ತಿನ್ನಲು ಕೇಳಿದ್ದಕ್ಕೆ ತಾನು ತಂದಿದ್ದ ಒಂದು ಚಪಾತಿ ಕೊಟ್ರೂ ಮತ್ತೊಂದು ಕೊಡಲಿಲ್ಲ ಎಂದು ರಿಕ್ಷಾ ಚಾಲಕನ ಹತ್ಯೆ ಮಾಡಿದ ವ್ಯಕ್ತಿ

ನವದೆಹಲಿ: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಚಪಾತಿ ಹಂಚಿಕೊಳ್ಳಲು ನಿರಾಕರಿಸಿದ ರಿಕ್ಷಾ ಚಾಲಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮೃತನನ್ನು 40 ವರ್ಷದ ಮುನ್ನಾ ಎಂದು ಗುರುತಿಸಲಾಗಿದೆ. “ಆರೋಪಿ ಚಿಂದಿ ಆಯುವ ಫಿರೋಜ್ ಖಾನ್ ಎಂಬಾತನನ್ನು ಕರೋಲ್ ಬಾಗ್‌ನ ಉದ್ಯಾನವನದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ, ಜುಲೈ 26 ರಂದು, … Continued

ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ

ಬೆಂಗಳೂರು: ತನ್ನ ಅಕ್ಕನಿಗೆ ವಿಚ್ಛೇದನ ನೀಡಿದ  ಬಾವನನ್ನು ಸಿಲುಕಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಮ್‍ಗೆ ಫೋನ್ ಕರೆ ಮಾಡಿ ಪೊಲೀಸರ ನಿದ್ದೆಗೆಡಿಸಿದ್ದ ಕೋಲ್ಕತ್ತಾದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿಲ್ಸನ್ ಗಾರ್ಡನ್‍ನ ಪಿಜಿಯಲ್ಲಿ ವಾಸವಾಗಿದ್ದ ಸುಭಾಷಿ … Continued

ಜನರಲ್‌ ಬಿಪಿನ್ ರಾವತ್ ಸಾವಿನ ಕುರಿತು ಆಕ್ಷೇಪಾರ್ಹ ಪೋಸ್ಟ್ : ವ್ಯಕ್ತಿ ಬಂಧನ

ಬೆಂಗಳೂರು: ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವಿನ ಕುರಿತು ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಟಿ.ಕೆ.ವಂಸತಕುಮಾರ್ (೪೦) ಬಂಧಿತ ಆರೋಪಿಯಾಗಿದ್ದಾನೆ. ಈತ ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಆರೋಪಿ ಜನರಲ್‌ ಬಿಪಿನ್ ರಾವತ್ ಸಾವಿನ ಬಗ್ಗೆ … Continued

ಶಿರಸಿ: ಕಾಡಿನಲ್ಲಿ ದನ ಕಡಿಯುವಾಗಲೇ ಪೊಲೀಸರ ದಾಳಿ; ಓರ್ವನ ಬಂಧನ, ಮೂವರು ಪರಾರಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯ ಹಿಂಭಾಗದ ಕಾಡಿನ ಜಾಗದಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿಯುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವನ್ನು ಕಡಿಯುವಾಗಲೇ ಒಬ್ಬನನ್ನು ಬಂಧಿಸಿದ್ದು, ಉಳಿದ ಮೂವರು ಪರಾರಿಯಾಗಿದ್ದಾರೆ. ಕಾಡಿನಲ್ಲಿ ಹಸುವನ್ನು ಮಾಂಸಕ್ಕಾಗಿ ಕಡಿಯಲಾಗುತ್ತಿದೆ ಎಂಬ ಮಾಹಿತಿ ತಿಳಿದ ಪೊಲೀಸರು … Continued