ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!

ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸಾಧ್ಯತೆ

ಮುಂಬೈ: ಎನ್‌ಸಿಪಿ (NCP) ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ ತೆರವಾಗಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅವರ ಪತ್ನಿ ಹಾಗೂ ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ಶನಿವಾರ (ಜನವರಿ 31) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಸಂಜೆ ಸುನೇತ್ರಾ ಪವಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರೆ ಮಹಾರಾಷ್ಟ್ರದ … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಬಿಜೆಪಿ ಅತಿದೊಡ್ಡ ಪಕ್ಷ, ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರದ ಒಟ್ಟು 246 ನಗರ ಪಾಲಿಕೆಗಳು ಹಾಗೂ 42 ನಗರ ಪಂಚಾಯತಗಳಿಗೆ ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.  246 ನಗರ ಪಾಲಿಕೆಗಳಲ್ಲಿ ಮಹಾಯುತಿ ಮೈತ್ರಿಕೂಟವು  207 ನಗರ ಪಾಲಿಕೆಗಳಲ್ಲಿ ಅಧ್ಯಕ್ಷ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.  ಮಹಾ ವಿಕಾಸ ಅಘಾಡಿಯನ್ನು ಒಟ್ಟು 44 ಕ್ಕೆ ಸೀಮಿತಗೊಳಿಸಿದೆ. ರಾಜ್ಯ ಚುನಾವಣಾ ಆಯೋಗದ  ಪ್ರಕಾರ, … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ : ಅಭೂತಪೂರ್ವ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ…

ಮುಂಬೈ: ಮಹಾರಾಷ್ಟ್ರದಾದ್ಯಂತ ನಡೆದ ನಗರಸಭೆ ಮತ್ತು ನಗರ ಪಂಚಾಯತ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿಯ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ತನ್ನ ಪಾರುಪತ್ಯ ಮೆರೆದಿದೆ. ಒಟ್ಟು 288 ಸ್ಥಳೀಯ ಸಂಸ್ಥೆಗಳ ಪೈಕಿ ಸಿಂಹಪಾಲು ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾಯುತಿ ಮೈತ್ರಿಕೂಟವು ರಾಜ್ಯದ ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ … Continued

ಮಹಾರಾಷ್ಟ್ರ ವಿಧಾನಸಭೆ ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ವಿಪಕ್ಷಗಳ ಶಾಸಕರು….

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನೂತನ ಚುನಾಯಿತ ಶಾಸಕರು ಇಂದು, ಶನಿವಾರ(ಡಿಸೆಂಬರ್‌ 7) ನಡೆದ ಮಹಾರಾಷ್ಟ್ರ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಾಕ್‌ಔಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ದುರ್ಬಳಕೆಯಿಂದ ಆಡಳಿತಾರೂಢ ಮಹಾಯುತಿ ಒಕ್ಕೂಟದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದಾರೆ. ಆದಾಗ್ಯೂ, ವಿಪಕ್ಷಗಳ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಮಹಾರಾಷ್ಟ್ರದ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ ‘3 ತಪ್ಪುಗಳು’ ಕಾರಣ ಎಂದು ಭಾವಿಸಿದ ಮಿತ್ರಪಕ್ಷಗಳು ; ಅವುಗಳು ಯಾವುದೆಂದರೆ….

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮುಂದೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಮಕಾಡೆ ಮಲಗಿದೆ. ಇದರಿಂದಾಗಿ ಈಗ ಇಂಡಿಯಾ ಬ್ಲಾಕ್‌ ನಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಗೋಚರಕ್ಕೆ ಬಂದಿದೆ. ವಿಪಕ್ಷವು ಮತ್ತೊಂದು ಚುನಾವಣಾ ಸೋಲನ್ನು ಎದುರಿಸಿತು. ಕಾಂಗ್ರೆಸ್ ನೇತೃತ್ವದ ಮಹಾ … Continued

ಕಾರಿನ ಮೇಲೆ ಕಲ್ಲು ತೂರಾಟ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖಗೆ ಗಂಭೀರ ಗಾಯ

ನಾಗ್ಪುರ : ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಶರದ್‌ ಪವಾರ್‌ ಬಣ) ನಾಯಕ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ಅವರು ನಾರ್ಖೇಡ್ ಗ್ರಾಮದಲ್ಲಿ ನಡೆದ … Continued

ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಆಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ; ಪ್ರಕಾಶ ಅಂಬೇಡ್ಕರ್ ಸ್ಫೋಟಕ ಹೇಳಿಕೆ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್) ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ದಾವೂದ್ ಇಬ್ರಾಹಿಂ ಅವರನ್ನು ದುಬೈನಲ್ಲಿ ಭೇಟಿಯಾಗಿದ್ದರು ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ ಅಂಬೇಡ್ಕರ್ ಶುಕ್ರವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶರದ್ ಪವಾರ್ ಅವರು ಮುಖ್ಯಮಂತ್ರಿಯಾಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂ ಅವರನ್ನು ಭೇಟಿ ಮಾಡಲು … Continued