ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಅವಮಾನ : ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ಮುಂದಾದ ಪ್ರತಿಪಕ್ಷಗಳಿಗೆ ಎನ್‌ಡಿಎ ತರಾಟೆ

ನವದೆಹಲಿ: ಮೇ 28 ರಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ ವಿರೋಧ ಪಕ್ಷಗಳ ನಿರ್ಧಾರವನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಬುಧವಾರ ಖಂಡಿಸಿದೆ. “ಈ ಕೃತ್ಯವು ಕೇವಲ ಅಗೌರವವಲ್ಲ; ಇದು ನಮ್ಮ ಮಹಾನ್ ರಾಷ್ಟ್ರದ ಪ್ರಜಾಸತ್ತಾತ್ಮಕ ನೀತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಘೋರವಾದ ಅವಮಾನವಾಗಿದೆ” ಎಂದು ಎನ್‌ಡಿಎ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. … Continued