ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ….!

ಕೋಝಿಕ್ಕೋಡ್ : ಒಂದು ತಿಂಗಳ ಹಿಂದೆ ಕೇರಳದ ಮಲ್ಲಪುರಂ ಜಿಲ್ಲೆಯ ವೆಂಗಾರ ಪೊಲೀಸ್ ಠಾಣೆಗೆ ಆಗಮಿಸಿದ 54 ವರ್ಷದ ವ್ಯಕ್ತಿಯೊಬ್ಬ ಅಲ್ಲಿನ ಪೊಲೀಸ್ ಅಧಿಕಾರಿಗಳ ಮುಂದೆ 39 ವರ್ಷಗಳ ಹಿಂದೆ ತಾನು ಮಾಡಿದ್ದ ಕೊಲೆ ಮಾಡಿದ್ದಾಗಿ ಹೇಳಿ ಅದನ್ನು ಒಪ್ಪಿಕೊಂಡಿದ್ದಾನೆ…! ವೆಂಗಾರ ಬಳಿಯ ಕಣ್ಣಮಂಗಲಂ ನಿವಾಸಿ ಮೊಹಮ್ಮದಲಿ ಥೈಪರಂಬಿಲ್ ಎಂಬಾತ, 1986 ರಲ್ಲಿ ಕೋಝಿಕೋಡ್ ಜಿಲ್ಲೆಯ … Continued

ಬೆಂಗಳೂರು : ಮಹಿಳೆ ಶವವನ್ನು ಮೂಟೆಕಟ್ಟಿ ತುಂಬಿ ಕಸದ ಲಾರಿಯಲ್ಲಿ ಎಸೆದು ಪರಾರಿ

ಬೆಂಗಳೂರು: ಮಹಿಳೆಯ ಮೃತದೇಹವನ್ನು ಚೀಲದೊಳಗೆ ತುಂಬಿಸಿ, ಕುತ್ತಿಗೆಗೆ ಕಾಲುಗಳನ್ನು ಕಟ್ಟಿ, ಪುರಸಭೆಯ ಕಸದ ಲಾರಿಯಲ್ಲಿ ಎಸೆದ ಘಟನೆ ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿ ಬೆಳಕಿಗೆ ಬಂದಿದೆ. ಚನ್ನಮ್ಮನಕೆರೆ ಸ್ಕೇಟಿಂಗ್ ಮೈದಾನದ ಬಳಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಯ ಹಿಂಭಾಗದ ಲಿಫ್ಟ್‌ನಲ್ಲಿ ಶವ ಪತ್ತೆಯಾಗಿದೆ. ಮಹಿಳೆ ಸುಮಾರು 25-30 ವರ್ಷ ವಯಸ್ಸಿನವರು ಎಂದು ನಂಬಲಾಗಿದೆ. … Continued

ಅಕ್ರಮ ಸಂಬಂಧಕ್ಕೆ ಅಡ್ಡಿ : ಕಣ್ಣಿಗೆ ಖಾರದ ಪುಡಿ ಎರಚಿ, ಕುತ್ತಿಗೆ ಮೇಲೆ ಕಾಲಿಟ್ಟು ಗಂಡನ ಕೊಂದ ಪತ್ನಿ..!

ತುಮಕೂರು : ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಹಾಗೂ ಆಕೆಯ ಪ್ರಿಯಕರನ ಸೇರಿ ಬರ್ಬರವಾಗಿ ಹತ್ಯೆಗೈದ ಘಟನೆ ತಿಪಟೂರು (Tiptur) ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನು ಕೊಂದು ಆತನ ಶವವನ್ನು ಸುಮಾರು 30 ಕಿಲೋಮೀಟರ್ ದೂರದಲ್ಲಿ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ. ಜೂನ್ 24 ರಂದು ತುಮಕೂರು … Continued

ಮಣಿಪಾಲ | ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ : ಮರಣೋತ್ತರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ

ಉಡುಪಿ : ಮಗನೊಬ್ಬ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪದ್ಮಾಬಾಯಿ(45) ಎಂದು ಗುರುತಿಸಲಾದ ಮಹಿಳೆ ಕೊಲೆಯಾಗಿದ್ದು, ಮಗ ಈಶ ನಾಯಕ್‌ (26) ಕೊಲೆ ಆರೋಪಿಯಾಗಿದ್ದಾನೆ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು … Continued

ಮದುವೆಯಾಗಲು ಗೋವಾಕ್ಕೆ ಹೋಗಿದ್ದ ಬೆಂಗಳೂರಿನ ಜೋಡಿ ; ಆದ್ರೆ ಕನಸಿನ ಪ್ರವಾಸ ಪ್ರೇಯಸಿ ಕೊಲೆಯಲ್ಲಿ ಅಂತ್ಯ

