ಮನ್ಸುಖ್ ಹಿರೆನ್ ಹತ್ಯೆ ಸಂಚು ಯೋಜಿಸಿದ ಸಭೆಯಲ್ಲಿ ಸಚಿನ್ ವಾಝೆ ಹಾಜರಿದ್ದರು: ಎನ್ಐಎ

ಮುಂಬೈ: ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೆನ್ ಅವರ ಹತ್ಯೆಗೆ ಯೋಜಿಸಲಾದ ಸಭೆಯಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಮತ್ತು ಮಾಜಿ ಪೊಲೀಸ್ ವಿನಾಯಕ ಶಿಂಧೆ ಹಾಜರಿದ್ದರು ಮತ್ತು ವಾಝೆ ಅವರು ಮೊಬೈಲ್ ಫೋನ್ ಬಳಸಿ ಸಂಚುಕೋರನನ್ನು ಸಂಪರ್ಕಿಸಿದ್ದಾರೆ ಎಂದು ಎನ್ಐಎ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ ಪಿತೂರಿ ಮತ್ತು ಅಪರಾಧದ ಹಿಂದಿನ ಉದ್ದೇಶವನ್ನು … Continued

ಹಿರೆನ್‌ ಸಾವು: ಮಿಥಿ ನದಿ ಸೇತುವೆಗೆ ಸಚಿನ್ ವಾಝೆ ಕರೆತಂದ ಎನ್ಐಎ, ಕಂಪ್ಯೂಟರ್ ಸಿಪಿಯು, ವಾಹನ ಸಂಖ್ಯೆ ಪ್ಲೇಟ್ ಪತ್ತೆ

ಮುಂಬೈ; ಮನ್ಸುಖ್ ಹಿರೆನ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆಯನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಮಿಥಿ ನದಿಯ ಸೇತುವೆಗೆ ಭಾನುವಾರ ಕರೆದೊಯ್ದರು. ಈ ಸಂದರ್ಭದಲ್ಲಿ ಈಜುಪಟುಗಳು ಕಂಪ್ಯೂಟರ್ ಸಿಪಿಯು, ವಾಹನದ ನಂಬರ್ ಪ್ಲೇಟ್ ಮತ್ತು ಇತರ ವಸ್ತುಗಳನ್ನು ನದಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು … Continued

ಅಂಬಾನಿ ಮನೆ ಬಳಿ ಬಾಂಬ್ ಬೆದರಿಕೆ ಪ್ರಕರಣ: ವಾಝೆ ಬೆದರಿಕೆ ಪತ್ರ ಇಡಲು ಎಸ್ಯುವಿ ಬಳಿ ಬಂದಿದ್ದು ಸಿಸಿಟಿವಿಯಲ್ಲಿ ಸೆರೆ ?

ಮುಂಬೈ: ಫೆಬ್ರವರಿ 25 ರಂದು ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ನಿವಾಸವಾದ ಆಂಟಿಲಿಯಾ ಬಳಿ ಜೆಲೆಟಿನ್ ಸ್ಟಿಕ್ಸ್ ತುಂಬಿದ ಎಸ್‌ಯುವಿ ಪತ್ತೆಯಾದ ಕೆಲವು ದಿನಗಳ ನಂತರ, ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳು ಈ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿ ಸಚಿನ್‌ ವಾಝೆ ಪಾಲ್ಗೊಂಡಿರುವುದನ್ನು ಮತ್ತಷ್ಟು ದೃಢಪಡಿಸಿದೆ ಎಂದು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ. ಈ ಕುರಿತು ವರದಿ ಮಾಡಿರುವ ಫ್ರೀ ಪ್ರೆಸ್‌ … Continued

ಸಚಿನ ವಾಝೆ ಎನ್‌ಐಎ ಕಸ್ಟಡಿ ಏಪ್ರಿಲ್ 3ರ ವರೆಗೆ ವಿಸ್ತರಣೆ

ಮುಂಬೈ: ದೇಶದ ಅಗ್ರಮಾನ್ಯ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿಂದ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಝೆ ಅವರ ಎನ್‌ಐಎ ಕಸ್ಟಡಿಯನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 3ರ ವರೆಗೆ ವಿಸ್ತರಿಸಿದೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಬಲಿಪಶುವಾಗಿ ಮಾಡಲಾಗಿದೆ ಎಂದು ಸಚಿನ್ ವಾಜೆ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ … Continued

