ಬಹುಭಾಷಾ ನಟ ಪ್ರದೀಪ ರಾವತ್ ನಿಧನ

ಮುಂಬೈ:  ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಮತ್ತು ವೈವಿಧ್ಯಮಯ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಖ್ಯಾತ ನಟ ಪ್ರದೀಪ ಸಿಂಗ್ ರಾವತ್ ಅವರು ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟ ಪ್ರದೀಪ ರಾವತ್ ಮಂಗಳವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಕ್ಯಾನ್ಸರ್ ಚಿಕಿತ್ಸೆ … Continued

ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ ನಿಧನ

ಹೊನ್ನಾವರ : ಬಡಗುತಿಟ್ಟಿನ ಯಕ್ಷಗಾನ ರಂಗಭೂಮಿ ಕಂಡ ಅಪರೂಪದ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ (52) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣಕ್ಕೆ ಮಣಿಪಾಲ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆಯೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲತಃ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಗ್ರಾಮದವರಾದ ಅವರು, ಪ್ರಸ್ತುತ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿಯಲ್ಲಿ … Continued

ಗಾನ ಕೋಗಿಲೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಇನ್ನಿಲ್ಲ ; 48 ಸಾವಿರಕ್ಕೂ ಅಧಿಕ ಹಾಡುಗಳ ಅಮರ ಕಂಠ ಮೌನ

ಮೈಸೂರು : ದಕ್ಷಿಣ ಭಾರತದ ಚಿತ್ರರಂಗದ ಹಿನ್ನೆಲೆ ಗಾಯನದಲ್ಲಿ ತಮ್ಮ ಅಪರೂಪದ ಕಂಠಸಿರಿಯ ಮೂಲಕ ಆರು ದಶಕಗಳಿಗೂ ಹೆಚ್ಚುಕಾಲ ಜನರ ಮನಸ್ಸಿನಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ  ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯೊಂದಿಗೆ ಭಾರತೀಯ ಚಿತ್ರಸಂಗೀತದ ಒಂದು ಸುವರ್ಣ ಅಧ್ಯಾಯವೇ ಅಂತ್ಯಗೊಂಡಂತಾಗಿದೆ. ಅನಾರೋಗ್ಯದ … Continued

ಸುಳ್ಯ : ʼಭಾರತದ ಬ್ರಿಜ್‌ ಮ್ಯಾನ್‌’ ಖ್ಯಾತಿಯ ಡಾ.ಗಿರೀಶ ಭಾರದ್ವಾಜ ಇನ್ನಿಲ್ಲ

ಮಂಗಳೂರು : ಪದ್ಮಶ್ರೀ ಪುರಸ್ಕೃತ, ‘ಭಾರತದ ಬ್ರಿಜ್‌ ಮ್ಯಾನ್‌’ ಎಂದೇ ಖ್ಯಾತರಾಗಿದ್ದ ಗಿರೀಶ ಭಾರದ್ವಾಜ (76) ಅವರು ಮಂಗಳವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ 150ಕ್ಕೂ ಹೆಚ್ಚು ಪರಿಸರ ಸ್ನೇಹಿ, ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಹೊಸ … Continued

ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ನಿಧನ

ಮುಂಡಗೋಡ: ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ (75) ಅವರು ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾನಂದ ಅವರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಲೋಕಧ್ವನಿ ಪತ್ರಿಕೆ ಸಂಸ್ಥಾಪಕರಾದ ಗೋಪಾಲಕೃಷ್ಣ ಆನವಟ್ಟಿಯವರ ಕಾಲದಿಂದಲೂ ಅವರು ಲೋಕಧ್ವನಿ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ, ಅಖಿಲೇಶ ಮಲಸಹೋದರ ಪ್ರತೀಕ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ ಯಾದವ್ ಅವರ ಸಹೋದರ ಪ್ರತೀಕ ಯಾದವ್ (38) ಅವರು ಬುಧವಾರ ಲಕ್ನೋದಲ್ಲಿ ನಿಧನರಾಗಿದ್ದಾರೆ. ಪ್ರತೀಕ್ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಪತಿ. ಮೂಲಗಳ ಪ್ರಕಾರ, ಪ್ರತೀಕ ಅವರನ್ನು ಬುಧವಾರ ಮುಂಜಾನೆ ಸುಮಾರು … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜನಪರ ಹೋರಾಟಗಾರ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಹಿಚ್ಕಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರಬಂಧು ಬಳಗದವರನ್ನು ಅಗಲಿದ್ದಾರೆ. ಸಜ್ಜನಿಕೆ, ಸರಳತೆ … Continued

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್‌ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು … Continued