ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರು ಎಂಬವನನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು, ಶುಕ್ರವಾರ ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ 2022ರ … Continued

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬ್‌ ಇಟ್ಟವ , ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ವಶಕ್ಕೆ

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಅವರನ್ನು ಬಂಧಿಸಲಾಗಿದೆ. ನಿಖರವಾದ ತನಿಖೆ ಮತ್ತು ಗುಪ್ತಚರ ಸಂಗ್ರಹದ ನಂತರ, … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ. ಬೆಂಗಳೂರು ಕೆಫೆ ಸ್ಫೋಟ ಪ್ರಕರಣದ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಭಾಗಗಳಲ್ಲಿ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿ ತೀರ್ಥಹಳ್ಳಿ ಮೂಲದವನು ಎಂದು … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಮತ್ತಿಬ್ಬರು ಎನ್ ​​​ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಇಬ್ಬರು ವ್ಯಕ್ತಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿದ ನಂತರ ಆತನ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್‌ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್‌ ಐ ಎ ; ಈತ ಯಾರು? ಹಿನ್ನೆಲೆ ಏನು ?

ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued