ವೀಡಿಯೊ..| ಎನ್‌ಸಿಪಿ ಶಾಸಕರ ಮನೆಗೆ ಬೆಂಕಿ ಹಚ್ಚಿದ ಮರಾಠಾ ಮೀಸಲಾತಿ ಪ್ರತಿಭಟನಾಕಾರರು

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕ ಪ್ರಕಾಶ ಸೋಲಂಕೆ ಅವರ ಮನೆಯನ್ನು ಮರಾಠಾ ಮೀಸಲಾತಿ ಚಳವಳಿಗಾರರು ಸೋಮವಾರ ಧ್ವಂಸಗೊಳಿಸಿದ್ದಾರೆ ಮತ್ತು ಬೆಂಕಿ ಹಚ್ಚಿದ್ದಾರೆ. ಅವರ ಮನೆಯಲ್ಲಿ ನಿಲ್ಲಿಸಿದ್ದ ಕಾರಿಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ದೃಶ್ಯಗಳು ಅವರ ಬಂಗಲೆಯಲ್ಲಿ ಭಾರಿ ಬೆಂಕಿ ಮತ್ತು ಅದರ … Continued

ರಾಷ್ಟ್ರೀಯ ಪಕ್ಷದ ಸ್ಥಾಮಾನ ಪಡೆದ ಎಎಪಿ : ಎನ್‌ಸಿಪಿ, ಸಿಪಿಐ, ಟಿಎಂಸಿಗೆ ಹಿನ್ನಡೆ

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ. ಶರದ್ ಪವಾರ್ ಅವರ ಶರದ್‌ ಪವಾರ್‌ ಎನ್‌ಸಿಪಿ, ಸಿಪಿಐ ಮತ್ತು ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನ ಕಳೆದುಕೊಂಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಏಪ್ರಿಲ್ … Continued

ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ ಕಾಂಗ್ರೆಸ್-ಎಸ್‌ಪಿ-ಎನ್‌ಸಿಪಿ ಶಾಸಕರಿಂದ ಅಡ್ಡ ಮತದಾನ…!?

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ ಅಡ್ಡ ಮತದಾನವು ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡರಿಂದಲೂ ನಡೆದ ಬಗ್ಗೆ ವರದಿಯಾಗಿದೆ. ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಪಾಳಯ, ಗುಜರಾತ್‌ನಲ್ಲಿ ಎನ್‌ಸಿಪಿ ಮತ್ತು ಒಡಿಶಾ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಅಡ್ಡ ಮತದಾನ ವರದಿಯಾಗಿದೆ. ಉತ್ತರ ಪ್ರದೇಶ ಬರೇಲಿಯ ಭೋಜಿಪುರದ ಸಮಾಜವಾದಿ ಪಕ್ಷದ ಶಾಸಕರಾದ … Continued

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಅನಾರೋಗ್ಯ, ಮಾ.೩೧ರಂದು ಶಸ್ತ್ರ ಚಿಕಿತ್ಸೆ

ಮುಂಬೈ: ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಆರೋಗ್ಯ ಹದಗೆಟ್ಟಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಅವರ ಪಿತ್ತಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಭಾನುವಾರ ಸಂಜೆಯಿಂದ ಶರದ್ ಪವಾರ್ ಅವರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅವರ ಪಿತ್ತಕೋಶದಲ್ಲಿ ಕಲ್ಲುಗಳು ಇರುವುದನ್ನು ವೈದ್ಯರು ಪತ್ತೆಹಚ್ಚಿದ್ದಾರೆ. ಹೀಗಾಗಿ ಮುಂದಿನ ಅವರ ಎಲ್ಲ … Continued

ಗೃಹ ಸಚಿವ ದೇಶ್ಮುಖ್‌ ವಿರುದ್ಧ ಆರೋಪ ಗಂಭೀರ ಸ್ವರೂಪದ್ದು:ಶರದ್‌ ಪವಾರ್‌

ಮುಂಬೈ; ರಾಷ್ಟ್ರೀಯ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಾಗಿ ಪರಿಣಮಿಸುತ್ತಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಕಳಂಕಿತ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಗೃಹ ಸಚಿವ ಅನಿಲ ದೇಶ್ಮುಖ್ ‌ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ … Continued

ಎನ್‌ಸಿಪಿಗೆ ಬಿಜೆಪಿ ಶಾಸಕನ ೫ ಕೋಟಿ ರೂ. ದೇಣಿಗೆ !

ಮುಂಬೈ: ಶರದ್‌ ಪವಾರ್‌ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ೨೦೧೯-೨೦ನೇ ಸಾಲಿನಲ್ಲಿ ೫೯.೯೪ ಕೋಟಿ ರೂ. ಪಕ್ಷದ ದೇಣಿಗೆ ಸಂಗ್ರಹ ಮಾಡಿದ್ದು, ಕಳೆದ ವರ್ಷ ಪಕ್ಷ ಕೇವಲ ೧೨.೦೫ ಕೋಟಿ ರೂ. ದೇಣಿಗೆ ಸಂಗ್ರಹಿಸಿತ್ತು. ಶಿವಸೇನಾ, ಕಾಂಗ್ರೆಸ್‌ ನೊಂದಿಗೆ ಮಹಾ ವಿಕಾಸ ಅಗಾಢಿ ಸರಕಾರ ನಡೆಸುತ್ತಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಹಣ ಹರಿದು … Continued