ಎಫ್‌ಎಸ್‌ಎಸ್‌ಎಐ ಕಠಿಣ ಕ್ರಮ : ಆಹಾರ ಕಂಪನಿಗಳಿಗೆ 150, ಪಂಚತಾರಾ ಹೋಟೆಲ್‌ಗಳಿಗೆ 20ಕ್ಕೂ ಹೆಚ್ಚು ನೋಟಿಸ್

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ನಿಯಮಗಳನ್ನು ಉಲ್ಲಂಘಿಸುವ ಆಹಾರ ಉದ್ಯಮಗಳ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ವಿವಿಧ ವಲಯಗಳ ಆಹಾರ ಉದ್ಯಮ ಸಂಸ್ಥೆಗಳ ವಿರುದ್ಧ ಮಹತ್ವದ ಜಾರಿ ಕ್ರಮ ಕೈಗೊಂಡಿರುವುದಾಗಿ ಎಫ್‌ಎಸ್‌ಎಸ್‌ಎಐ(FSSAI) ಶನಿವಾರ ತಿಳಿಸಿದೆ. ಇದರ ಭಾಗವಾಗಿ ಆಹಾರ ಕಂಪನಿಗಳಿಗೆ … Continued

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : 43.80 ಲಕ್ಷ ಮತದಾರರಿಗೆ ನೋಟಿಸ್‌ ನೀಡಲು ಚುನಾವಣಾ ಆಯೋಗ ಸಿದ್ಧತೆ

ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision—SIR) ಚುನಾವಣಾ ಪಟ್ಟಿಯ ಎರಡನೇ ಹಂತದಲ್ಲಿ 43,80,740 ನಾಗರಿಕರಿಗೆ ನೋಟಿಸ್ ಜಾರಿ ಮಾಡಿ ಅಗತ್ಯ ಮಾಹಿತಿ ಪಡೆಯಲು ಚುನಾವಣಾ ಆಯೋಗ ಮುಂದಾಗಿದೆ. ಈ ಪೈಕಿ ಬೆಂಗಳೂರಿನ ನಾಲ್ಕು ಜಿಲ್ಲೆಗಳಲ್ಲೇ 24,05,990 ಮಂದಿ ಇದ್ದಾರೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿ … Continued

‘ಯೂಸರ್‌ನೇಮ್’ ವೈಶಿಷ್ಟ್ಯ ವಿವಾದ: ವಾಟ್ಸ್ಆ್ಯಪ್ ನಂತರ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರ ಸರ್ಕಾರದ ನೋಟಿಸ್

ನವದೆಹಲಿ: ಮೆಸೇಜಿಂಗ್ ವೇದಿಕೆಗಳಾದ ಟೆಲಿಗ್ರಾಂ ಮತ್ತು ಸಿಗ್ನಲ್‌ನಲ್ಲಿರುವ ‘ಯೂಸರ್‌ನೇಮ್’ (Username) ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಗುರುವಾರ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಮೆಟಾ ಒಡೆತನದ ವಾಟ್ಸ್ಆ್ಯಪ್‌ಗೆ ಇದೇ ವೈಶಿಷ್ಟ್ಯದ ಕುರಿತು ಬುಧವಾರ ನೋಟಿಸ್ ನೀಡಿದ ಒಂದು ದಿನದ ಬಳಿಕ ಈ ಬೆಳವಣಿಗೆನಡೆದಿದೆ. ನೋಟಿಸ್‌ನಲ್ಲಿ, ಮೊಬೈಲ್ … Continued

ಸೈಬರ್ ವಂಚನೆ ಹೆಚ್ಚುವ ಆತಂಕ : ವಾಟ್ಸ್ಆಪ್ ಹೊಸ ‘ಯೂಸರ್‌ನೇಮ್’ ಸೇವೆಗೆ ಸರ್ಕಾರದ ತಾತ್ಕಾಲಿಕ ತಡೆ ; ಸ್ಪಷ್ಟನೆಗೆ ಮೆಟಾಕ್ಕೆ ನೋಟಿಸ್‌

