ಸಭೆಗೆ ಆಹ್ವಾನಿಸದೇ ಇರುವುದಕ್ಕೆ ಹನುಮಾನ್ ಬೇನಿವಾಲ್ ತೀವ್ರ ಅಸಮಾಧಾನ : ಇಂಡಿಯಾ ಮೈತ್ರಿಕೂಟದ ಆಂತರಿಕ ಬಿರುಕು ಬಹಿರಂಗ…

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದ ನಾಗೌರ್ ಕ್ಷೇತ್ರವನ್ನು ಗೆದ್ದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (RLP) ನಾಯಕ ಹನುಮಾನ ಬೇನಿವಾಲ್, ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಗೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರದರ್ಶನದ ನಂತರ ಇಂಡಿಯಾ ಮೈತ್ರಿಕೂಟ ತನ್ನ … Continued

ಈ ಸಲದ ಚುನಾವಣೆಯಲ್ಲಿ ಬಿಜೆಪಿ ಗೆದ್ದಷ್ಟು ಸ್ಥಾನಗಳನ್ನು ಮೂರು ಚುನಾವಣೆ ಸೇರಿಸಿದ್ರೂ ಕಾಂಗ್ರೆಸ್ಸಿಗೆ ಗೆಲ್ಲಲು ಸಾಧ್ಯವಾಗಿಲ್ಲ : ಮೋದಿ ಲೇವಡಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಸ್ಥಾನಗಳಷ್ಟನ್ನು ಕಾಂಗ್ರೆಸ್‌ ಮೂರು ಚುನಾವಣೆಗಳನ್ನು ಸೇರಿಸಿದರೂ ಅದಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ 100 ಸ್ಥಾನಗಳ ಗಡಿ ದಾಟಲು ವಿಫಲವಾಗಿದ್ದು, ಕಳೆದ ಮೂರು ಚುನಾವಣೆಗಳಲ್ಲಿ ಗೆದ್ದಿದ್ದನ್ನು ಸೇರಿಸಿದರೂ ಅದು ಬಿಜೆಪಿ ಒಂದು ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನಗಳಷ್ಟು ಆಗುವುದಿಲ್ಲ ಎಂದು … Continued

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಶುಕ್ರವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ. ನಂತರ ಮಾತನಾಡಿದ ಮೋದಿ, ”ರಾಷ್ಟ್ರಪತಿಗಳು ನನಗೆ ನಿಯೋಜಿತ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಲು ತಿಳಿಸಿದ್ದಾರೆ. ಜೂನ್​ 9ರಂದು ಸಂಜೆ … Continued

ಎನ್‌ ಡಿ ಎ ನಾಯಕನಾಗಿ ಮೋದಿ ಆಯ್ಕೆ : ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಧಾನಿಯಾಗಿ ಜೂನ್‌ 9ರಂದು ಪದಗ್ರಹಣ

ನವದೆಹಲಿ: ಹೊಸದಾಗಿ ಚುನಾಯಿತರಾದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಗೆ ಹುದ್ದೆಗೆ ಸರ್ವಾನುಮತದಿಂದ ಅನುಮೋದಿಸಿದರು. ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರ ನಾಯಕರನ್ನಾಗಿ   ಅಧಿಕೃತವಾಗಿ … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ಇಂದು ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿ ಆಯ್ಕೆ : ಉದ್ಧವ್ ಠಾಕ್ರೆ

ನವದೆಹಲಿ : ಇಂದು (ಜೂನ್‌ 5) ಇಂಡಿಯಾ ಒಟ್ಟೂಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಅಂತ್ಯ ಮಾಡಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧಾರ ಮಾಡಿದ್ದೆವು. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ. … Continued

ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?

ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued

ಜನರು 3ನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ, ಐತಿಹಾಸಿಕ ಕ್ಷಣ : ಚುನಾವಣಾ ಫಲಿತಾಂಶಗಳ ನಂತರ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸತತ ಮೂರನೇ ಗೆಲುವು ತಂದುಕೊಟ್ಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. “ಜನರು ಸತತ ಮೂರನೇ ಬಾರಿಗೆ ಎನ್‌ಡಿಎಯಲ್ಲಿ ನಂಬಿಕೆ ಇಟ್ಟಿರುವುದು ಭಾರತದ ಇತಿಹಾಸದಲ್ಲಿ ಐತಿಹಾಸಿಕ ಸಾಧನೆಯಾಗಿದೆ” ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. “ಜನತಾ ಜನಾರ್ದನರ ಈ ಪ್ರೀತಿಗಾಗಿ ನಾನು ನಮಸ್ಕರಿಸುತ್ತೇನೆ ಮತ್ತು … Continued

ಏಕಾಧಿಪತ್ಯ ರಾಜಕಾರಣದಿಂದ ಮತ್ತೆ ಸಮ್ಮಿಶ್ರ ಧರ್ಮಕ್ಕೆ: ಹೊಸ ದಾರಿಯಲ್ಲಿ ಬಿಜೆಪಿ, ಪುನರುತ್ಥಾನದತ್ತ ಇಂಡಿಯಾ ಒಕ್ಕೂಟ

ನವದೆಹಲಿ : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಇಂದು, ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ 300 ಸ್ಥಾನಗಳ ಗಡಿ ದಾಟಲು ಹೆಣಗಾಡುತ್ತಿರುವಾಗ, ಬಿಜೆಪಿಗೆ ಸ್ವಂತ ಬಲದಿಂದ ಬಹುಮತದ 272 ಅನ್ನು ತಲುಪುವುದು ಕಷ್ಟಕರವಾಗಿದೆ. ಅದು ಮುಂದಿನ ಸರ್ಕಾರವನ್ನು ರಚಿಸಿದರೆ, ಅದು ಅದರ ಮಿತ್ರಪಕ್ಷಗಳ ಸಹಾಯದಿಂದ. ಮುಖ್ಯವಾಗಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಪ್ರಸ್ತುತ … Continued