ಕೊಟ್ಟ ಮಾತಿನಂತೆ ಬಾಗಲಕೋಟೆ ಹುಡುಗಿಗೆ ಪತ್ರ ಬರೆದ ಪ್ರಧಾನಿ ಮೋದಿ

ಬಾಗಲಕೋಟೆ : ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್‌ ಭಾವಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ  ಯುವತಿ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಅವರು ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಏಪ್ರಿಲ್ 29 ರಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಂದಿದ್ದ … Continued

ತಾಯಂದಿರ ದಿನದಂದು ಚುನಾವಣಾ ಸಮಾವೇಶದಲ್ಲಿ ಇಬ್ಬರಿಂದ ಅನಿರೀಕ್ಷಿತ ಉಡುಗೊರೆ ಪಡೆದ ಪ್ರಧಾನಿ ಮೋದಿ..| ವೀಕ್ಷಿಸಿ

ಭಾನುವಾರ ಬಂಗಾಳದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೃದಯ ತುಂಬಿ ಬರುವ ಕ್ಷಣವನ್ನು ಅನುಭವಿಸಿದರು. ಹೂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಸಭೆಯ ಮಧ್ಯದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ತಾಯಿ ದಿವಂಗತ ಹೀರಾಬೆನ್ ಮೋದಿ ಅವರ ಭಾವಚಿತ್ರಗಳನ್ನು ಹಿಡಿದಿರುವುದನ್ನು ಗಮನಿಸಿದರು. ಪ್ರಧಾನಿಯವರು ಅವರ ಪ್ರಯತ್ನವನ್ನು ಗುರುತಿಸಿದರು ಮತ್ತು ತಾಯಂದಿರ ದಿನವನ್ನು ಗುರುತಿಸುವ … Continued

ಲೋಕಸಭೆ ಚುನಾವಣೆ : ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ನಿವೃತ್ತ ನ್ಯಾಯಮೂರ್ತಿಗಳು

ನವದೆಹಲಿ: ಲೋಕಸಭೆ ಚುನಾವಣೆ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ರಮವಾಗಿ ಸುಪ್ರೀಂ ಕೋರ್ಟ್‌ ಮತ್ತು ದೆಹಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಮದನ್ ಲೋಕೂರ ಮತ್ತು ಎ.ಪಿ. ಶಾ ಅವರು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ. ಈ ಪ್ರಸ್ತಾವನೆ ಪಕ್ಷಾತೀತವಾಗಿದ್ದು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ಈ ಇಬ್ಬರೂ ನಿವೃತ್ತ … Continued

ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಚೆನ್ನೈ: ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದರೂ, ನೇರವಾಗಿ ನರೇಂದ್ರ … Continued

ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

ಬಾಗಲಕೋಟೆ : ಐದು ವರ್ಷದ ಹಿಂದೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತದ ವಾಯುದಾಳಿ (Balakot airstrike) ನಡೆದ ಘಟನೆಯ ಬಗ್ಗೆ ನರೇಂದ್ರ ಮೋದಿ ರಹಸ್ಯ ವಿಚಾರ ಬಹಿರಂಗ ಪಡಿಸಿದ್ದಾರೆ. 2019ರ ಬಾಲಾಕೋಟ್ ಏರ್​ಸ್ಟ್ರೈಕ್ ನಡೆದ ಬಳಿಕ ಆ ಘಟನೆ ಬಗ್ಗೆ ಪ್ರಪಂಚಕ್ಕೆ ತಿಳಿಸುವ ಮೊದಲು ಅಧಿಕೃತವಾಗಿ ಮೊದಲು ತಿಳಿಸಿದ್ದು ಪಾಕಿಸ್ತಾನಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ … Continued

6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾಧನಾ ಸ್ಥಳದ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷ ಚುನಾವಣೆಯಿಂದ ಅನರ್ಹಗೊಳಿಸಬೇಕು ಎಂದು … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ಮೊರೆನಾ : ಇಂದಿರಾ ಗಾಂಧಿ ಅವರ ಹತ್ಯೆ ಬಳಿಕ ಅವರಿಗೆ ಸೇರಿದ ಆಸ್ತಿಗಳು ಹಾಗೂ ಕುಟುಂಬದ ಸ್ವತ್ತುಗಳು ಸರ್ಕಾರದ ವಶ ಆಗುವುದನ್ನು ತಪ್ಪಿಸಿ ಆಸ್ತಿ ಉಳಿಸಿಕೊಳ್ಳುವ ಸಲುವಾಗಿ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದು ಮಾಡಿದರು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಈಗ ಕಾಂಗ್ರೆಸ್ ಮತ್ತೆ ಪಿತ್ರಾರ್ಜಿತ ತೆರಿಗೆ … Continued

ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನವದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ನಡೆದಿರುವ ಭಾರೀ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ನಮ್ಮ ನ್ಯಾಯ ಪತ್ರವನ್ನು ವಿವರಿಸಲು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಮಯ ಕೊಡಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂಪತ್ತು … Continued