ತಂದೆ-ತಾಯಿ ಕೊಂದಿದ್ದ ಆನೆಯಿಂದ ಪಾರಾಗಲು 2 ನದಿ ದಾಟಿ ಬಂದಿದ್ದ ಕುಟುಂಬ; 14 ವರ್ಷದ ಬಳಿಕ ಅಲ್ಲಿಗೂ ಬಂದು ಮತ್ತಿಬ್ಬರನ್ನು ಸಾಯಿಸಿದ ಅದೇ ಆನೆ !

ಕಠ್ಮಂಡು: ತಂದೆ-ತಾಯಿಯನ್ನು ಬಲಿ ಪಡೆದಿದ್ದ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮನೆ ಮಾರಾಟ ಮಾಡಿ, ಅದು ಜಾಡು ಹಿಡಿದು ಬರಬಾರದೆಂದು ಎರಡು ದೊಡ್ಡ ನದಿಗಳನ್ನು ದಾಟಿ ಕುಟುಂಬ ಸಮೇತ ವಲಸೆ ಹೋಗಿ ಬೇರೆ ಪ್ರದೇಶದಲ್ಲಿ ಹೊಸ ಜೀವನ ಆರಂಭಿಸಿದ್ದ ವ್ಯಕ್ತಿಗೆ ವಿಧಿ ಮತ್ತೊಮ್ಮೆ ಕ್ರೂರ ಮುಖ ತೋರಿಸಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಅದೇ ಆನೆ ಇವರ ಹೊಸ … Continued

ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಕ್ಯಾಮರಾ ಮುಂದೆಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ…!

ಚೆನ್ನೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ನಡೆದಿದೆ. ಆರೋಪಿ ತಂದೆಯು ನೇಪಾಳದಲ್ಲಿದ್ದ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ, ಆಕೆಗೆ ತೋರಿಸುತ್ತಲೇ ಮಗಳನ್ನು ಕೊಂದಿರುವುದು ಇಡೀ ಘಟನೆಯ ಭೀಕರತೆಯನ್ನು ಹೆಚ್ಚಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನೇಪಾಳ ಮೂಲದ … Continued

ನೇಪಾಳ ಮಾಜಿ ಪ್ರಧಾನಿ ಕೆ.ಪಿ. ಓಲಿ ಬಂಧನ: ಪ್ರಧಾನಿಯಾಗಿ ಬಾಲೇಂದ್ರ ಶಾ ಪದಗ್ರಹಣದ ಮರುದಿನವೇ ಕ್ರಮ

ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ಶನಿವಾರ ಬೆಳಗ್ಗೆ ಭಾರಿ ಸಂಚಲನ ಉಂಟಾಗಿದ್ದು, ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2025ರ ಸೆಪ್ಟೆಂಬರ್‌ನಲ್ಲಿ ನಡೆದ ‘ಜೆನ್-ಜಿ’ (Gen Z) ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಹತ್ತಿಕ್ಕಿದ ಮತ್ತು ಆ ಸಂದರ್ಭದಲ್ಲಿ ನಡೆದ ಸಾವು-ನೋವುಗಳಿಗೆ ಕಾರಣರಾದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಗಾಯಕ-ರಾಜಕಾರಣಿ ಬಾಲೇಂದ್ರ ಶಾ ಅವರು … Continued

ವೀಡಿಯೊ | ನೆಲದಿಂದ ಕೆಲವೇ ಇಂಚುಗಳ ಎತ್ತರದಲ್ಲಿ ನಿಯಂತ್ರಣ ತಪ್ಪಿ ಅಪ್ಪಳಿಸಿದ ಹೆಲಿಕಾಪ್ಟರ್‌

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಖೋಟಾಂಗ್ ಜಿಲ್ಲೆಗೆ ಶವವೊಂದನ್ನು ಹೊತ್ತು ಸಾಗುತ್ತಿದ್ದ ಏರ್ ಡೈನಾಸ್ಟಿ ಸಂಸ್ಥೆಯ ಹೆಲಿಕಾಪ್ಟರ್ ಬುಧವಾರ ಇಳಿಯುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ. ಖೋಟಾಂಗ್ ಜಿಲ್ಲೆಯ ಬಾಲಬೇಸಿ ಎಂಬಲ್ಲಿನ ಕೃಷಿ ಭೂಮಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಕಾಲಮಾನ ಸುಮಾರು ಬೆಳಿಗ್ಗೆ 11:51 ಕ್ಕೆ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಹೆಲಿಕಾಪ್ಟರ್‌ನಲ್ಲಿ ಐವರು ಪ್ರಯಾಣಿಕರಿದ್ದರು. … Continued

ನೇಪಾಳ ಚುನಾವಣೆ : ಜೆನ್‌ ಝಡ್‌ ಬೆಂಬಲಿತ ಬಾಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಾರ್ಟಿಗೆ ಭರ್ಜರಿ ಗೆಲುವು

ಕಠ್ಮಂಡು: ನೇಪಾಳದ ಸಂಸತ್ ಚುನಾವಣೆಯಲ್ಲಿ ಬಲಾಢ್ಯ ರಾಜಕೀಯ ಪಕ್ಷಗಳನ್ನು ಧೂಳೀಪಟ ಮಾಡಿರುವ ಬಾಲೇಂದ್ರ ಶಾ (ಬಾಲೆನ್) ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಾರ್ಟಿ (RSP), ದೇಶದ ಮುಂದಿನ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ರಾಪರ್ ಹಾಗೂ ರಾಜಕಾರಣಿ 35 ವರ್ಷದ ಬಾಲೇಂದ್ರ ಶಾ, ಝಾಪಾ-5 ಕ್ಷೇತ್ರದಲ್ಲಿ ನಾಲ್ಕು ಬಾರಿ ನೇಪಾಳದ ಪ್ರಧಾನಿಯಾಗಿದ್ದ ಸಿಪಿಎನ್-ಯುಎಂಎಲ್ ನಾಯಕ ಕೆ.ಪಿ. ಶರ್ಮಾ ಓಲಿ … Continued

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣ ವಚನ ಸ್ವೀಕಾರ; ಭಾರತದ ಜೊತೆ ಉತ್ತಮ ಸಂಪರ್ಕ ಹೇಗೆ..?

