ಕ್ಲಾಸ್​ ರೂಮಿನಲ್ಲೇ ವೈದ್ಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಏಟು ತಿಂದ ಪ್ರೊಫೆಸರ್

ಬೆಂಗಳೂರು : ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿ, ಬಳಿಕ ಏಟು ತಿಂದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ (Medical College) ನಡೆದಿದೆ ಎಂದು ವರದಿಯಾಗಿದೆ.  ಅಬ್ದುಲ್ ಎಂಬ ಸಹಾಯಕ ಪ್ರಾಧ್ಯಾಪಕರು ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾರೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು … Continued

ಬೆಂಗಳೂರು | ನೆಲಮಂಗಲದ ಬಳಿ ಹೊತ್ತಿ ಉರಿದ ಖಾಸಗಿ ಬಸ್‌

ಬೆಂಗಳೂರು: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ಬೆಳಗಿನ ಜಾವ ನೆಲಮಂಗಲದ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್, ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು … Continued

ವೀಡಿಯೊ | ಬೆಂಗಳೂರು : ಆಭರಣ ಅಂಗಡಿಗೆ ನುಗ್ಗಿ ಗನ್ ತೋರಿಸಿ ಚಿನ್ನಾಭರಣ ಲೂಟಿ

ಬೆಂಗಳೂರು: ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿರುವ ಆಭರಣ ಅಂಗಡಿಯಲ್ಲಿ ಮಂಗಳವಾರ ಶಸ್ತ್ರಸಜ್ಜಿತ ದರೋಡೆಕೋರರು ಹಗಲು ಹೊತ್ತಿನಲ್ಲಿ ದರೋಡೆ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ದಾಸನಪುರದಲ್ಲಿರುವ ರಾಮದೇವ ಜ್ಯುವೆಲ್ಲರಿಯಲ್ಲಿ ಸಂಜೆ ಸುಮಾರು 5:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬರುತ್ತಿರುವುದು … Continued

ಕಾಲೇಜಿನಲ್ಲಿ ರ‍್ಯಾಗಿಂಗಿಗೆ ಹೆದರಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬೆಂಗಳೂರು : ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವೀಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನೆಲಮಂಗಲ ನಂದರಾಮಯ್ಯನ ಪಾಳ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ (22) ಎಂದು ಗುರುತಿಸಲಾಗಿದೆ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ … Continued

ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

 ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ. ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ … Continued

ಗ್ಯಾಸ್ ಸಿಲಿಂಡರ್‌ ಸೋರಿಕೆಯಿಂದ ಹೊತ್ತಿ ಉರಿದ ಮನೆ ; ಇಬ್ಬರು ಸಜೀವ ದಹನ, ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲ ಸಮೀಪದ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದ ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮನೆಯೊಳಗಿನ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಬೆಂಕಿ … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಬೆಂಗಳೂರು | ಕಾರಿನ ಮೇಲೆ ಕಂಟೇನರ್​ ಪಲ್ಟಿ: ಕಾರಿನೊಳಗಿದ್ದ 6 ಮಂದಿ ಅಪ್ಪಚ್ಚಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ (ಡಿ. 21) ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಸಾವಿಗೀಡಾಗಿದ್ದಾರೆ. ಅ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌.ಪಿ. ಸಿ.ಕೆ.ಬಾಬಾ ಸೇರಿದಂತೆ ಇತರ ಅಧಿಕಾರಿಗಳು ಪೊಲೀಸರು ಧಾವಿಸಿ ಪರಿಶೀಲನೆ … Continued

ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ (ಜೂನ್‌ 26 ರಿಂದ 28) ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು … Continued

ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್​​ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. … Continued