ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ಶವದ ಮೇಲಿನ ಮೂಗುತಿಯಿಂದ ಬಯಲಾಯ್ತು ಮಹಿಳೆಯ ಕೊಲೆಯ ರಹಸ್ಯ

ನವದೆಹಲಿ: ಶವದ ಮೇಲಿನ ಮೂಗುತಿ ನೀಡಿದ ಸುಳಿವಿನಿಂದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಮೂಗುತಿಯ ಸಹಾಯದಿಂದ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆಯ ಕೊಲೆಗಾರನನ್ನು ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಪತಿಯೇ ತನ್ನ ಹೆಂಡತಿಯನ್ನು ಕೇಬಲ್ ವೈರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಆಕೆಯ ದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಚರಂಡಿಗೆ ಎಸೆದಿದ್ದ ಎಂದು ಪೊಲೀಸರು ಶುಕ್ರವಾರ … Continued

ಚಿಕ್ಕಮಗಳೂರು| ಪತ್ನಿ ಬಿಟ್ಟು ಹೋದ ಕೋಪಕ್ಕೆ ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ನಂತರ ತಾನೂ ಆತ್ಮಹತ್ಯೆ..

ಚಿಕ್ಕಮಗಳೂರು: ಹೆಂಡತಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಗುಂಡುಹಾರಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾಂಡ್ಯ ಬಳಿ ನಡೆದಿದೆ ಎಂದು ವರದಿಯಾಗಿದೆ. ರತ್ನಾಕರ ಎಂಬಾತ ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು … Continued

ಕೊಡಗು : ಪೊನ್ನಂಪೇಟೆ ಬಳಿ ಒಂದೇ ಕುಟುಂಬದ ‌ನಾಲ್ವರ ಭೀಕರ ಹತ್ಯೆ

ಮಡಿಕೇರಿ : ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರದಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೇಗೂರು ಗ್ರಾಮದ ಕರಿಯ(75), ಗೌರಿ (70) ದಂಪತಿ ಹಾಗೂ ನಾಗಿ (30) ಮತ್ತು ಮಗಳು ಕಾವೇರಿ(5) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇಂದು, ಗುರುವಾರ ರಾತ್ರಿ ಸಮಯದಲ್ಲಿ ಈ ಘಟನೆ … Continued

ಬೆಂಗಳೂರು | ಬೆಚ್ಚಿ ಬೀಳಿಸುವ ಘಟನೆ : ಪತ್ನಿಯನ್ನು ಕೊಂದು ಸೂಟ್ ಕೇಸಿನಲ್ಲಿ ತುಂಬಿ ಆಕೆಯ ತವರು ಮನೆಗೆ ಫೋನ್‌ ಕರೆ ಮಾಡಿ ಪರಾರಿಯಾದ ಗಂಡ..

ಬೆಂಗಳೂರು: ಗೌರಿ ಖೇಡೇಕರ ಅಲಿಯಾಸ್ ಗೌರಿ ಅನಿಲ ಸಾಂಬ್ರೇಕರ (32) ಎಂಬ ಮಹಿಳೆಯನ್ನು ಆಕೆಯ ಪತಿ ರಾಕೇಶ ರಾಜೇಂದ್ರ ಖೇಡೇಕರ (36) ಎಂಬಾತ ದೊಡ್ಡಕಮ್ಮನಹಳ್ಳಿಯ ತಮ್ಮ ಮನೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ನಂತರ ಆರೋಪಿ ರಾಕೇಶ ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾನೆ. ಮತ್ತು … Continued

ಬಾಡಿಗೆಗೆ ಇದ್ದ ಯೋಗ ಶಿಕ್ಷಕನನ್ನು ಜೀವಂತವಾಗಿ ಹೂತು ಹಾಕಿದ ಮನೆ ಮಾಲೀಕ

ರೋಹ್ಟಕ್‌ :  ಯೋಗ ಶಿಕ್ಷಕರೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅನುಮಾನಿಸಿ ಮನೆಯ ಮಾಲೀಕ ಬಾಡಿಗೆದಾರರನ್ನು ಜೀವಂತವಾಗಿ ಹೂತು ಹಾಕಿದ ಘಟನೆ  ಹರಿಯಾಣದ ರೋಹ್ಟಕ್‌ನ ಚರ್ಕಿ ದಾದ್ರಿಯಲ್ಲಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತರ ಸಹಾಯವನ್ನು ಪಡೆದು ಯೋಗ ಶಿಕ್ಷಕನನ್ನು ಅಪಹರಿಸಿ ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ್ದಾನೆ ಎಂದು … Continued

ರುಂಡ ತುಂಡರಿಸಲಾಗಿದೆ…ಕೈ ಕತ್ತರಿಸಲಾಗಿದೆ…ಕಾಲುಗಳು ಹಿಂದಕ್ಕೆ ಬಾಗಿವೆ…ಹೃದಯಕ್ಕೆ 3 ಬಾರಿ ಇರಿತ : ಗಂಡನ ಕ್ರೂರವಾಗಿ ಕೊಂದ ಪತ್ನಿ-ಪ್ರಿಯಕರ..!

