ಹೋಗಿ…ಗೆದ್ದು ಬನ್ನಿ…ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ…: ಲೋಕಸಭೆ ಚುನಾವಣೆಗೂ ಮುನ್ನ ಸಚಿವರಿಗೆ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ನಡೆದ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೆ ಮುಂಚಿತವಾಗಿಯೇ ತಮ್ಮ ಸಚಿವರಿಗೆ “ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ” ಎಂದು ಸಂದೇಶ ನೀಡಿದ್ದಾರೆ. ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ ‘ವಿಕಸಿತ ಭಾರತ 2047’ … Continued

ಲೋಕಸಭೆ ಚುನಾವಣೆ 2024 : ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಕೊಕ್‌…!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಹೆಸರುಗಳೊಂದಿಗೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಅದರಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ…! ಪಟ್ಟಿಯಲ್ಲಿ ಬಿಜೆಪಿ ಅಸ್ಸಾಂನ 11 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅವರಲ್ಲಿ ಆರು ಅಭ್ಯರ್ಥಿಗಳು ಹಾಲಿ ಸಂಸದರಾಗಿದ್ದರೆ ಉಳಿದ ಐವರು ಹೊಸ ಮುಖಗಳಾಗಿವೆ. 2019ರ ಸಾರ್ವತ್ರಿಕ … Continued

25 ಖಾಸಗಿ ವಲಯದ ತಜ್ಞರನ್ನು ಪ್ರಮುಖ ಹುದ್ದೆಗಳಿಗೆ ನೇಮಿಸಲು ಯೋಜಿಸಿದ ಮೋದಿ ಸರ್ಕಾರ

ನವದೆಹಲಿ : ಆಡಳಿತವನ್ನು ಇನ್ನಷ್ಟು ಸುಧಾರಿಸಲು ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಇಪ್ಪತ್ತೈದು ಖಾಸಗಿ ವಲಯದ ತಜ್ಞರು ಶೀಘ್ರದಲ್ಲೇ ಕೇಂದ್ರದ ಪ್ರಮುಖ ಹುದ್ದೆಗಳಿಗೆ ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ)ಯು ಮೂರು ಜಂಟಿ ಕಾರ್ಯದರ್ಶಿಗಳು ಮತ್ತು 22 ನಿರ್ದೇಶಕರು/ಉಪ ಕಾರ್ಯದರ್ಶಿಗಳನ್ನು ಕೇಂದ್ರ ಸರ್ಕಾರದ … Continued

ವೀಡಿಯೊ…| ಸಮುದ್ರದಲ್ಲಿ ಮುಳುಗಿ ನೀರಿನೊಳಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ…!

ಗುಜರಾತಿನ ಸಮುದ್ರದ ಆಳವಾದ ನೀರಿನಲ್ಲಿ ಧುಮುಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಸ್ಥಾನದಪ್ರಾರ್ಥನೆ ಸಲ್ಲಿಸಿದರು. ಇದನ್ನು “ದೈವಿಕ ಅನುಭವ” ಎಂದು ಕರೆದ ಪ್ರಧಾನಿ ಮೋದಿ, “ಆಧ್ಯಾತ್ಮಿಕ ಭವ್ಯತೆಯ ಪುರಾತನ ಯುಗದೊಂದಿಗೆ ಸಂಪರ್ಕ ಹೊಂದಿದ್ದೇನೆ” ಎಂದು ಭಾವಿಸಿರುವುದಾಗಿ ತಿಳಿಸಿದ್ದಾರೆ. “ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸುವುದು ಬಹಳ ದೈವಿಕ ಅನುಭವವಾಗಿತ್ತು. … Continued

ಇದು 22 ವರ್ಷಗಳ ಹಿಂದೆ ನರೇಂದ್ರ ಮೋದಿಯ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿದ ದಿನದ ವೀಡಿಯೊ | ವೀಕ್ಷಿಸಿ

