ಹೊನ್ನಾವರ: ಖರ್ವಾ ಬಳಿ ಟೆಂಪೊ ಪಲ್ಟಿ- ಓರ್ವ ಸಾವು, 12ಕ್ಕೂ ಹೆಚ್ಚು ಜನರಿಗೆ ಗಾಯ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ಸಮೀಪದ ತಿರುವಿನಲ್ಲಿ ಟೆಂಪೊ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಇತರ 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಜಲವಳ್ಳಕರ್ಕಿಯ ಹನುಂಮತ ಪೂಜಾರಿ … Continued

ಮಲಗಿದ್ದವರ ಮೇಲೆ ಗೂಡ್ಸ್‌ ಟೆಂಪೋ ಹರಿಸಿದ ಚಾಲಕ: ಓರ್ವ ಸಾವು

ಕೊಪ್ಪಳ: ತಾಲೂಕಿನ‌ ಐತಿಹಾಸಿಕ ಹುಲಗೆಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಮಲಗಿದ್ದವರ ಮೇಲೆ ವಾಹನ ಹರಿದು ಓರ್ವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಳ್ಳಾರಿಯ ಸಿರಗುಪ್ಪದ ತಿಪ್ಪಣ್ಣ (75) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಕನೂರಿನ ಗಾವರಾಳದ ಹನುಮವ್ವ, ಶಿರಗುಪ್ಪಾದ ಮಲ್ಲವ್ವ ಹಾಗೂ ತುಕಾರಾಂ ಗಾಯಗೊಂಡಿದ್ದಾರೆ. ಇವರು ದೇವಿಯ ದರ್ಶನಕ್ಕೆ ಬಂದಿದ್ದರು ಎಂದು ಹೇಳಲಾಗಿದ್ದು, ದೇವಸ್ಥಾನದ ಆವರಣದಲ್ಲಿದ್ದ ಬಳೆ ಅಂಗಡಿ ಮುಂದೆ … Continued

ಖಾನಾಪುರ: ಮನೆ ಗೋಡೆ ಕುಸಿದು ಬಾಲಕ ಸಾವು

ಖಾನಾಪುರ :ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಲಿಂಗನಮಠ ಗ್ರಾಮ ಪಂಚಾಯತ ವ್ಯಾಪ್ತಿಯ ಚುಂಚವಾಡದಲ್ಲಿ ಗುರುವಾರ ನಡೆದಿದೆ. ಮೃತಪಟ್ಟವನನ್ನು ಅನಂತು ಧರ್ಮೇಂದ್ರ ಪಾಶೆಟ್ಟಿ(15) ಎಂಬ ಎಂದು ಗುರುತಿಸಲಾಗಿದೆ. ವಾಸಿಸುವ ಮನೆಯಲ್ಲಿಯೇ ದನಕರುಗಳನ್ನು ಕಟ್ಟುತ್ತಿದ್ದರು. ಗುರುವಾರ ರಾತ್ರಿ ಹತ್ತರ ಸುಮಾರಿಗೆ ಕೊಟ್ಟಿಗೆಯಲ್ಲಿರುವ ದನ ಕರುಗಳಿಗೆ … Continued

ಮರವಂತೆ : ಸಮುದ್ರಕ್ಕೆ ಉರುಳಿದ ಕಾರು- ಓರ್ವನ ಸಾವು, ಇನ್ನೋರ್ವ ನಾಪತ್ತೆ

ಉಡುಪಿ:ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವನಿಗೆ ಹುಡುಕಾಟ ನಡೆಯುತ್ತಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ ಮೇಲಿನಿಂದ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಮೃತಪಟ್ಟಿದ್ದು, ಮತ್ತೊಬ್ಬರು ಸಮುದ್ರ ನೀರಲ್ಲಿ ನಾಪತ್ತೆಯಾಗಿದ್ದಾರೆ. … Continued

ಜಗಳ ಬಗೆಹರಿಸಲು ಬಂದ ಪತ್ನಿ ಸಂಬಂಧಿಕರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ ಪತಿ: ಒಬ್ಬರು ಸಾವು, ಮೂವರಿಗೆ ಗಾಯ

ಯಾದಗಿರಿ : ದಂಪತಿ ಜಗಳ ಸರಿಮಾಡಲು ಹೋಗಿದ್ದ ಪತ್ನಿಯ ಸಂಬಂಧಿಕರನ್ನೇ ಮನೆಯಲ್ಲಿ ಕೂಡಿಹಾಕಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು, ಈ ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿ, ಇತರ ಮೂವರು ಗಾಯಗೊಂಡ ಘಟನೆ ನಾರಾಯಣಪುರದ ಛಾಯಾ ಕಾಲೊನಿಯಲ್ಲಿ ಬುಧವಾರ ನಡೆದಿದೆ‌. ಆರೋಪಿ ಶರಣಪ್ಪ  ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ … Continued

ಹಳದೀಪುರ: ಬೈಕ್‌-ಸಾರಿಗೆ ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು

ಹೊನ್ನಾವರ : ತಾಲೂಕಿನ ಹಳದೀಪುರದ ನವಿಲಗೋಣ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾರಿಗೆ ಬಸ್ -ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಸಾವಿಗೀಡಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದ ವರದಿಯಾಗಿದೆ. ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದು ಬೈಕ್‌ ನುಜ್ಜುಗುಜ್ಜಾಗಿದೆ. ಮೃತ ಬೈಕ್ ಸವಾರನನ್ನು ಸಂಕೊಳ್ಳಿಯ ಗಣಪತಿ ಅನಂತ … Continued

ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದವರಲ್ಲಿ ಒಬ್ಬನ ಸಾವು: ಹೆದರಿ ಇನ್ನಿಬ್ಬರು ಸ್ವಯಂ ತಪ್ಪೊಪ್ಪಿಗೆ…!

ಮಂಗಳೂರು; ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿ ಹೊಂದಿದೆ ಎನ್ನುವುದು ನಂಬಿಕೆ. ಈ ನಂಬಿಕೆಗೆ ಪುಷ್ಟಿ ನೀಡುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ದೈವಸ್ಥಾನಗಳಿಗೆ ಅಪಚಾರ ಮಾಡಿದ ವ್ಯಕ್ತಿಯೊಬ್ಬ ಸತ್ತಿದ್ದು, ಈ ಕೃತ್ಯಕ್ಕೆ ಸಹಕರಿಸಿದ ಇಬ್ಬರು ದೈವಗಳ ಮುಂದೆ ಶರಣಾಗಿದ್ದಾರೆ. ಮಂಗಳೂರು ನಗರ ಭಾಗದಲ್ಲೇ ದುಷ್ಕರ್ಮಿಗಳು ದೈವಸ್ಥಾನಕ್ಕೆ ಅಪಚಾರ ಎಸಗುತ್ತಿದ್ದರು. ಕಾರಣಿಕ ದೈವ ಕೊರಗಜ್ಜನ ದೈವಸ್ಥಾನಗಳ ಕಾಣಿಕೆ … Continued