ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ದ ರಾಷ್ಟ್ರೀಯ ಪದಾಧಿಕಾರಿಗಳ ತಂಡಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಸಂಘಟನಾ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ … Continued

ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ನೂತನ ತಂಡದ ಘೋಷಣೆ ; ಹಲವು ಬದಲಾವಣೆ, ಮಹಿಳೆಯರಿಗೆ ಆದ್ಯತೆ

ನವದೆಹಲಿ : ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ.  ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ ಮಾಧವ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿಗಳನ್ನು ನೀಡಲಾಗಿದೆ. ನಬೀನ್ ಅವರು … Continued

ಈ ಮೊದಲಿನ ರಾಜೀನಾಮೆ ಅಂಗೀಕರಿಸದ ಕಾರಣ ಬಿಜೆಪಿಗೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ ಶೆಹಜಾದ್ ಪೂನಾವಾಲಾ

ನವದೆಹಲಿ : ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಾವು ಹಿಂದೆ ನೀಡಿದ್ದ ರಾಜೀನಾಮೆಯನ್ನುಬಿಜೆಪಿ ಅಧ್ಯಕ್ಷರು ಸ್ವೀಕರಿಸದ ಕಾರಣ ಈಗ ಪಕ್ಷಕ್ಕೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ್ದು, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಮನವಿ ಮಾಡಿದ್ದಾರೆ. ಆಗಸ್ಟ್ 17ರಂದು ಬರೆದಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ರಾಷ್ಟ್ರೀಯ ವಕ್ತಾರ ಹುದ್ದೆಯ … Continued

ಬಿಜೆಪಿಗೆ ಭಾರಿ ಶಾಕ್‌ ; ಉಪಚುನಾವಣೆಯಲ್ಲಿ ಪಕ್ಷದ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಸೋಲು ; ಪ್ರಶಾಂತ ಕಿಶೋರಗೆ ಗೆಲುವು

ಪಾಟ್ನಾ : ಜನ ಸುರಾಜ್ ಪಕ್ಷದ (JSP) ಸಂಸ್ಥಾಪಕ ಪ್ರಶಾಂತ ಕಿಶೋರ ಅವರು ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಶಾಕ್‌ ನೀಡಿದ್ದು, ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಪ್ರಶಾಂತ ಕಿಶೋರ ಅವರು ಬಿಜೆಪಿ ಅಭ್ಯರ್ಥಿ … Continued

ಪ್ರಧಾನಿ ಮೋದಿ-ಬಿಜೆಪಿ ಉನ್ನತ ನಾಯಕರ ಮಹತ್ವದ ಸಭೆ ; ಶೀಘ್ರವೇ ಕೇಂದ್ರ ಸಂಪುಟ-ಪಕ್ಷದ ಸಂಘಟನೆಯ ಪುನರ್ರಚನೆ ?

ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಸಂಘಟನೆಯ ಪುನರ್ರಚನೆಗೆ ಶೀಘ್ರದಲ್ಲೇ ಅಂತಿಮ ರೂಪ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಈ ಸಂಬಂಧ ಬುಧವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. … Continued

ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ : ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್‌ ಬುಲಾವ್

ಬೆಂಗಳೂರು/ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬಿಜೆಪಿ-ಜೆಡಿಎಸ್‌ ಪಕ್ಷಗಳ ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ವಿಚಾರ ಇದೀಗ ತೀವ್ರ ರಾಜಕೀಯ ಕದನಕ್ಕೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇತರೆ ಪ್ರಮುಖ ನಾಯಕರಿಗೆ … Continued

“ಎರಡು ದಿನ ಕಾಯಿರಿ…” : ದೆಹಲಿಗೆ ತೆರಳುವ ಮುನ್ನ ಹೊಸ ಪಕ್ಷ ಸ್ಥಾಪನೆ ವದಂತಿಗಳಿಗೆ ಉತ್ತರಿಸಿದ ಅಣ್ಣಾಮಲೈ

ಚೆನ್ನೈ: ಬಿಜೆಪಿಗೆ ರಾಜೀನಾಮೆ ನೀಡಿ ತಾವೇ ಸ್ವತಃ ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ ಸೋಮವಾರ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ, “ದಯವಿಟ್ಟು ಸ್ವಲ್ಪ ಕಾಯಿರಿ. ಇನ್ನು ಎರಡು ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಕುಳಿತು … Continued

ರಾಜ್ಯಸಭಾ ಚುನಾವಣೆ: ಬಿಜೆಪಿ ಅಧ್ಯಕ್ಷ ನಿತಿನ್ ನವೀನ ಸೇರಿ 9 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ 9 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯವಾರು ಅಭ್ಯರ್ಥಿಗಳ ವಿವರ ಹೀಗಿದೆ: ಬಿಹಾರ : ನಿತಿನ್ ನವೀನ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ) ಮತ್ತು ಶಿವೇಶಕುಮಾರ ಅಸ್ಸಾಂ : ತೇರಾಶ್ ಗೋವಾಲಾ … Continued

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿತಿನ್ ನವೀನ್

ನವದೆಹಲಿ: ನಿತಿನ್ ನವೀನ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ 1980ರಲ್ಲಿ ಸ್ಥಾಪನೆಯಾದ ಬಿಜೆಪಿ ಪಕ್ಷದಲ್ಲಿ ಹೊಸ ತಲೆಮಾರಿನ ನಾಯಕತ್ವಕ್ಕೆ ಚಾಲನೆ ಸಿಕ್ಕಂತಾಗಿದೆ. ವಿಶೇಷವೆಂದರೆ, ಬಿಜೆಪಿ ಸ್ಥಾಪನೆಯಾದ ವರ್ಷವೇ (1980) ನಿತಿನ್ ನವೀನ್ ಅವರು ಜನಿಸಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಅಧಿಕೃತ ಸಭೆಯಲ್ಲಿ ನಿತಿನ್ ನವೀನ್ … Continued

ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ ; ಆಗಲಿದ್ದಾರೆ ಬಿಜೆಪಿ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP)ಯ ಸಾಂಘಿಕ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರನ್ನು  ಸರ್ವಾನುಮತದ ನಿರ್ಣಯದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಆ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ ಎಂದು ಪಕ್ಷ ದೃಢಪಡಿಸಿದೆ. ಆರೋಗ್ಯ ಸಚಿವ … Continued