ಮುರ್ಡೇಶ್ವರ : ಸಮುದ್ರಕ್ಕೆ ಇಳಿದಿದ್ದ ಯುವಕ ನಾಪತ್ತೆ, ಮತ್ತೋರ್ವನ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಈಜಲು ಹೋಗಿ ಪ್ರವಾಸಿಗನೊಬ್ಬ ನಾಪತ್ತೆಯಾಗಿದ್ದು. ಇನ್ನೋರ್ವನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ತುಮಕೂರು ಮೂಲದ 22 ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಇದ್ದರೂ ಸಮುದ್ರಕ್ಕಿಳಿದಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದು ಅದರಲ್ಲಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ತುಮಕೂರು … Continued

ಮುರುಡೇಶ್ವರ :ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ವಿದ್ಯಾರ್ಥಿ ಸಾವು, ಮತ್ತಿಬ್ಬರ ರಕ್ಷಣೆ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ಇಂದು, ಮಂಗಳವಾರ ಕೂಡ ಓರ್ವ ಪ್ರವಾಸಿಗ ಲೈಫ್ ಗಾರ್ಡ್‌ಗಳ ಸೂಚನೆಗೆ ಕ್ಯಾರೆ ಎನ್ನದೆ ಸಮುದ್ರಕ್ಕಿಳಿದ ನಂತರ ಅಲೆಗೆ ಸಿಲುಕಿ ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದ ವರದಿಯಾಗಿದೆ. ಕಣ್ಮರೆಯಾದ ಯುವಕನ್ನು ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ನಿವಾಸಿ, ಇಂಜಿನಿಯರಿಂಗ್ ವಿದ್ಯಾರ್ಥಿ ಪವನ್ ನಾಯ್ಕ(20) ಎಂದು … Continued

ಮುರ್ಡೇಶ್ವರದಲ್ಲಿ ಇಬ್ಬರು ಸಮುದ್ರ ಪಾಲು. ಓರ್ವ ಶವವಾಗಿ ಪತ್ತೆ, ಮತ್ತೊಬ್ಬ ನಾಪತ್ತೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಇಬ್ಬರು ಪ್ರವಾಸಿಗರು ಸಮುದ್ರದಲ್ಲಿ ಮುಳುಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಮತ್ತೋರ್ವನ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ನಾಲ್ವರು ಮುರುಡೇಶ್ವರ ದೇವಸ್ಥಾನದಲ್ಲಿ ಪೂಜೆಯ ಬಳಿಕ ಸಮುದ್ರದಲ್ಲಿ ಈಜಲು ಹೋಗಿದ್ದರು. ಈ ವೇಳೆ ಅಲೆಯ ಅಬ್ಬರಕ್ಕೆ … Continued