ನವದೆಹಲಿ: ಕಠ್ಮಂಡು ತನ್ನ ಪ್ರಕ್ಷುಬ್ಧ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ಸಜ್ಜಾಗುತ್ತಿದೆ, ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಶುಕ್ರವಾರ ರಾತ್ರಿ ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೂಲಗಳ ಪ್ರಕಾರ, ಈ ಹೆಜ್ಜೆಯ ಹಿಂದಿನ ಒಮ್ಮತ ರೂಪಿಸುವಲ್ಲಿ ಅಧ್ಯಕ್ಷ ರಾಮಚಂದ್ರ ಪೌಡೆಲ್, ನೇಪಾಳದ ಜನರೇಷನ್ ಝಡ್ ಪ್ರತಿಭಟನಾ ಚಳವಳಿಯ ಪ್ರತಿನಿಧಿಗಳು ಮತ್ತು … Continued

ವೀಡಿಯೊ…| ನೇಪಾಳದಲ್ಲಿ ಜನರ ಆಕ್ರೋಶಕ್ಕೆ ಹೆದರಿ ಸೇನಾ ಹೆಲಿಕಾಪ್ಟರ್‌ ಹಗ್ಗಕ್ಕೆ ಜೋತು ಬಿದ್ದು ಸಚಿವರು-ಕುಟುಂಬಸ್ಥರ ಪಲಾಯನ…!

ಹಿಂಸಾಚಾರ ಪೀಡಿತ ನೇಪಾಳದಿಂದ ಹೊರಹೊಮ್ಮಿದ ಕೆಲವು ವೀಡಿಯೊ ದೃಶ್ಯಗಳಲ್ಲಿ, ಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡ ಪಲಾಯನ ಮಾಡಲು ಸೇನಾ ಹೆಲಿಕಾಪ್ಟರ್‌ನ ರಕ್ಷಣಾ ಜೋಲಿ ಹಿಡಿದುಕೊಂಡು ನೇತಾಡಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ಅಲ್ಪಾವಧಿಯ ನಿಷೇಧವು ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದ್ದು, ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿ ಸುರಕ್ಷಿತ … Continued

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಿಸಿದ ಜನರಲ್-ಝಡ್ ಪ್ರತಿಭಟನಾಕಾರರು

ಕಠ್ಮಂಡು: ಕಠ್ಮಂಡು: ನೇಪಾಳದಲ್ಲಿ ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅವರ ಸರ್ಕಾರವನ್ನು ಪದಚ್ಯುತಗೊಳಿಸಿದ ಜನರಲ್-ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಸುಶೀಲಾ ಕರ್ಕಿ ಅವರು ಬಾಲೆನ್ ಶಾ ಗಿಂತ ಹೆಚ್ಚಿನ … Continued

ನೇಪಾಳದ ಮಾಜಿ ಪ್ರಧಾನಿ ಜಲನಾಥ ಖನಾಲ್ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ ; ಪತ್ನಿ ಸಾವು

ಕಠ್ಮಂಡು : ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುMದುವರಿದಿದ್ದು, ನೇಪಾಳದ ಮಾಜಿ ಪ್ರಧಾನಿ ಜಲನಾಥ ಖಾನಲ್ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಮನೆಯಲ್ಲಿದ್ದ ಅವರ ಪತ್ನಿ ಪತ್ನಿ ರಾಜ್ಯಲಕ್ಷ್ಮೀ ಚಿತ್ರಾಕರ ಮಂಗಳವಾರ ಸಜೀವವಾಗಿ ಧಹನವಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ತೀವ್ರವಾಗಿ ಗಾಯಗೊಂಡ ಚಿತ್ರಾಕರ ಅವರನ್ನು ಕೀರ್ತಿಪುರ ಬರ್ನ್ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು … Continued

ತೀವ್ರ ಪ್ರತಿಭಟನೆಗಳ ನಡುವೆ ನೇಪಾಳ ಪ್ರಧಾನಿ ಹುದ್ದೆಗೆ ಓಲಿ ರಾಜೀನಾಮೆ ; ಸೇನಾ ಮುಖ್ಯಸ್ಥರ ಸೂಚನೆಯ ನಂತರ ಘೋಷಣೆ

ಕಠ್ಮಂಡು : ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಮತ್ತು ಅದನ್ನು ರಾಜಕೀಯವಾಗಿ ಪರಿಹರಿಸಲು ಸಹಾಯ ಮಾಡುವುದಕ್ಕಾಗಿ ತಾವು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಓಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಅವರ ಸಹಾಯಕ ಪ್ರಕಾಶ ಸಿಲ್ವಾಲ್ ರಾಜೀನಾಮೆಯನ್ನು ದೃಢಪಡಿಸಿದ್ದಾರೆ. ನೇಪಾಳದಲ್ಲಿ ಫೇಸ್‌ಬುಕ್‌, ಟ್ವಿಟರ್‌ … Continued