ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ಲೋಕಸಭಾ ಸ್ಪೀಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಸಂಸದರು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. … Continued

ರಾಜ್ಯಸಭೆ ಚೇರ್ಮನ್‌ ಜಗದೀಪ್ ಧನಕರ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ಮಂಡನೆ

ನವದೆಹಲಿ: ಸದನದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ರಾಜ್ಯಸಭಾ ಚೇರ್ಮನ್‌ ಜಗದೀಪ ಧನಕರ ವಿರುದ್ಧ ಮಂಗಳವಾರ ಬೆಳಿಗ್ಗೆ ಅವಿಶ್ವಾಸ ನಿರ್ಣಯ ಮಂಡಿಸಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ರಾಷ್ಟ್ರೀಯ ಜನತಾ ದಳದ 50ಕ್ಕೂ ಹೆಚ್ಚು ಸಂಸದರ ಸಹಿಯೊಂದಿಗೆ ನೋಟಿಸ್ ಅನ್ನು … Continued