ನವದೆಹಲಿ: ಭಾರತದಲ್ಲಿ ವಾಟ್ಸ್ಆಪ್ ತನ್ನ ಹೊಸ ‘ಯೂಸರ್‌ನೇಮ್’ (Username) ವೈಶಿಷ್ಟ್ಯವನ್ನು ಜಾರಿಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದ್ದು, ಈ ಕುರಿತು ಮೂರು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಮೆಟಾಗೆ (Meta) ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಜೊತೆ ನಡೆಯುವ ಸಮಾಲೋಚನೆ ಪೂರ್ಣಗೊಳ್ಳುವವರೆಗೆ ಭಾರತದಲ್ಲಿ ಈ ವೈಶಿಷ್ಟ್ಯವನ್ನು ಜಾರಿಗೊಳಿಸಬಾರದು ಎಂದು ಕೂಡ ಸ್ಪಷ್ಟ ಸೂಚನೆ … Continued

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ … Continued

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ಭಯೋತ್ಪಾದಕ’ ಎಂಬ ಪದವನ್ನು ಬಳಸಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಖರ್ಗೆ, ಎಐಎಡಿಎಂಕೆ (AIADMK) ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಟೀಕಿಸುವ ಸಂದರ್ಭದಲ್ಲಿ ಈ ವಿವಾದಾತ್ಮಕ … Continued

ಭಾರತದ ಗಾಯಕಿ ಆಶಾ ಭೋಂಸ್ಲೆ ಸ್ಮರಣಾರ್ಥ ಕಾರ್ಯಕ್ರಮ ಬಿತ್ತರಿಸಿದ್ದಕ್ಕೆ ಪಾಕಿಸ್ತಾನದ ಪ್ರಮುಖ ಟಿವಿ ಚಾನೆಲ್‌ಗೆ ಸರ್ಕಾರದ ನೋಟಿಸ್…!

ಮುಂಬೈ: ಎಂಟು ದಶಕಗಳ ಕಾಲ ತನ್ನ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಭಾರತೀಯ ಚಿತ್ರ ರಂಗದ ಮಹಾನ್‌ ಹಿನ್ನೆಲೆ ಗಾಯಕಿ, ಪದ್ಮವಿಭೂಷಣ ಆಶಾ ಭೋಂಸ್ಲೆ (ಆಶಾ ತಾಯಿ) ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ನಿಧನವು ಇಡೀ ರಾಷ್ಟ್ರಕ್ಕೆ ಆಘಾತ ತಂದಿದ್ದು, ಭಾರತೀಯ ಚಿತ್ರರಂಗದ ಒಂದು ಸುವರ್ಣ ಯುಗ ಅಂತ್ಯಗೊಂಡಿದೆ. ಏಪ್ರಿಲ್ … Continued

ಬಿಹಾರ ಚುನಾವಣೆ | 2 ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ : ಪ್ರಶಾಂತ ಕಿಶೋರಗೆ ಚುನಾವಣಾ ಆಯೋಗ ನೋಟಿಸ್‌

ನವದೆಹಲಿ: ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರ ಗುರುತಿನ ಕಾರ್ಡ್‌ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ ಕಿಶೋರ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪಶ್ಚಿಮ ಬಂಗಾಳ ಮತ್ತು ಬಿಹಾರದ ಮತದಾರರ ಪಟ್ಟಿಯಲ್ಲಿ ಪ್ರಶಾಂತ ಕಿಶೋರ ಅವರ ಹೆಸರು ಕಾಣಿಸಿಕೊಂಡಿದೆ. ಬಿಹಾರ ವಿಧಾನಸಭಾ … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆಂಬ ಆರೋಪ ; ದಾಖಲೆ ನೀಡುವಂತೆ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು : ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ಕೋರಿದ್ದಾರೆ. ಈ ದಾಖಲೆಗಳು ವಿವರವಾದ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ರಾಹುಲ್‌ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ … Continued