ವಿಜಯಪುರ : ನೋಡಲು ತನ್ನಂತಿಲ್ಲ ಎಂದು ಮಗನನ್ನೇ ನದಿಗೆ ಎಸೆದು ಸಾಯಿಸಿದ ತಂದೆ…!

ವಿಜಯಪುರ: ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ 6 ವರ್ಷದ ಮಗನನ್ನು ತಂದೆಯೇ ನದಿಗೆ ಎಸೆದು ಕೊಲೆ ಮಾಡಿದ ಕ್ರೂರ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಕೊಲೆಯಾದ ಬಾಲಕ ಎಂದುಗುರುತಿಸಲಾಗಿದೆ. ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ನಾಗಠಾಣ … Continued

ವಿಜಯಪುರ: ಗುಂಡು ಹಾರಿಸಿ ಗ್ರಾಪಂ ಸದಸ್ಯನ ಹತ್ಯೆ

ವಿಜಯಪುರ : ಗ್ರಾಮ ಪಂಚಾಯತ ಸದಸ್ಯನ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಗರ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅಲಿಯಾಬಾದ ಗ್ರಾಪಂ ಸದಸ್ಯರಾದ ಪಾಂಗರುನ ದೊಡ್ಡಿ ನಿವಾಸಿ ರಾಜು ಖರೆ (48) ಎಂದು ಗುರುತಿಸಲಾಗಿದೆ. ರಾಜು ಖರೆ … Continued

ಧಾರವಾಡ : : ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಧಾರವಾಡ : ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ (youth congress) ಮುಖಂಡ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ಶುಕ್ರವಾರ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ … Continued

ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಯ ಭೀಕರ ಕೊಲೆ

ಕಲಬುರಗಿ: ನಗರದ ಹಳೇ ಜೇವರ್ಗಿ ರಸ್ತೆಯ ಪಿ ಅಂಡ್‌ ಟಿ ಕಾಲೊನಿಯಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಅನಿಲ ರಾಠೋಡ ಎಂದು ಗುರುತಿಸಲಾಗಿದೆ. ಅನಿಲ ರಾಠೋಡ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಕಚೇರಿ ಒಳಗೆ ನುಗ್ಗಿದೆ. ಮಾರಕಾಸ್ತ್ರಗಳಿಂದ … Continued

ಪತ್ನಿ ತವರಿಗೆ ಹೋದಾಗ ಮನೆಗೆ ಪ್ರೇಯಸಿ ಕರೆಸಿಕೊಂಡು ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ…!

ವಿಶಾಖಪಟ್ಟಣಂ: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮಾದರಿಯಲ್ಲೇ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪತ್ನಿ ತವರಿಗೆ ಹೋದ ಸಮಯದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡಿದ್ದ ನೌಕಾಪಡೆ ಅಧಿಕಾರಿಯೊಬ್ಬ ಆಕೆಯನ್ನು ಹತ್ಯೆ ಮಾಡಿ, ಬಳಿಕ ಆಕೆಯ ದೇಹವನ್ನು ಹಲವು ಭಾಗಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಅಡಗಿಸಿಟ್ಟಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು … Continued

ಬೆಚ್ಚಿಬೀಳಿಸುವ ಘಟನೆ : ಎಲ್ಲರೆದುರೇ ಯುವಕನ ತಲೆ ಕತ್ತರಿಸಿ ಮನೆಗೆ ಒಯ್ದು ರುಂಡ ಪಕ್ಕಕ್ಕಿಟ್ಟು ಅಡುಗೆ ಮಾಡುತ್ತಿದ್ದ ಹಂತಕ…!

 ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಶನಿವಾರ ಮನುಕುಲವೇ ಬೆಚ್ಚಿಬೀಳಿಸುವ ಭೀಕರ ಕೊಲೆಯೊಂದು ನಡೆದಿದೆ. 25 ವರ್ಷದ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ 50 ವರ್ಷದ ವ್ಯಕ್ತಿ, ಬಳಿಕ ಯುವಕನ ಕತ್ತರಿಸಿದ ತಲೆಯನ್ನು ತನ್ನ ಮನೆಗೆ ಕೊಂಡೊಯ್ದು ಆರಾಮವಾಗಿ ಅಡುಗೆ ಮಾಡಲು ಕುಳಿತ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಬಾರಾಬಂಕಿ ಜಿಲ್ಲೆಯ ಪರಸಾವಲ್ ಗ್ರಾಮದಲ್ಲಿ ಈ … Continued

ಮಂಗಳೂರು : ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕೊಲೆ

ಮಂಗಳೂರು: ನಗರದ ಹೊರವಲಯದ‌ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಬೆಳಿಗ್ಗೆ ನಡೆದಿದ್ದು, ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತನನ್ನು 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ … Continued

ಲಷ್ಕರ್ ಉಗ್ರ ಸಂಘಟನೆ ಕಮಾಂಡರ್‌ ಬಿಲಾಲ್ ಆರಿಫ್ ಹತ್ಯೆ : ಕುಟುಂಬ ಸದಸ್ಯರಿಂದಲೇ ಚಾಕು ಇರಿತ, ಗುಂಡೇಟು

ನವದೆಹಲಿ: ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಬಿಲಾಲ್ ಆರಿಫ್ ಸರಫಿಯನ್ನು ಶನಿವಾರ ಪಾಕಿಸ್ತಾನದಲ್ಲಿ ಈದ್ ಪ್ರಾರ್ಥನೆಯ ನಂತರ ಆತನ ಕುಟುಂಬ ಸದಸ್ಯರೇ ಚಾಕುವಿನಿಂದ ಇರಿದಿದ್ದಾರೆ ಮತ್ತು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ಹಲವು ವರದಿಗಳು ತಿಳಿಸಿವೆ. ಈ ಘಟನೆಯು ಮುರಿದ್ಕೆಯ ಮರ್ಕಜ್ ಬಳಿಯಿರುವ ಧ್ವಂಸಗೊಂಡ ಲಷ್ಕರ್-ಎ-ತೈಬಾ ಪ್ರಧಾನ ಕಚೇರಿಯ ಸಮೀಪ ನಡೆದಿದೆ ಎಂದು ವರದಿಯಾಗಿದೆ. … Continued

ಅವಳಿ ಸಹೋದರಿಯನ್ನು 84 ಬಾರಿ ಇರಿದು ಕೊಂದ ಇಂಜಿನಿಯರ್‌ ; ತಾಯಿಗೂ ನೀಡಿದ ‘ಡೆಡ್ಲಿ ಸರ್ಪ್ರೈಸ್’

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಈ ಘಟನೆಯು ಅತ್ಯಂತ ಆಘಾತಕಾರಿಯಾಗಿದ್ದು, ಕೇವಲ ವೃತ್ತಿಜೀವನ ಮತ್ತು ವೈಯಕ್ತಿಕ ಸಂಬಂಧದ ಕುರಿತಾದ ಭಿನ್ನಾಭಿಪ್ರಾಯವು ಎಷ್ಟು ಕ್ರೂರ ಹಂತಕ್ಕೆ ತಲುಪಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ. ವಿಮಾ ಕಂಪನಿಯೊಂದರಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನೀಲಿಮಾ ಅವರ ಭೇಟಿ ಮಾಡಲು ಮಗ ಹಾರ್ದಿಕ್ ಕಳೆದ ವಾರ ಅವರ ಕಚೇರಿಗೆ ಹೋಗಿದ್ದ. “ಅಮ್ಮಾ … Continued

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹೊಡೆದು ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ವಿಶೇಷ ತರಗತಿ ಮುಗಿಸಿ ವಿದ್ಯಾರ್ಥಿಗಳು ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಯನ್ನು ಸಂಕೇತ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC … Continued