ಮುರುಡೇಶ್ವರ: ಸಮುದ್ರದ ಅಲೆಗೆ ಸಿಲುಕಿ ಒಬ್ಬ ಸಾವು, ಮತ್ತೊಬ್ಬನ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದ ಇಬ್ಬರು ಯುವಕರು ಸಮುದ್ರಕ್ಕೆ ಇಳಿದ ವೇಳೆ ಒಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಮೃತಪಟ್ಟ ಘಟನೆ ಸಮೀಪದ ತೂದಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಬಸವರಾಜು ((21) ಎಂಬ ಮತ್ತೊಬ್ಬ ಯುವಕನನ್ನು ಲೈಫ್ ಗಾರ್ಡ್‍ ರಕ್ಷಿಸಿದ್ದಾರೆ. ಕನಕಪುರದಿಂದ 10 … Continued

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಒಂದು ಮಗು ಪಾರು

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ತಾಯಿ ಲಕ್ಷ್ಮೀ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟಿದ್ದಾರೆ. ಬಾವಿಯಲ್ಲಿ ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ‌. ಮೂವರೂ ಹೆಣ್ಣು ಮಕ್ಕಳನ್ನು … Continued