ಅಮೋನಿಯಾ ಅನಿಲ ಸೋರಿಕೆ : 7 ಕಾರ್ಮಿಕರ ಸಾವು, 67 ಜನರು ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳುನಾಡಿನ ಪೆರಿಯಪಾಳ್ಯಂ ಬಳಿಯ ಮಂಜಂಗಾರಣೈ (ಕಣ್ಣಿಗೈಪೇರ್ ಗ್ರಾಮ)ನಲ್ಲಿರುವ ಸೀಫುಡ್ (ಸಮುದ್ರ ಆಹಾರ) ಸಂಸ್ಕರಣಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಅಮೋನಿಯಾ ಅನಿಲ ಸೋರಿಕೆ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 67 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ತಿರುವಳ್ಳೂರು … Continued

ಫೆಂಗಲ್‌ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!

ಪುದುಚೇರಿ : ಫೆಂಗಲ್‌ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ. ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ … Continued

ತ್ವರಿತ ಕಾರ್ಯಾಚರಣೆಗೆ ಸೂಚನೆ ; ಕ್ಷಿಪ್ರಗತಿಯಲ್ಲಿ ಮಣ್ಣು ತೆರವು, ಶೋಧ ಕಾರ್ಯಾಚರಣೆಗೆ ಮಿಲಿಟರಿ-ನೌಕಾಪಡೆ ನೆರವು ; ಸಿಎಂ ಸಿದ್ದರಾಮಯ್ಯ

 ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಸಿಲುಕಿಕೊಂಡಿರಬಹುದಾದವರ ಶೋಧ ಕಾರ್ಯಾಚರಣೆಯಲ್ಲಿ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಇದಕ್ಕೆ 44 ಜನ ಮಿಲಿಟರಿ ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರ (ಜುಲೈ 21) ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued