ನಿಪ್ಪಾಣಿ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ : ಅಪಾರ ಹಾನಿ

ಬೆಳಗಾವಿ: ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಹಾನಿಯಾದ ಘಟನೆ ಶುಕ್ರವಾರ ನಡೆದಿದೆ. ಸ್ಥಳೀಯ ಎರಡು ಅಗ್ನಿಶಾಮಕ ವಾಹನಗಳು ಸೇರಿದಂತೆ, ಸಂಕೇಶ್ವರ, ಚಿಕ್ಕೋಡಿ, ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನಿಂದ ಸೇರಿ ಸುಮಾರು ಏಳು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಪ್ರಯತ್ನಿಸಿವೆ. ಸಂಜೆ 4 ಗಂಟೆಗೆ 24 ಟಿಪಿಎಚ್ ಬಾಯ್ಲರ್ … Continued

ಬೆಳಗಾವಿ: ಮಗಳ ಮದುವೆ ಮಾಡಿಕೊಡಲು ಒಪ್ಪದ್ದಕ್ಕೆ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಯುವಕ

ಬೆಳಗಾವಿ: ಯುವತಿಯನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದವರನ್ನು ಅಕ್ಕೋಳ ಗ್ರಾಮದ ಮಂಗಲ ನಾಯಿಕ (42) ಹಾಗೂ ಪ್ರಜ್ವಲ ನಾಯಿಕ (18) ಎಂದು ಗುರತಿಸಲಾಗಿದೆ. … Continued

ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿಕ್ಕೋಡಿ : ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗ್ರಾಮದ ಬೋರ್​ವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತ್ತದೆ. ನೀರು ಸರಬರಾಜು ಮಾಡುವ ಪೈಪ್​ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ. ಈ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, … Continued

ನಿಪ್ಪಾಣಿ | ಸರಣಿ ಅಪಘಾತ : ಇಬ್ಬರು ಸಾವು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ … Continued

ನಿಪ್ಪಾಣಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ : ನಿಪ್ಪಾಣಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಜಯಭೇರಿ ಬಾರಿಸಿದೆ. ಬಿಜೆಪಿ ಸದಸ್ಯೆ ಸೋನಲ್ ರಾಜೇಶ ಕೊಠಿಯಾ ಅಧ್ಯಕ್ಷರಾಗಿ ಮತ್ತು ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋನಲ್ ರಾಜೇಶ ಕೊಠಿಯಾ ಅವರು 17 ಮತ ಪಡೆದು ರಾಷ್ಟ್ರೀಯವಾದಿ ಶರದ್‌ ಪವಾರ್ ಗುಂಪಿನ ಅಭ್ಯರ್ಥಿ ಅನಿತಾ ಪಠಾಡೆ ಅವರನ್ನು … Continued

ಪಂಢರಪುರದಲ್ಲಿ ತಪ್ಪಿಸಿಕೊಂಡ ನಂತರ ಮಾಲೀಕನನ್ನು ಹುಡುಕುತ್ತ 200 ಕಿಮೀ ನಡೆದು ಮರಳಿ ಮನೆಗೆ ಬಂದ ನಾಯಿ…!

ಬೆಳಗಾವಿ: ನಾಯಿಗಳು ಅತ್ಯಂತ ನಂಬಿಕಸ್ಥ ಮತ್ತು ಮಾಲೀಕರಿಗೆ ವಿಧೇಯವಾಗಿರುವ ಪ್ರಾಣಿ. ಅವುಗಳ ವಾಸನಾ ಶಕ್ತಿಯೂ ಅದ್ಭುತ. ಅವುಗಳನ್ನು ಎಲ್ಲಿಯೇ ಬಿಟ್ಟು ಬಂದರೂ ನಾಯಿ ಮತ್ತೆ ಮನೆಯನ್ನು ಹುಡುಕಿಕೊಂಡು ಬಂದ ಸಾಕಷ್ಟು ಉದಾರಹರಣೆಗಳಿವೆ. ಇಂತಹದ್ದೇ ಒಂದು ಅಚ್ಚರಿಯ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 200 ಕಿಮೀ ದೂರದಲ್ಲಿ ಕಳೆದುಹೋಗಿದ್ದ ನಾಯಿ ನಾಲ್ಕು ದಿನಗಳ ನಂತರ ಬಳಿಕ … Continued

ನಿಪ್ಪಾಣಿ : 101 ವರ್ಷಗಳ ಹಳೆಯ ನಿಪ್ಪಾಣಿ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

 ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಪತ್ರ ಬರೆಯಲಾಗಿದೆ. ನಿಪ್ಪಾಣಿ ಹಳೆ ಪಿಬಿ ರಸ್ತೆಯ ರಾಮಮಂದಿರ ಇದಾಗಿದ್ದು, ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದೆ. ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ … Continued

ನಿಪ್ಪಾಣಿ : ಮೊಬೈಲ್​ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ. ಮೃತನನ್ನು ಆಕಾಶ ಶಿವದಾಸ ಸಂಕಪಾಳ (27) ಎಂದು ಗುರುತಿಸಲಾಗಿದೆ. ಈತ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ಮೃತ ಪಟ್ಟಿದ್ದಾನೆ ಎಂದು … Continued

ಹಿಂದೂ ಪದದ ಕುರಿತು ವಿವಾದಿತ ಹೇಳಿಕೆ ಹಿಂಪಡೆದ ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ಶಬ್ದದ  ಬಗ್ಗೆ ನೀಡಿದ್ದ ಹೇಳಿಕೆಯ ವಿವಾದ ಜೋರಾಗುತ್ತಿದ್ದಂತೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ ಹಾಗೂ ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಅವರು ಹಿಂದೂ ಶಬ್ದದ ಬಗ್ಗೆ ಆಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ … Continued

ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವರು

ಬೆಳಗಾವಿ : ರೈತರು ಮುಖ್ಯ‌ ಬೆಳೆಯ ಜತೆಗೆ ಇತರ ಉಪ ಬೆಳೆಗಳನ್ನು ಬೆಳೆಯಬೇಕು; ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ರೈತರಿಗೆ ಕರೆ ನೀಡಿದರು. ರೈತರೊಂದಿಗೊಂದು ದಿನ” ಕಾರ್ಯಕ್ರಮದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ನರಸಿಂಹ ಯಶವಂತ ಚೌಗಲೆ … Continued