ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಹತ್ಯೆಗೀಡಾದ ನೇಹಾ ಹಿರೇಮಠ (Neha Hiremath) ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನಿಮ್ಮ ಕುಟುಂಬದ ಜೊತೆಗೆ ನಾವಿದ್ದೇವೆ ಅಂತ ಭರವಸೆ ನೀಡಿದರು. … Continued

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್‌ ನನ್ನು ಹುಬ್ಬಳ್ಳಿಯ ನ್ಯಾಯಾಲಯವು ಬುಧವಾರ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ ನಾಯ್ಕ ನಡೆಸಿದರು. ನಂತರ ತನಿಖಾ ತಂಡದ … Continued

ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ವೈಯಕ್ತಿಕ ಕಾರಣಗಳಿಗೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಮೃತಳ ತಂದೆ ನಿರಂಜನ ಹಿರೇಮಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಗುರವಾದ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಖ್ಯಮಂತ್ರಿಯವರು ಅಷ್ಟು ಹಗುರವಾಗಿ ಹೇಗೆ … Continued