ರಷ್ಯಾ ಅಧ್ಯಕ್ಷ ಪುತಿನ್ ಭೋಜನಕೂಟಕ್ಕೆ ಶಶಿ ತರೂರಗೆ ಆಹ್ವಾನ, ಆದ್ರೆ ರಾಹುಲ್-ಖರ್ಗೆಗೆ ಆಹ್ವಾನವಿಲ್ಲ..

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಗೌರವಾರ್ಥವಾಗಿ ಶುಕ್ರವಾರ ರಾತ್ರಿ ಆಯೋಜಿಸಲಾಗಿದ್ದ ಸರ್ಕಾರದ ʼಔತಣಕೂಟ’ದಲ್ಲಿ (State Dinner) ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾಗವಹಿಸಲಿದ್ದಾರೆ. ಆದರೆ, ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿಲ್ಲ. ಸಂಸದ ಶಶಿ ತರೂರ್ ಅವರು ಶುಕ್ರವಾರ ಸಂಜೆ (ಡಿ.೫) … Continued

ವೀಡಿಯೊ | ಪ್ರೋಟೋಕಾಲ್ ಮೀರಿ ವಿಮಾನ ನಿಲ್ದಾಣಕ್ಕೆ ತೆರಳಿ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ..! ರಷ್ಯಾಕ್ಕೆ ಅಚ್ಚರಿ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಗುರುವಾರ (ಡಿಸೆಂಬರ್‌ 4)ಸಂಜೆ ದೆಹಲಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಉಭಯ ನಾಯಕರು ಒಂದೇ ಕಾರಿನಲ್ಲಿ ಹೊರಡುವ ಮುನ್ನ, ಪರಸ್ಪರ ಹಸ್ತಲಾಘವ ಮಾಡಿ, ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಈ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಪ್ರೋಟೋಕಾಲ್ (ಶಿಷ್ಟಾಚಾರ) … Continued

ಭಾರೀ ವಿವಾದಕ್ಕೆ ಕಾರಣವಾದ ಕಾಂಗ್ರೆಸ್ ನಾಯಕಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಚಹಾ ಮಾರುತ್ತಿರುವ ಎಐ (AI) ರಚಿತ ವೀಡಿಯೊ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರುತ್ತಿರುವ ದೃಶ್ಯವಿರುವ ಎಐ-ಸೃಷ್ಟಿಸಿದ ವೀಡಿಯೊವನ್ನು ಹಿರಿಯ ಕಾಂಗ್ರೆಸ್ ನಾಯಕಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರು  ಪ್ರಧಾನಿ ಮೋದಿ ಅವರು ಜಾಗತಿಕ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಗ್ಲಾಸ್‌ಗಳೊಂದಿಗೆ ನಡೆಯುತ್ತಿರುವ ಕೃತಕ ಬುದ್ಧಿಮತ್ತೆ (AI) ಸೃಷ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. … Continued

ವೀಡಿಯೊ..: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್‌ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ … Continued

ಬಿಹಾರ ಚುನಾವಣೆ: ಇಂಡಿ ಬ್ಲಾಕ್‌ ನ ‘ಎಂವೈ’ ಸೂತ್ರಕ್ಕೆ ‘ಎಂವೈಇ’ ಸೂತ್ರ ಬಳಸಿ ಭರ್ಜರಿ ಗೆಲುವು ಸಾಧಿಸಿದ ಎನ್‌ಡಿಎ ; ಏನಿದು ಎಂವೈಇ..?

 ಪಾಟ್ನಾ: ಬಿಹಾರದ ರಾಜಕಾರಣದಲ್ಲಿ ಸುಮಾರು ಮೂರು ದಶಕಗಳ ಕಾಲ ಲಾಲು ಪ್ರಸಾದ ಯಾದವ್ ಅವರ ಆರ್‌ಜೆಡಿ ಪಕ್ಷದ ಏಳಿಗೆಗೆ ಶಕ್ತಿಯಾಗಿದ್ದ ‘ಎಂವೈ’ (ಮುಸ್ಲಿಂ-ಯಾದವ್) ಸಮೀಕರಣವು ಈಗ ಬದಲಾಗಿದೆ. 2025ರ ಬಿಹಾರ ಚುನಾವಣೆಯಲ್ಲಿ, ಹೊಸ ‘ಎಂವೈಇ’ (ಮಹಿಳೆ, ಯುವಜನತೆ ಮತ್ತು ಅತಿ ಹಿಂದುಳಿದ ವರ್ಗ-EBC) ಸಮೀಕರಣವು ಹೊರಹೊಮ್ಮಿದ್ದು, ಇದು ಈ ಸಲದ ಚುನಾವಣೆಯಲ್ಲಿ ಎನ್‌ಡಿಎಗೆ ಅಭೂತಪೂರ್ವ ಜಯ … Continued

ಬಿಹಾರ ಚುನಾವಣಾ ಫಲಿತಾಂಶ : ಭಾರೀ ಗೆಲುವಿನತ್ತ ಎನ್‌ ಡಿಎ, ಮಹಾಘಟಬಂಧನಕ್ಕೆ ಹಿನ್ನಡೆ

ಪಾಟ್ನಾ : ಬಿಹಾರದ ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಭಾರೀ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ (Mahagathbandhan) ಹಿನ್ನಡೆಯಲ್ಲಿದೆ. ಬಿಹಾರದಲ್ಲಿ ಬಹುತೇಕ ಎಲ್ಲಾ ಚುನಾವಣಾ ಸಮೀಕ್ಷೆಗಳು (Exit Polls) ಎನ್‌ಡಿಎಗೆ ಸ್ಪಷ್ಟ ಮುನ್ನಡೆ … Continued

ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಅಧಿಕಾರಕ್ಕೆ ; ಭವಿಷ್ಯ ನುಡಿದ 8 ಎಕ್ಸಿಟ್ ಪೋಲ್‌ ಗಳು

ಬಿಹಾರದಲ್ಲಿ ಮತದಾನ ಮುಗಿದಿದ್ದು, ಇದರ ಬೆನ್ನಿಗೇ ಮತತಗಟ್ಟೆ ಸಮೀಕ್ಷೆಗಳು ರಾಜಕೀಯ ಪಕ್ಷಗಳ ಭವಿಷ್ಯ ಏನಾಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಾರಿಯೂ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಎಂಟು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ಎನ್‌ಡಿಎ 145 ರಿಂದ 160 … Continued

“ನಿಮ್ಮ ಚರ್ಮದ ಆರೈಕೆಯ ಗುಟ್ಟೇನು? ; ಭಾರತದ ವನಿತಾ ಕ್ರಿಕೆಟ್ ತಂಡದ ಆಟಗಾರ್ತಿ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರವೇನು ಗೊತ್ತೆ…?

ನವದೆಹಲಿ : ಐತಿಹಾಸಿಕ ಏಕದಿನ ವಿಶ್ವಕಪ್ ಗೆಲುವಿನ ನಂತರ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಭೇಟಿ ಮಾಡಿ ಶ್ಲಾಘಿಸಿದರು. ಸಂವಾದದ ಸಂದರ್ಭದಲ್ಲಿ ಅವರಿಗೆ ಒಂದು ಹಾಸ್ಯಭರಿತ ಪ್ರಶ್ನೆ ಎದುರಾಯಿತು. ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್ ಹರ್ಲೀನ್ ಡಿಯೋಲ್ ಅವರು ನಿಮ್ಮ ಚರ್ಮದ ಆರೈಕೆಯ (Skincare) ರಹಸ್ಯವೇನು? ಎಂದು … Continued

ಬಿಹಾರ ಚುನಾವಣೆ : ಈ ಬಾರಿ ಅಧಿಕಾರಿ ಯಾರಿಗೆ ? ಜೆವಿಸಿ ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು..?

ಬಿಹಾರ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ, ಪ್ರಶಾಂತ್ ಕಿಶೋರ್ ಅವರ ಜನ್‌ ಸುರಾಜ್‌ ಪಕ್ಷವು ಎನ್‌ಡಿಎ (NDA) ಮತ್ತು ಮಹಾ ಮೈತ್ರಿಕೂಟದ ಜೊತೆಗೆ ಸ್ಪರ್ಧಿಸುತ್ತಿದ್ದು, ಸ್ಪರ್ಧೆಯನ್ನು ಆಸಕ್ತಿದಾಯಕವಾಗಿಸಿದೆ. ಚುನಾವಣೆಗೆ ಕೆಲದಿನಗಳ ಮೊದಲು, ಟೈಮ್ಸ್ ನೌ ಸುದ್ದಿ ಚಾನೆಲ್ -ಜೆವಿಸಿ (JVC) ನಡೆಸಿದ ಅಭಿಪ್ರಾಯ ಸಮೀಕ್ಷೆಯು … Continued

ನವೆಂಬರ್‌ 28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೆಂಬರ್ 28ರ ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ … Continued