ಹಿರೆನ್ ಸಾವಿನ ಪ್ರಕರಣ: ತಕ್ಷಣವೇ ಎನ್‌ಐಎಗೆ ಎಲ್ಲ ದಾಖಲೆಗಳ ಹಸ್ತಾಂತರಕ್ಕೆ ಎಟಿಎಸ್‌ಗೆ ಆದೇಶಿಸಿದ ಮುಂಬೈ ಕೋರ್ಟ್‌

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಮನ್ಸುಖ್ ಹಿರೆನ್ ಸಾವಿನ ಪ್ರಕರಣದ ಎಲ್ಲಾ ದಾಖಲೆಗಳು ಮತ್ತು ಪತ್ರಿಕೆಗಳನ್ನು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಹಸ್ತಾಂತರಿಸುವಂತೆ ಥಾಣೆ ನ್ಯಾಯಾಲಯವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಕ್ಕೆ (ಎಟಿಎಸ್‌) ಆದೇಶಿಸಿದೆ. ಮುಖೇಶ್ ಅಂಬಾನಿಯ ಮನೆಯ ಆಂಟಿಲಿಯಾದ ಹೊರಗೆ ಸ್ಫೋಟಕ ತುಂಬಿ ನಿಲ್ಲಿಸಿದ ಎಸ್ಯುವಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿರುವ ಸಾವಿನ ಪ್ರಕರಣದ … Continued

ಎಸ್‌ಯುವಿ ಜಿಲೆಟಿನ್‌ ಪ್ರಕರಣವೂ… ವಾಝೆ ಬಂಧನವೂ…ಮುಂಬೈ ಪೊಲೀಸ್‌ ಆಯುಕ್ತರ ವರ್ಗಾವಣೆಯೂ….

ಮುಂಬೈ : ಮುಂಬೈ ಪೊಲೀಸ್‌ ಆಯುಕ್ತ ಪರಮ್ ಬಿರ್ ಸಿಂಗ್ ಅವರನ್ನು ಮಹಾರಾಷ್ಟ್ರದ ಗೃಹರಕ್ಷಕ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ಬುಧವಾರ ಪ್ರಕಟಿಸಿದ್ದಾರೆ. ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹೇಮಂತ್ ನಾಗರಲೆ ಅವರು ಮುಂಬೈನ ಹೊಸ ಪೊಲೀಸ್ ಆಯುಕ್ತರಾಗಿದ್ದಾರೆ ಎಂದು ದೇಶಮುಖ್ ಹೇಳಿದ್ದಾರೆ. ವಿವಾದಿತ ಮುಂಬೈ ಪೊಲೀಸ್‌ ಆಯುಕ್ತ ಪರಮ್ … Continued

ಐಸಿಸ್ ಸಂಪರ್ಕ: ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಎನ್‌ಐಎ ದಾಳಿ..!

ನವ ದೆಹಲಿ: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್‍ಐಎ … Continued

ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ಸಚಿನ್ ವಾಝೆ ಮಾ.25ರ ವರೆಗೆ ಎನ್‌ಐಎ ಕಸ್ಟಡಿಗೆ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ನ್ಯಾಯಾಲಯ ಮಾರ್ಚ್ 25ರವರೆಗೂ ರಾಷ್ಟ್ರೀಯ ತನಿಖಾ ದಳದ (ಎನ್ವ‌ಐಎ)ಶಕ್ಕೆ ನೀಡಿದೆ. ಶನಿವಾರ ಮಧ್ಯರಾತ್ರಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. … Continued

ಹಿಂದೂ ಮುಖಂಡರ ಹತ್ಯೆ ಸಂಚು:ಇಬ್ಬರ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ‘ಲಷ್ಕರೆ ತಯ್ಯಬಾ (ಎಲ್‌ಇಟಿ) ಉಗ್ರ ಸಂಘಟನೆ ಸದಸ್ಯ ಬೆಂಗಳೂರಿನ ವೈದ್ಯ ಸೇರಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಡಾ. ಸಬೀಲ್‌ ಅಹಮದ್‌ ಮತ್ತು ಹೈದರಾಬಾದ್‌ನ ಅಸಾದುಲ್ಲಾಖಾನ್‌ ವಿರುದ್ಧ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ … Continued