ನವದೆಹಲಿ: ಮರ್ಚೆಂಟ್ ನೇವಿ ಅಧಿಕಾರಿ ಸೌರಭ ರಜಪೂತ್ ಅವರ ಮರಣೋತ್ತರ ಪರೀಕ್ಷೆಯ ವರದಿಯು ಅವರನ್ನು ಎಷ್ಟು ಕ್ರೂರವಾಗಿ ಕೊಲ್ಲಲಾಗಿದೆ ಮತ್ತು ಅವರ ದೇಹವನ್ನು ಅವರ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಹೇಗೆ ತುಂಡುಗಳಾಗಿ ಕತ್ತರಿಸಿದ್ದಾರೆ ಎಂಬ ವಿವರಗಳನ್ನು ಬಹಿರಂಗಪಡಿಸಿದೆ. ಇಬ್ಬರನ್ನೂ ಈಗ ಬಂಧಿಸಲಾಗಿದೆ. ಇಬ್ಬರೂ ಆರೋಪಿಗಳು ಮಾರ್ಚ್ 4 ರಂದು … Continued

ಶಿರಸಿ | ಅಣ್ಣನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಮ್ಮ…!

ಶಿರಸಿ : ಕ್ಷುಲ್ಲಕ ಕಾರಣಕ್ಕೆ ತಮ್ಮನೇ ಅಣ್ಣನನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಹುತ್ಗಾರಿನಲ್ಲಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ತ್ಯಾಗರಾಜ ಗಣಪತಿ ಮುಕ್ರಿ (30) ಎಂದು ಗುರುತಿಸಲಾಗಿದ್ದು, ಈತನ ತಮ್ಮನಾದ ಶಿವರಾಜ ಗಣಪತಿ ಮುಕ್ರಿ ಕೊಲೆ ಆರೋಪಿಯಾಗಿದ್ದಾನೆ. ಸಾರಾಯಿ ಕುಡಿದು ಬಂದಿದ್ದ … Continued

ಭಾರತದ ಮೋಸ್ಟ್‌ ವಾಂಟೆಡ್ ಭಯೋತ್ಪಾದಕ ಪಾಕಿಸ್ತಾನದಲ್ಲಿ ಹತ್ಯೆ

ನವದೆಹಲಿ: ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ಪ್ರಮುಖ ಸಹಾಯಕ ಮತ್ತು ಖುರೆಟಾ ಲಾಂಚ್ ಪ್ಯಾಡ್‌ನ ಕಮಾಂಡರ್ ಎಂದು ಕರೆಯಲ್ಪಡುವ ಲಷ್ಕರ್-ಎ-ತೈಬಾದ ಅಬು ಕತಾಲ್ ಸಿಂಧಿ ಭಾನುವಾರ ಬೆಳಿಗ್ಗೆ ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಬಹು ಮಾಧ್ಯಮ ವರದಿಗಳು ತಿಳಿಸಿವೆ. ಭಯೋತ್ಪಾದಕ ಕತಾಲ್ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ದಾಳಿಗಳಲ್ಲಿ ಭಾಗಿಯಾಗಿದ್ದ ಮತ್ತು ಕೇಂದ್ರಾಡಳಿತ … Continued

ಹೋಳಿ ಬಣ್ಣ ಹಚ್ಚುವುದನ್ನು ತಡೆದಿದ್ದಕ್ಕೆ ಯುವಕನನ್ನು ಹತ್ಯೆ ಮಾಡಿದರು…!

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಹೋಳಿ ಹಬ್ಬಕ್ಕೆ ಮುನ್ನ ಮೂವರು ವ್ಯಕ್ತಿಗಳು ಬಣ್ಣ ಬಳಿಯುವುದನ್ನು ತಡೆಯಲು ಯತ್ನಿಸಿದ 25 ವರ್ಷದ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಸಂಜೆ ರಾಲ್ವಾಸ್ ಗ್ರಾಮದಲ್ಲಿ ಅಶೋಕ, ಬಬ್ಲು ಮತ್ತು ಕಾಲುರಾಮ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಹಂಸರಾಜ ಎಂಬವರಿಗೆ ಬಣ್ಣ … Continued