ಪಣಜಿ : ಮನಕಲಕುವ ಘಟನೆಯೊಂದರಲ್ಲಿ, ಮದುವೆಯಲ್ಲಿ ಕೊನೆಗೊಳ್ಳಬೇಕಿದ್ದ ಗೋವಾ ಪ್ರವಾಸವು ಪ್ರೇಯಸಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ತನ್ನ ಪ್ರೇಯಸಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ದಕ್ಷಿಣ ಗೋವಾದ ಅರಣ್ಯ ಪ್ರದೇಶದಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಗೋವಾಕ್ಕೆ ಮದುವೆಯಾಗಬೇಕೆಂದು ಬಂದಿದ್ದ ಯುವತಿಯ ಬದುಕು ದುರಂತದಲ್ಲಿ ಕೊನೆಗೊಂಡಿತು. ಉತ್ತರ ಬೆಂಗಳೂರಿನ ನಿವಾಸಿ … Continued

ಹನಿಮೂನ್‌ ಕೊಲೆ ಪ್ರಕರಣ | ರಾಜಾ ರಘುವಂಶಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಪತ್ನಿ ಸೋನಂ ಪ್ರೇಮಿ-ಕೊಲೆ ಸಂಚಿನ ಆರೋಪಿ ; ವೀಡಿಯೊ ವೈರಲ್‌…

ಮೇಘಾಲಯದಲ್ಲಿ ಮಧುಚಂದ್ರದ ಸಮಯದಲ್ಲಿ ಪತಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲ್ಪಟ್ಟ ಇಂದೋರದ ಮಹಿಳೆಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಧುಚಂದ್ರದ ಸಮಯದಲ್ಲಿ ಪತಿ ರಾಜ ರಘುವಂಶಿಯನ್ನು ಹತ್ಯೆ ಮಾಡಲು ಪತ್ನಿ ಸೋನಂ ಹತ್ಯೆಗೆ ಸಂಚು ರೂಪಿಸಿದ್ದಳು ಎನ್ನುವ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾದ ಮತ್ತೊಂದು ವೀಡಿಯೊ ಹೊರಬಿದ್ದಿದೆ. ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ … Continued

“ಮೂವರು ಪುರುಷರು, ಹಿಂದಿ ಮಾತಾಡ್ತಾರೆ, ಸ್ಥಳೀಯರಲ್ಲ” : ʼಹನಿಮೂನ್ ಕೊಲೆʼ ಪ್ರಕರಣ ಭೇದಿಸಲು ಸಹಾಯ ಮಾಡಿದ ಪ್ರವಾಸಿ ಗೈಡ್‌ ನೀಡಿದ ಸುಳಿವು…

ನವದೆಹಲಿ: ರಾಜಾ ರಘುವಂಶಿಯನ್ನು ಜೀವಂತವಾಗಿ ನೋಡಿದ ಕೊನೆಯ ವ್ಯಕ್ತಿಯಾಗಿದ್ದ ಪ್ರವಾಸಿ ಮಾರ್ಗದರ್ಶಿಯ ಹೇಳಿಕೆಯೊಂದು, ಬಾಲಿವುಡ್ ಸಿನಿಮಾದ ಕಥಾವಸ್ತುವಿನಂತೆ ಅನೇಕ ಟ್ವಿಸ್ಟ್‌ ಗಳಿಂದ ಕೂಡಿರುವ ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ನೆರವಾಗಿದೆ. ಪ್ರವಾಸಿ ಗೈಡ್‌ ನೀಡಿದ ಹೇಳಿಕೆಯ ಆಧರಿಸಿ ಮೇಲೆ ತನಿಖೆ ನಡೆಸಿದ ಪೊಲೀಸರು ಸುಮಾರು ಹದಿನೈದು ದಿನಗಳಿಂದ ರಹಸ್ಯವಾಗಿಯೇ ಉಳಿದಿದ್ದ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. … Continued

ಬೆಂಗಳೂರು : ಪ್ರಿಯತಮೆಯನ್ನು ಹೋಟೆಲಿಗೆ ಕರೆಯಿಸಿಕೊಂಡು ಬರ್ಬರ ಹತ್ಯೆ ; 17 ಬಾರಿ ಇರಿದ ಟೆಕ್ಕಿ…

ಬೆಂಗಳೂರು: ಘಟನೆ ನಡೆದು ಎರಡು ದಿನಗಳ ನಂತರ ಭಾನುವಾರ ನಗರದ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ಹೋಟೆಲ್ ಕೋಣೆಯೊಳಗೆ 36 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಹರಿಣಿ (36) ಎಂದು ಗುರುತಿಸಲಾದ ಮಹಿಳೆಯನ್ನು ಗೆಳೆಯ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯಶಸ್ ಎಂಬಾತ 17 ಬಾರಿ ಇರಿದು ಕೊಂದ … Continued

ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!

 ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ  ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued