಆತನ ಸಹಚರ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸ್ವೀಕರಿಸುತ್ತಿದ್ದ ವ್ಯಕ್ತಿಯ ಕೊಲೆ

ಉನ್ನಾವೊ (ಉತ್ತರ ಪ್ರದೇಶ) : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ದಿನವಾದ ಜನವರಿ 22 ರಂದು ಕಾರ್ಯಕ್ರಮವನ್ನು ಆಯೋಜಿಸಲು ಸ್ಥಳೀಯ ದೇವಸ್ಥಾನಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾಗ 35 ವರ್ಷದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬೇರೆ ಸಮುದಾಯದವರಾದ್ದರಿಂದ ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ, ಆದರೆ ಪೊಲೀಸರು ವಿವಾದ … Continued

‘ಕೋರ್ಟ್ ಆದೇಶವನ್ನು ಸಹಿಸಲು ಸಾಧ್ಯವಿಲ್ಲ’: ಮುದ್ದೆಯಾದ ಟಿಶ್ಯೂ ಪೇಪರ್‌ ನಲ್ಲಿ ಸುಚನಾ ಸೇಠ್ ಬರೆದ “ಬರಹ” ಪತ್ತೆ…!

ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪದಲ್ಲಿ ಬೆಂಗಳೂರಿನ ಸ್ಟಾರ್ಟ್‌ ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಬಂಧಿಸಿದ ಕೆಲವು ದಿನಗಳ ನಂತರ, ತನ್ನ ಮಗನ ಕಸ್ಟಡಿಯನ್ನು ತನ್ನ ಗಂಡನಿಗೆ ಕೊಡಲು ಬಯಸುವುದಿಲ್ಲ ಎಂದು ಸೂಚಿಸುವ ಕೈಬರಹದ “ಗುಪ್ತ ಟಿಪ್ಪಣಿ” ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ತನ್ನ ಗಂಡನನ್ನು ಹೋಲುವ ತನ್ನ … Continued