ಮಹಾರಾಷ್ಟ್ರ : ವಿಧಾನಸಭೆ ಚುನಾವಣೆಗೆ ಮುನ್ನ ಎನ್‌ಸಿಪಿಗೆ ಸೇರ್ಪಡೆಗೊಂಡ ಖ್ಯಾತ ನಟ ಸಯಾಜಿ ಶಿಂಧೆ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಖ್ಯಾತ ಬಹುಭಾಷಾ ನಟ ಸಯಾಜಿ ಶಿಂಧೆ ಅವರು ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಗೆ ಸೇರ್ಪಡೆಗೊಂಡಿದ್ದಾರೆ. ವಿವಿಧ ಭಾರತೀಯ ಭಾಷೆಗಳ ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಸಯಾಜಿ ಶಿಂಧೆ ಅವರು, ಉಪಮುಖ್ಯಮಂತ್ರಿ ಅಜಿತ್ ಪವಾರ್, ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು … Continued

ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯಲ್ಲಿ 7 ಕಾಂಗ್ರೆಸ್ ಶಾಸಕರಿಂದ ಅಡ್ಡ ಮತದಾನ : ವರದಿ

ಮುಂಬೈ: ರಾಜ್ಯದ 48 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆದ್ದು ಬೀಗುತ್ತಿದ್ದ ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಗೆ ಆಘಾತ ಎದುರಾಗಿದೆ. ಆತಂಕಕಾರಿ ಸಂಕೇತವಾಗಿ, ಶುಕ್ರವಾರ ನಡೆದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಕನಿಷ್ಠ ಏಳು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳು … Continued

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್‌ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್‌ ಪವಾರ್

ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಅಜಿತ್ ಪವಾರ್ ಬಣದ 19 ಶಾಸಕರು ಪಕ್ಷ ಬದಲಿಸ್ತಾರೆ : ಶರದ್ ಪವಾರ್ ಮೊಮ್ಮಗ

ಮುಂಬೈ: ಮುಂಬರುವ ಮಹಾರಾಷ್ಟ್ರ ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ 18 ​​ರಿಂದ 19 ಶಾಸಕರು ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್‌ ಬಣ) ನಾಯಕ ರೋಹಿತ್ ಪವಾರ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2023 ರಲ್ಲಿ … Continued

ಶರದ್ ಪವಾರ್ ಬಣಕ್ಕೆ ನೂತನ ಚಿಹ್ನೆ ಬಳಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ :ಮುಂಬರುವ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ‘ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ ಶರದ್ ಚಂದ್ರ ಪವಾರ್ ಬಣವು ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ನೂತನ ಚಿಹ್ನೆಯನ್ನು ಬಳಸಲು ಇಂದು, ಮಂಗಳವಾರ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಶರದ್ ಪವಾರ್ ಬಣಕ್ಕೆ ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ಚಿಹ್ನೆಯನ್ನು ಕಾಯ್ದಿರಿಸುವಂತೆ ಭಾರತೀಯ ಚುನಾವಣಾ … Continued

ಶರದ್ ಪವಾರಗೆ ದೊಡ್ಡ ಹಿನ್ನಡೆ..: ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ಎನ್‌ಸಿಪಿ ಎಂದು ತೀರ್ಪು ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಮಂಗಳವಾರ ಚುನಾವಣಾ ಆಯೋಗವು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು “ನಿಜವಾದ” ಎನ್‌ಸಿಪಿ ಎಂದು ಪ್ರಕಟಿಸಿದ್ದು, ಪಕ್ಷದ ಸಂಸ್ಥಾಪಕ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ಅವರೊಂದಿಗಿನ ಬಣದ ನಡುವಿನ ವಿವಾದವನ್ನು ಕೊನೆಗೊಳಿಸಿದೆ. ಅಜಿತ್ ಪವಾರ್ ತನ್ನ ಚಿಕ್ಕಪ್ಪ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಮಹಾರಾಷ್ಟ್ರದ ಆಡಳಿತಾರೂಢ … Continued

ʼಭಗವಾನ್ ರಾಮನು ಮಾಂಸಾಹಾರಿ’ : ರಾಮ ಮಂದಿರ ಉದ್ಘಾಟನೆಗೆ ಮುನ್ನ ವಿವಾದ ಸೃಷ್ಟಿಸಿದ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಹೇಳಿಕೆ

ಮುಂಬೈ : ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರದ ಉದ್ಘಾಟನೆ ಸಮಾರಂಭ ನಡೆಯುವ ಕೆಲವು ದಿನಗಳ ಮೊದಲು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಅವರು “ಭಗವಾನ್ ರಾಮನು ಮಾಂಸಾಹಾರಿ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಎನ್‌ಸಿಪಿಯ ಶರದ್ ಪವಾರ ಬಣಕ್ಕೆ ಸೇರಿದ ಜಿತೇಂದ್ರ ಅವ್ಹಾದ್ ಅವರು ಬುಧವಾರ ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ … Continued

ಮಹಾರಾಷ್ಟ್ರ ಆಡಳಿತಾರೂಢ ಮೈತ್ರಿಕೂಟಕ್ಕೆ ನವಾಬ್ ಮಲಿಕ್ ಸೇರ್ಪಡೆ ವಿರೋಧಿಸಿ ಎನ್‌ ಸಿಪಿಯ ಅಜಿತ್ ಪವಾರಗೆ ಪತ್ರ ಬರೆದ ಫಡ್ನವೀಸ್‌

ಮುಂಬೈ : ಎನ್‌ಸಿಪಿ ಶಾಸಕ ನವಾಬ್ ಮಲಿಕ್ ಅವರನ್ನು ಮಹಾಯುತಿ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಪಕ್ಷದ ದೇವೇಂದ್ರ ಫಡ್ನವೀಸ್ ಅವರು ಮತ್ತೊಬ್ಬ ಉಪಮುಖ್ಯಮಂತ್ರಿ ಮತ್ತು ಮೈತ್ರಿಪಕ್ಷವಾದ ಎನ್‌ಸಿಪಿ ಅಜಿತ್ ಪವಾರ್ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ನವಾಬ್ ಮಲಿಕ್ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ … Continued

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನೀಡಲು ವಿಧಾನಸಭಾ ಸ್ಪೀಕರ್‌ ಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಈ ಹಿಂದಿನ ಶಿವಸೇನೆ ಪಕ್ಷದ ಬಂಡಾಯ ಸದಸ್ಯರ ವಿರುದ್ಧದ ಅನರ್ಹತೆ ಪ್ರಕರಣದ ಕುರಿತಾದ ತೀರ್ಪನ್ನು ಈ ವರ್ಷದ ಡಿಸೆಂಬರ್ 31ರ ಒಳಗೆ ಮತ್ತು ಎನ್‌ಸಿಪಿ ಶಾಸಕರ ವಿರುದ್ಧ ಅನರ್ಹತೆಯನ್ನು 2024ರ ಜನವರಿ 24ರ ಒಳಗೆ ನೀಡುವಂತೆ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ … Continued