ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲೇ ಕಾಡಾನೆಯೊಂದು ಕಂದಕಕ್ಕೆ ಬಿದ್ದು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಆನೆಗೆ ಸುಮಾರು 40-೪೫ ವರ್ಷ ಆಗಿರಬಹುದು ಎಂದು ಹೇಳಲಾಗಿದೆ. ಆಹಾರ ಅರಸುತ್ತ ಬಂದ ಕಾಡಾನೆ ಗೊತ್ತಾಗದೆ ಕಂದಕಕ್ಕೆ ಬಿದ್ದಿದ್ದು, ಪರಿಣಾಮ ದಾರುಣವಾಗಿ ಮೃತಪಟ್ಟಿದೆ. ಮಲ್ಲಹಳ್ಳಿ … Continued