ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued

ವೈದ್ಯನಾಗುವ ಕನಸು ನನಸಾಗಿಸಲು 64ನೇ ವರ್ಷಕ್ಕೆ ನೀಟ್ ಪರೀಕ್ಷೆ ಪಾಸಾದ ನಿವೃತ್ತ ಎಸ್‍ ಬಿಐ ಉದ್ಯೋಗಿ..!

ಇಲ್ಲೊಬ್ಬರು ತಮ್ಮ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಬಳಿಕ ಶಿಕ್ಷಣವನ್ನು ಮುಂದುವರಿಸಿ ಯಶಸ್ಸನ್ನು ಸಾಧಿಸಿ ತಮ್ಮ ಕನಸನ್ನು ನನಸಾಗಿಸಲು ಹೊರಟಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI)ದ ನಿವೃತ್ತ ಉದ್ಯೋಗಿ 64 ನೇ ವಯಸ್ಸಿನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET UG) ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಒಡಿಶಾ ಮೂಲದ ಜೈ ಕಿಶೋರ ಪ್ರಧಾನ ಅವರು ಸ್ಟೇಟ್ … Continued

ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗ್ತದೆ ; ಹಿರಿಯ ವಕೀಲರ ಮೇಲೆ ಗರಂ ಆದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಮಂಗಳವಾರ ನಡೆದ ನೀಟ್‌ ಯುಜಿ (NEET-UG) ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸುವಂತೆ ಆದೇಶ ನೀಡಿದರು. ನ್ಯಾಯಮೂರ್ತಿಗಳು ಕಠೋರವಾಗಿ ಎಚ್ಚರಿಸಿದ ನಂತರ ವಕೀಲರು ಸ್ವಯಂಪ್ರೇರಿತರಾಗಿ ನ್ಯಾಯಾಲಯದಿಂದ ಹೊರನಡೆದರು. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ಮತ್ತೊಬ್ಬ ವಕೀಲರ ವಾದ ಮಂಡನೆಗೆ … Continued

ಬೆಳಗಾವಿ : ವೈದ್ಯಕೀಯ ಸೀಟ್‌ ವಂಚನೆ ಜಾಲ ಪತ್ತೆ , ಪ್ರಮುಖ ಆರೋಪಿ ಬಂಧಿಸಿದ ಪೊಲೀಸರು

 ಬೆಳಗಾವಿ: ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವೊಂದನ್ನು ಬೆಳಗಾವಿ ಪೊಲೀಸರು ಪತ್ತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಾರೋ ಅಂಥವರನ್ನೇ ಗುರಿಯಾಗಿಸಿ ಅವರಿಗೆ ವೈದ್ಯಕೀಯ ಸೀಟ್‌ ಕೊಡಿಸುತ್ತೇನೆ ಎಂದು ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ ; ಆಸ್ಪತ್ರೆಗೆ ದಾಖಲು

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್‌ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್‌ ಅವರನ್ನು ತಕ್ಷಣವೇ ಆಂಬುಲೆನ್ಸ್‌ ನಲ್ಲಿ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued

ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ : ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. … Continued

ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಎನ್‌ಟಿಎ ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ವಜಾ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಮುಖ ಕ್ರಮದಲ್ಲಿ ಕೇಂದ್ರ ಸರ್ಕಾರವು ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ಸಿಂಗ್ ಅವರನ್ನು ವಜಾಗೊಳಿಸಿದೆ. ಮತ್ತು ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರದೀಪ ಸಿಂಗ್ ಖರೋಲಾ ಅವರನ್ನು ಶನಿವಾರ (ಜೂನ್ 22) ನೇಮಿಸಿದೆ. ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ … Continued

ನೀಟ್‌ ಪರೀಕ್ಷೆ ಮುಂದಿಟ್ಟು ಅಂದು ಮೋದಿ ರೋಡ್‌ ಶೋ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಈಗ ಸಿಇಟಿ ಪರೀಕ್ಷೆ ನೆನಪಿಸಿ ಮರುಪ್ರಶ್ನಿಸಿದ ಬಿ.ಎಲ್.ಸಂತೋಷ …!

ಬೆಂಗಳೂರು: ನಾಳೆ (ಮೇ 20) ಸಿಇಟಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ದಿನ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿದ್ದರೆ ಏನಾಗುತ್ತಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ … Continued

ವೈದ್ಯನಾಗುವ ಕನಸು ಹೊತ್ತು ನೀಟ್‌ ಪರೀಕ್ಷೆ ಬರೆದ ಮಧುರೈನ 56 ವರ್ಷದ ರೈತ…!

ಮಧುರೈ: 56ರ ಹರೆಯದ ರೈತ ಕೆ.ರಾಜ್ಯಕ್ಕೋಡಿ ಅವರು, ವೇಲಮ್ಮಾಳ್ ವಿದ್ಯಾಲಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ (ನೀಟ್) ಬರೆದಿದ್ದಾರೆ. ನೀಟ್‌ ಪರೀಕ್ಷೆ ಬರೆಯಲು ಬಂದಾಗ ವಯೋಮಿತಿ ಮೀರಿದೆ ಎಂಬ ಕಾರಣ ನೀಡಿ ಕೇಂದ್ರದೊಳಗೆ ಪ್ರವೇಶಿಸುವಾಗ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಆದರೆ, ಅವರು ಅವರಿಗೆ ಹಾಲ್ ಟಿಕೆಟ್ ತೋರಿಸಿದಾಗ, ಇತರ ಆಕಾಂಕ್ಷಿಗಳು ಮತ್ತು ಅವರ … Continued

ಈ ವರ್ಷ ಒಂದೇ ಬಾರಿ ʼನೀಟ್‌ ಪರೀಕ್ಷೆʼ

ನವ ದೆಹಲಿ: 2021ರ ಪರೀಕ್ಷೆಯನ್ನ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ದಿನಾಂಕವನ್ನ ಪ್ರಕಟಿಸಿದ ಕೆಲವೇ ದಿನಗಳಲ್ಲಿ, ಈ ವರ್ಷ ಕೇವಲ ಒಂದು ಬಾರಿ ಮಾತ್ರ ನೀಟ್‌ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಪೋಖ್ರಿಯಾಲ್, ‘2021ರಲ್ಲಿ ನೀಟ್ (ಯುಜಿ) … Continued