ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಬಿಜೆಪಿ, ಇತರ ಪಕ್ಷಗಳ ಸೀಟು ಹಂಚಿಕೆ ಅಂತಿಮ

ಚೆನ್ನೈ: ತಮಿಳುನಾಡಿನ 234 ಸದಸ್ಯ ಬಲದ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸೋಮವಾರ ತನ್ನ ಸೀಟು ಹಂಚಿಕೆಯನ್ನು ಅಧಿಕೃತವಾಗಿ ಅಂತಿಮಗೊಳಿಸಿದೆ. ಚೆನ್ನೈನಲ್ಲಿರುವ ಎಐಎಡಿಎಂಕೆ (AIADMK) ಕೇಂದ್ರ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲಾಗಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಲ್ಲಿ ಎಐಎಡಿಎಂಕೆ (AIADMK) 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಳೆದ … Continued

ಅಸ್ಸಾಂ ಚುನಾವಣೆ: ಎರಡು ಪ್ರಾದೇಶಿಕ ಪಕ್ಷಗಳ ಜೊತೆ ಬಿಜೆಪಿ ಸೀಟು ಹಂಚಿಕೆ ಅಂತಿಮ

ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ (NDA) ಮೈತ್ರಿಕೂಟದ ಸೀಟು ಹಂಚಿಕೆ ಸೂತ್ರವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಬಹಿರಂಗಪಡಿಸಿದ್ದಾರೆ. ಈ ಒಪ್ಪಂದದಂತೆ ಬಿಜೆಪಿ 89 ಸ್ಥಾನಗಳಲ್ಲಿ, ಅದರ ಮಿತ್ರಪಕ್ಷವಾದ ಅಸೋಮ್ ಗಣ ಪರಿಷತ್ (AGP) 26 ಸ್ಥಾನಗಳಲ್ಲಿ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) 11 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ … Continued

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ರಾಜ್ಯಸಭೆ 37 ಸ್ಥಾನಗಳಿಗೆ ಚುನಾವಣೆ : ಎನ್‌ ಡಿಎಗೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ; ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯ ಭೀತಿ

ನವದೆಹಲಿ: ಮಾರ್ಚ್ 16 ರಂದು 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇಲ್ಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ತನ್ನ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಸೂಚನೆಗಳಿವೆ. ಮಹಾರಾಷ್ಟ್ರ, ಬಿಹಾರ ಮೊದಲಾದ ರಾಜ್ಯಗಳಲ್ಲಿ ವಿರೋಧ ಪಕ್ಷಗಳ ಆಂತರಿಕ ಹಿತಾಸಕ್ತಿಗಳು ಭಿನ್ನವಾಗಿರುವುದರಿಂದ, ಇಂಡಿಯಾ (INDIA) ಮೈತ್ರಿಕೂಟವು ಒಗ್ಗಟ್ಟಾಗಿ ಉಳಿಯುವುದೇ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ : ಯುಡಿಎಫ್‌ ಗೆ ಭರ್ಜರಿ ಗೆಲುವು ; ಆಡಳಿತಾರೂಢ ಎಡರಂಗಕ್ಕೆ ಹಿನ್ನಡೆ

ತಿರುವನಂತಪುರಂ: 2025ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ (UDF) ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳೆರಡರಲ್ಲೂ ಭರ್ಜರಿ ವಿಜಯವನ್ನು ದಾಖಲಿಸಿದೆ. ಆರು ಪ್ರಮುಖ ಮಹಾನಗರ ಪಾಲಿಕೆಗಳಲ್ಲಿ ಯುಡಿಎಫ್ ನಾಲ್ಕರಲ್ಲಿ (ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು) ಭರ್ಜರಿ ಜಯಗಳಿಸಿದೆ.  ಎಲ್‌ಡಿಎಫ್ (LDF) ಕೋಝಿಕ್ಕೋಡ್ ಅನ್ನು ಮಾತ್ರ ಉಳಿಸಿಕೊಂಡಿದೆ. ಆದರೆ, … Continued

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ ; ಎಡ ಪಕ್ಷಗಳಿಂದ ತಿರುವನಂತಪುರಂ ಮಹಾನಗರ ಪಾಲಿಕೆ ಕಸಿದುಕೊಂಡ ಬಿಜೆಪಿ

ತಿರುವನಂತಪುರಂ: ಭಾರೀ ಕುತೂಹಲ ಕೆರಳಿಸಿದ್ದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ(Kerala local body polls) ಫಲಿತಾಂಶ ಹೊರಬಿದಿದ್ದು, ಆಡಳಿತಾರೂಢ ಎಲ್‌ಡಿಎಫ್‌ಗೆ ಭಾರೀ ಮುಖಭಂಗವಾಗಿದೆ.ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಇದೇ ಮೊದಲ ಬಾರಿಗೆ ಐತಿಹಾಸಿಕ ವಿಜಯ ಸಾಧಿಸಿದೆ. ಪಾಲಿಕೆಯ 101 ವಾರ್ಡ್‌ಗಳಲ್ಲಿ ಎನ್‌ಡಿಎ ಒಟ್ಟು 50 … Continued

ಎನ್‌ ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶಕುಮಾರ ಆಯ್ಕೆ

ನವದೆಹಲಿ: ಬುಧವಾರ ಜೆಡಿಯು ಮುಖ್ಯಸ್ಥ ನಿತೀಶಕುಮಾರ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಮತ್ತು ಅವರು ದಾಖಲೆಯ ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ (ನವೆಂಬರ್‌ 20)ಬೆಳಿಗ್ಗೆ 11:30 ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಎಲ್ಲಾ … Continued

ಬಿಹಾರ ಚುನಾವಣೆ ಫಲಿತಾಂಶ : ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ‘ವ್ಯಂಗ್ಯದ ಪೋಸ್ಟ್‌ʼ ನೂರಕ್ಕೆ ನೂರು ನಿಜವಾಯ್ತು…! ; ಏನದು ಪೋಸ್ಟ್‌..?

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮೂರು ದಿನಗಳ ಮುನ್ನ, ಅಂದರೆ ನವೆಂಬರ್ 11 ರಂದು, ಬಿಜೆಪಿಯ ಮಾಜಿ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರು ಮಾಡಿದ ಒಂದು ‘ಎಕ್ಸ್’ (ಹಿಂದಿನ ಟ್ವಿಟರ್) ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ವ್ಯಂಗ್ಯದಿಂದ ಕೂಡಿದ್ದ ಈ ಪೋಸ್ಟ್, ದೇಶದ … Continued

ಬಿಹಾರ ಚುನಾವಣೆ: ಇಂಡಿ ಬ್ಲಾಕ್‌ ನ ‘ಎಂವೈ’ ಸೂತ್ರಕ್ಕೆ ‘ಎಂವೈಇ’ ಸೂತ್ರ ಬಳಸಿ ಭರ್ಜರಿ ಗೆಲುವು ಸಾಧಿಸಿದ ಎನ್‌ಡಿಎ ; ಏನಿದು ಎಂವೈಇ..?

 ಪಾಟ್ನಾ: ಬಿಹಾರದ ರಾಜಕಾರಣದಲ್ಲಿ ಸುಮಾರು ಮೂರು ದಶಕಗಳ ಕಾಲ ಲಾಲು ಪ್ರಸಾದ ಯಾದವ್ ಅವರ ಆರ್‌ಜೆಡಿ ಪಕ್ಷದ ಏಳಿಗೆಗೆ ಶಕ್ತಿಯಾಗಿದ್ದ ‘ಎಂವೈ’ (ಮುಸ್ಲಿಂ-ಯಾದವ್) ಸಮೀಕರಣವು ಈಗ ಬದಲಾಗಿದೆ. 2025ರ ಬಿಹಾರ ಚುನಾವಣೆಯಲ್ಲಿ, ಹೊಸ ‘ಎಂವೈಇ’ (ಮಹಿಳೆ, ಯುವಜನತೆ ಮತ್ತು ಅತಿ ಹಿಂದುಳಿದ ವರ್ಗ-EBC) ಸಮೀಕರಣವು ಹೊರಹೊಮ್ಮಿದ್ದು, ಇದು ಈ ಸಲದ ಚುನಾವಣೆಯಲ್ಲಿ ಎನ್‌ಡಿಎಗೆ ಅಭೂತಪೂರ್ವ ಜಯ … Continued