ಖ್ಯಾತ ಬಾಲಿವುಡ್‌ ನಟ ಆಶಿಶ್ ವಾರಂಗ್ ನಿಧನ

ಮುಂಬೈ; ಬಾಲಿವುಡ್‌ನಲ್ಲಿ ಸ್ಮರಣೀಯ ಪೋಷಕ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಹಿರಿಯ ನಟ ಆಶಿಶ್ ವಾರಂಗ್ ಶುಕ್ರವಾರ (ಸೆಪ್ಟೆಂಬರ್ 5) ತಮ್ಮ 55 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ಅಧಿಕೃತವಾಗಿ ಕಾರಣವನ್ನು ದೃಢಪಡಿಸಲಾಗಿಲ್ಲವಾದರೂ, ಅವರು ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಗಳು ಸೂಚಿಸುತ್ತವೆ. ಆಶಿಶ್ ಅವರು ಚಿತ್ರರಂಗಕ್ಕೆ ಕಾಲಿಡುವ ಮೊದಲು, ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿ ರಾಷ್ಟ್ರಕ್ಕೆ … Continued

ಉದ್ಯಮಿ, ರಾಜಕೀಯ ಧುರೀಣ ಯಶೋಧರ ನಾಯ್ಕ ನಿಧನ

ಕಾರವಾರ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಯಶೋಧರ ನಾಯ್ಕ (69)  ಇಂದು, ಮಂಗಳವಾರ (ಆಗಸ್ಟ್‌ 19) ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳ್ಕೋಡು ಮೂಲದವರಾದ ಯಶೋಧರ ನಾಯ್ಕ ಅವರು ನಾಲ್ಕು ದಶಕಗಳಿಗೂ … Continued

ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ನಿಧನ

ಕೊಹಿಮಾ/ಚೆನ್ನೈ : ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕೊಹಿಮಾದ ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರೆಸ್ಸೆಸ್ ಮೂಲದವರಾದ ತಮಿಳುನಾಡಿನ ಖ್ಯಾತ ಬಿಜೆಪಿ ನಾಯಕ ಗಣೇಶನ್ ಅವರು 2021 ಮತ್ತು 2025 ರ ನಡುವೆ ಮಣಿಪುರ, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್ … Continued

ಕೇರಳದ ಮಾಜಿ ಮುಖ್ಯಮಂತ್ರಿ, ಕಮ್ಯುನಿಸ್ಟ್ ಚಳವಳಿಯ ಐಕಾನ್ 101 ವರ್ಷದ ವಿ.ಎಸ್. ಅಚ್ಯುತಾನಂದನ್ ನಿಧನ

ತಿರುವನಂತಪುರಂ: ಶತಾಯುಷಿ, ಕೇರಳ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ ಹಿರಿಯ ವಿ.ಎಸ್. ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು. 101 ವರ್ಷ ವಯಸ್ಸಿನ ಅವರನ್ನು ಜೂನ್ 23 ರಂದು ಮನೆಯಲ್ಲಿ ಹೃದಯಾಘಾತ ಸಂಭವಿಸಿದ ನಂತರ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಮಂಗಳವಾರ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ … Continued

ಬಹುಭಾಷಾ ನಟ ಮುಕುಲ್‌ ದೇವ ನಿಧನ

ಮುಂಬೈ : ಸನ್‌ ಆಫ್‌ ಸರ್ದಾರ್‌ ಸಿನೆಮಾ ಖ್ಯಾತಿಯ ಬಹುಭಾಷಾ ನಟ ಮುಕುಲ್ ದೇವ್ (54) ನಿಧನರಾಗಿದ್ದಾರೆ. ಮುಕುಲ್‌ ಅವರ ಸಾವಿನ ಸುದ್ದಿಯನ್ನು ಅವರ ಸಹೋದರ ರಾಹುಲ್‌ ದೇವ್‌ (Rahul Dev) ಖಚಿತ ಪಡಿಸಿದ್ದಾರೆ ಹಿಂದಿ, ಪಂಜಾಬಿ ಸೇರಿದಂತೆ ವಿವಿಧ ಭಾಷೆಗಳ ಸಿನೆಮಾಗಳು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸಿದ್ದ ಅವರು, ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು … Continued

ಹಿರಿಯ ಪತ್ರಕರ್ತ ಶ್ಯಾಮಸುಂದರ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ (೭೨) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 39 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಅವರು ವಿಶೇಷವಾಗಿ ಡಿಜಿಟಲ್ … Continued

ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ … Continued

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು 85 ನೇ ವಯಸ್ಸಿನಲ್ಲಿ ಲಕ್ನೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ನ್ಯೂರಾಲಜಿ ವಾರ್ಡ್ ಎಚ್‌ಡಿಯುಗೆ ಸ್ಥಳಾಂತರಿಸಲಾಯಿತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ … Continued

ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued