ದಾಖಲೆಯ ಸತತ 8ನೇ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ : ಅತಿ ಹೆಚ್ಚು ಬಜೆಟ್‌ ಮಂಡಿಸಿದವರು ಯಾರ್ಯಾರು..? ಇಲ್ಲಿದೆ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ದಾಖಲೆಯ ಎಂಟನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. 2025-26 ರ ಕೇಂದ್ರ ಬಜೆಟ್ ಅನ್ನು ಅವರು ಶನಿವಾರ ಮಂಡಿಸಲಿದ್ದಾರೆ. ಮಧ್ಯಮ ವರ್ಗದವರಿಗೆ ಆದಾಯ ತೆರಿಗೆ ಸಡಿಲಿಕೆ ಸೇರಿದಂತೆ, ದೇಶದ ಆರ್ಥಿಕ ಬೆಳವಣಿಗೆ ದರ ಹೆಚ್ಚಿಸಲು ದೇಶದಲ್ಲಿ ಬಳಕೆ ಸಾಮರ್ಥ್ಯ ಹೆಚ್ಚಿಸಲು ಕ್ರಮಗಳನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಮಾಜಿ … Continued

ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued

ಜೀವ ಮತ್ತು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಸಂಪೂರ್ಣ ತೆಗೆದುಹಾಕಿ ; ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಪತ್ರ ಬರೆದ ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮೆ (life and medical insurance) ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (GST) ತೆಗೆದುಹಾಕುವುದನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ. ವೈದ್ಯಕೀಯ ವಿಮೆಗೆ ತೆರಿಗೆ ವಿಧಿಸುವುದರಿಂದ ಸಾಮಾಜಿಕವಾಗಿ ಮಹತ್ವದ ಈ … Continued

ಕೇಂದ್ರ ಬಜೆಟ್ 2024 | ಕೌಶಲ್ಯ ಹೆಚ್ಚಳಕ್ಕೆ ಮಹತ್ವದ ಹೆಜ್ಜೆ ; 500 ಉನ್ನತ ಕಂಪನಿಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ

ನವದೆಹಲಿ: ಮಂಗಳವಾರ (ಜುಲೈ 23)ರಂದು ಬಜೆಟ್ 2024 ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೇಶದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಗುರಿ ಹೊಂದಿರುವ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ 500 ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್ ಅವಕಾಶಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದರು. ಪ್ರತಿ … Continued

ಕೇಂದ್ರ ಬಜೆಟ್‌ 2024 : ಚಿನ್ನ-ಬೆಳ್ಳಿ, ಮೊಬೈಲ್‌ ಫೋನ್-ಚಾರ್ಜರ್‌ ಬೆಲೆ ಇಳಿಕೆ, ಹೊಸ ತೆರಿಗೆ ಪದ್ಧತಿಯಲ್ಲಿ 17,500 ರೂ. ಉಳಿತಾಯ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ ಬಜೆಟ್‌ ಮತ್ತು ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಮಂಡಿಸಿದ್ದು, ಉದ್ಯೋಗ ಸೃಷ್ಟಿ, ಯುವಕರ ಕೌಶಲ್ಯಾಭಿವೃದ್ಧಿ ಮತ್ತು ಮಧ್ಯಮ ವರ್ಗದ ಮೇಲೆ ಹೆಚ್ಚು ಕೇಂದ್ರೀಕರಿಸಿದ್ದಾರೆ. 1 ಗಂಟೆ 40 ನಿಮಿಷಗಳ ಅವಧಿಯ ತನ್ನ ಬಜೆಟ್ ಭಾಷಣದಲ್ಲಿ, ಸೀತಾರಾಮನ್ ಹೊಸ ತೆರಿಗೆ … Continued

ಕೇಂದ್ರ ಬಜೆಟ್‌ 2024 : ಕೃಷಿ ವಲಯಕ್ಕೆ ಬಂಪರ್ ಕೊಡುಗೆ…ಕೆಲಸಕ್ಕೆ ಸೇರುವವರಿಗೆ ಗುಡ್‌ನ್ಯೂಸ್‌…ಮೊದಲ ಬಾರಿ ಉದ್ಯೋಗಿಗಳಿಗೆ ಹೆಚ್ಚುವರಿ ಪಿಎಫ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ನಿಗದಿಪಡಿಸಿದ್ದಾರೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಸೇರಿದಂತೆ ಒಂಬತ್ತು ಆದ್ಯತೆಗಳ ಬಗ್ಗೆ ವಿವರಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿಗೆ ನೆರವು ನೀಡಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಅವರು ತಿಳಿಸಿದ್ದಾರೆ. “ಹೆಚ್ಚಿನ … Continued