ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‌ವೈ

ಶಿಕಾರಿಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳಿಕೆ ಬಗ್ಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ. … Continued