ನವದೆಹಲಿ: ರಾಜ್‌ಕೋಟಕ್ಕೆ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೋಟ್‌ ನಗರದಲ್ಲಿ ತಮ್ಮ ಮೊದಲ ಚುನಾವಣಾ ಕದನದ ಪ್ರಚಾರದ ಥ್ರೋಬ್ಯಾಕ್ ವೀಡಿಯೊವನ್ನು ಇಂದು, ಶನಿವಾರ ಹಂಚಿಕೊಂಡಿದ್ದಾರೆ. ಇದು ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನೇ ಬದಲಿಸಿದ ದಿನವಾಗಿದೆ. ಹೀಗಾಗಿಯೇ ಅವರು ಈ ವೀಡಿಯೊ ಹಂಚಿಕೊಂಡಿದ್ದಾರೆ. 2002ರ ಇದೇ ಫೆ.24ರ ದಿನ, … Continued

ವೀಡಿಯೊಗಳು…| ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಮೋದಿ : ‘ಯುಎಇ 140 ಕೋಟಿ ಭಾರತೀಯರ ಹೃದಯ ಗೆದ್ದಿದೆ’ ಎಂದ ಭಾರತದ ಪ್ರಧಾನಿ

ಅಬುಧಾಬಿ : ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಪ್ರಧಾನಿ ಮೋದಿ ಕೂಡ ಅರ್ಚಕರೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ … Continued

ವೀಡಿಯೊ..| ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ : ಅಬುಧಾಬಿಯ ಅಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ನವದೆಹಲಿ: ಇಂದು, ಮಂಗಳವಾರ ಸಂಜೆ ಅಬುಧಾಬಿಯಲ್ಲಿ ನಡೆದ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಶ್ಲಾಘಿಸಿದರು. ಸಾವಿರಾರು ಜನ ಸೇರಿದ್ದ ಝಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ “ಅಹ್ಲಾನ್ ಮೋದಿ” ಕಾರ್ಯಕ್ರಮವು ಗಲ್ಫ್ ದೇಶಕ್ಕೆ ಪ್ರಧಾನಿಯವರ ಎರಡು ದಿನಗಳ ಭೇಟಿಯ ಪ್ರಮುಖ ಕಾರ್ಯಕ್ರಮಗಳಲ್ಲಿ … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಬಿಜೆಪಿ-ಆರ್‌ಎಲ್‌ಡಿ ಮೈತ್ರಿ ಅಂತಿಮ; ಉತ್ತರ ಪ್ರದೇಶದ ೨ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ-ಮೂಲಗಳು

ಲಕ್ನೋ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ರಾಷ್ಟ್ರೀಯ ಲೋಕದಳ (RLD) ಹೆಜ್ಜೆ ಹಾಕಲಿದೆ ಎಂದು ವರದಿಗಳು ತಿಳಿಸಿವೆ. ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲಿದ್ದು, ಭಾರತೀಯ ಜನತಾ ಪಕ್ಷವು (ಬಿಜೆಪಿ) ಆರ್‌ಎಲ್‌ಡಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. 2+1 ಸೂತ್ರವನ್ನು ಎರಡೂ ಪಕ್ಷಗಳು ಒಪ್ಪಿಕೊಂಡಿವೆ ಎಂದು ವರದಿಗಳು ತಿಳಿಸಿವೆ. 2+1 ಸೂತ್ರ   ಉಭಯ ಪಕ್ಷಗಳು … Continued

ಲೋಕಸಭೆಗೆ ಈಗಲೇ ಚುನಾವಣೆ ನಡೆದರೆ ಅಧಿಕಾರ ಯಾರಿಗೆ : ಮೋದಿಗೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? : ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಶನ್‌ ಸರ್ವೆಯಲ್ಲಿ ಬಹಿರಂಗ

ನವದೆಹಲಿ; 2024 ರ ಲೋಕಸಭಾ ಚುನಾವಣೆಯನ್ನು ಸಮೀಪಿಸುತ್ತಿರುವಾಗ, ಮೂಡ್ ಆಫ್ ದಿ ನೇಷನ್ (Mood of the Nation) ಸಮೀಕ್ಷೆಯು ಈಗಲೇ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಹೇಳಿದೆ. ಆದಾಗ್ಯೂ, ಇದು … Continued