ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued

ಫೆ. 11ರಂದು ಮೈಸೂರಿಗೆ ಅಮಿತ್ ಶಾ ಭೇಟಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಫೆ.11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ (ಫೆಬ್ರವರಿ 10) ಮೈಸೂರಿಗೆ ಆಗಮಿಸಲಿದ್ದಾರೆ. ಭಾನುವಾರ ರಾತ್ರಿ 10:50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 11 ರಂದು ಬೆಳಿಗ್ಗೆ 11 … Continued

ರಾಮಲಲ್ಲಾ ಮೂರ್ತಿ ಕೆತ್ತನೆಗೆ ಕಪ್ಪುಶಿಲೆ ಸಿಕ್ಕ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ; ಜನವರಿ 22ಕ್ಕೆ ಭೂಮಿಪೂಜೆ

ಮೈಸೂರು : ಅಯೋಧ್ಯೆಯ ಬಾಲ ರಾಮ(ರಾಮ ಲಲ್ಲಾ)ನ ಮೂರ್ತಿ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮನ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 22 ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುತ್ತದೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು … Continued

ಮೈಸೂರಿನ ಅರುಣ ಯೋಗಿರಾಜ ಕೆತ್ತಿದ ರಾಮಲಲ್ಲಾ ಮೂರ್ತಿಯೇ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಲು ಮೈಸೂರು ಮೂಲದ ಅರುಣ ಯೋಗಿರಾಜ ಅವರು ಕೆತ್ತಿರುವ ರಾಮಲಲ್ಲಾನ ವಿಗ್ರಹವನ್ನು ಆಯ್ಕೆ ಮಾಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೋಮವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ಪೂಜಿಸಲ್ಪಡುತ್ತಿರುವ ರಾಮಲಲ್ಲಾನ ಪ್ರಸ್ತುತ ವಿಗ್ರಹವನ್ನು ಸಹ ಹೊಸ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುವುದು. … Continued

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ ಕೆತ್ತನೆಯ ವಿಗ್ರಹ ಆಯ್ಕೆ

ಬೆಂಗಳೂರು : ಕರ್ನಾಟಕದ ಖ್ಯಾತ ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿರುವ ರಾಮಲಲ್ಲಾ ವಿಗ್ರಹವು ಅಯೋಧ್ಯೆಯಲ್ಲಿನ ಭವ್ಯವಾದ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ ಎಂದು ಬಿಜೆಪಿ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ. ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ. ‘ಎಕ್ಸ್’ ನಲ್ಲಿ … Continued

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮಾದ್ಯಮದವರ ಜೊತೆ ಮಾತನಾಡಿದ ಅವರು, ‘ನಾವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಆದೇಶ … Continued

ವೀಡಿಯೊ…| ಅವನ ಬಗ್ಗೆ ಯೋಚನೆ ಮಾಡ್ತೀಯಲ್ಲ, 1.5 ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕೊಡ್ತಾರೆ : ಕಾರಿಗೆ ಗುದ್ದಿದ ಬೈಕ್‌ ಸವಾರನ ಮೇಲೆ ಒದರಾಡಿದ ಭವಾನಿ ರೇವಣ್ಣ

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನ ಮೇಲೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಕೆಂಡಾಮಂಡಲವಾಗಿದ್ದು, ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾನುವಾರ (ಡಿಸೆಂಬರ್‌3) ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ … Continued

ಪತ್ನಿ ಜೊತೆ ಕಲ್ಲುಕಟ್ಟೆಯ ಮೇಲೆ ಕುಳಿತು ಮಗನ ಆಟ ವೀಕ್ಷಿಸಿದ ಭಾರತ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌

ಮೈಸೂರು: ಭಾರತದ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರಾದ ರಾಹುಲ್‌ ದ್ರಾವಿಡ್‌ ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ತಮ್ಮ ಪತ್ನಿ ಜೊತೆ ಮೈಸೂರಿಗೆ ಬಂದಿದ್ದಾರೆ. ಈ ಪಂದ್ಯಗಳು ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, … Continued

ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ … Continued

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ ಸಿಂಹ

ಮೈಸೂರು : ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಅವರು ಇಂಗ್ಲಿಷ್‌ನಲ್ಲಿ Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಾವಣೆ ಮಾಡಿಕೊಂಡಿರುವದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ. ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರದ ಹೆಸರು ಬದಲಾವಣೆ ಮಾಡಿಕೊಳ್ಳುತ್ತಾರೆ. ಈ ಮೊದಲು … Continued