ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ; ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ…!

ಬೆಂಗಳೂರು: ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯೊಬ್ಬರಿಗೆ ಆರು ತಿಂಗಳ ಅವಧಿಯಲ್ಲಿ ಸುಮಾರು ₹ 32 ಕೋಟಿಗಳಷ್ಟು ಬೃಹತ್ ಮೊತ್ತದ ವಂಚನೆ ಮಾಡಲಾಗಿದೆ. ‘ಡಿಜಿಟಲ್ ಬಂಧನ’ (Digital Arrest) ಹೆಸರಿನಲ್ಲಿ ಈ ವಂಚನೆ ನಡೆಸಲಾಗಿದ್ದು, ಸಿಬಿಐ (CBI) ಅಧಿಕಾರಿಗಳೆಂದು ನಟಿಸಿದ ವಂಚಕರು ಮಹಿಳೆಯನ್ನು ನಿರಂತರವಾಗಿ ವೀಡಿಯೊ ಕಣ್ಗಾವಲಿನಲ್ಲಿರಿಸಿ, ಹಣ ಕಳುಹಿಸುವಂತೆ ಒತ್ತಾಯಿಸಿ 187 ಬ್ಯಾಂಕ್ ವರ್ಗಾವಣೆಗಳ ಮೂಲಕ … Continued

ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!

ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued

ಎಚ್ಚರ…| ವಂಚಕರಿಂದ ʼಡಿಜಿಟಲ್ ಬಂಧನʼ : 10 ಕೋಟಿ ರೂ. ಕಳೆದುಕೊಂಡ 70 ವರ್ಷದ ನಿವೃತ್ತ ಇಂಜಿನಿಯರ್…!

ನವದೆಹಲಿ: ದೆಹಲಿಯ 70 ವರ್ಷದ ನಿವೃತ್ತ ಇಂಜಿನಿಯರ್ ಡಿಜಿಟಲ್ ಬಂಧನದ ಹಗರಣಕ್ಕೆ ಬಲಿಯಾದ ನಂತರ ತನ್ನ ಜೀವಮಾನದ ಉಳಿತಾಯದ ಹಣ ಕಳೆದುಕೊಂಡಿದ್ದಾರೆ. ತೈವಾನ್‌ನಿಂದ ನಿಷೇಧಿತ ಪದಾರ್ಥಗಳನ್ನು ಒಳಗೊಂಡ ಪಾರ್ಸೆಲ್ ನಿಮ್ಮ ಹೆಸರಿಗೆ ಕಳುಹಿಸಲಾಗಿದೆ ಎಂದು ಫೋನ್‌ ಮಾಡಿ ಹೆದರಿಸಿ ವಂಚಕರು ಅವರಿಂದ 10 ಕೋಟಿ ರೂ.ಗಳಿಗೂ ಹೆಚ್ಚು ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ. ಪೊಲೀಸರಂತೆ … Continued

5,000 ‘ಸೈಬರ್ ಕಮಾಂಡೋಸ್’, ಆನ್‌ಲೈನ್ ನೋಂದಣಿ : ಸೈಬರ್ ಅಪರಾಧ ತಡೆಗೆ ಕೇಂದ್ರದಿಂದ ನೂತನ ಕ್ರಮಗಳು

ನವದೆಹಲಿ: ಸೈಬರ್ ಭದ್ರತೆ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ 5,000 ‘ಸೈಬರ್ ಕಮಾಂಡೋ’ಗಳಿಗೆ ತರಬೇತಿ, ವೆಬ್ ಆಧಾರಿತ ಡೇಟಾ ರಿಜಿಸ್ಟ್ರಿ ಮತ್ತು ಸೈಬರ್ ಅಪರಾಧ ಮಾಹಿತಿ ಹಂಚಿಕೊಳ್ಳಲು ಪೋರ್ಟಲ್ ಮತ್ತು ರಾಷ್ಟ್ರೀಯ ನೋಂದಣಿ ಸೇರಿದಂತೆ ಹಲವಾರು ನೂತನ ಉಪಕ್ರಮಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ … Continued

ಮಾತು ನಂಬಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ 1.53 ಕೋಟಿ ರೂ. ಕಳೆದುಕೊಂಡ ದಂಪತಿ: ಪೊಲೀಸರ ಕಾರ್ಯದಿಂದ ಹೆಚ್ಚಿನ ಹಣ ವಸೂಲಿ ; ನಡೆದದ್ದು ಹೇಗೆ..?

ಬೆಂಗಳೂರು : ಬೆಂಗಳೂರಿನ ಟೆಕ್ ಉದ್ಯಮ ದಂಪತಿ ಆನ್‌ಲೈನ್ ಟ್ರೇಡಿಂಗ್ ಹಗರಣದಲ್ಲಿ ಕಳೆದುಕೊಂಡಿದ್ದ ಹಣದ ಹೆಚ್ಚಿನ ಭಾಗವನ್ನು ಯಶಸ್ವಿಯಾಗಿ ಮರುಪಡೆದುಕೊಂಡಿದ್ದಾರೆ. ಸ್ಥಳೀಯ ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ. ಬೆಂಗಳೂರು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಗಳೂರಿನ ದಂಪತಿ ಆನ್‌ಲೈನ್ ಹೂಡಿಕೆ ಮಾಡಲು ವಂಚಕರಿಂದ ಕಳೆದುಕೊಂಡಿದ್ದ 1.53 ಕೋಟಿ ರೂ.ಗಳಲ್ಲಿ 1.4 … Continued

ಆನ್‌ಲೈನ್‌ನಲ್ಲಿ ಸೋಫಾ ಮಾರಲು ಹೋಗಿ ಮೋಸ ಹೋದ ಕೇಜ್ರಿ ಪುತ್ರಿ!

ನವ ದೆಹಲಿ: ಇ-ಕಾಮರ್ಸ್‌ನಲ್ಲಿ ಸೋಫಾ ಮಾರಲು ಹೋಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರು ೩೪ ಸಾವಿರ ಕಳೆದುಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ವ್ಯಕ್ತಿಯೋರ್ವ ವೆಬ್ ಪೋರ್ಟಲ್‌ನಲ್ಲಿ ಸೋಫಾ ಕೊಂಡುಕೊಳ್ಳುವುದಾಗಿ ಹರ್ಷಿತಾಳನ್ನು ಸಂಪರ್ಕಿಸಿ ದರ ನಿಗದಿಯಾದ ಬಳಿಕ ಹರ್ಷಿತಾಳ ಖಾತೆಗೆ ಸ್ವಲ್ಪ ಹಣ ಹಾಕಿದ್ದಾನೆ. ಬಳಿಕ ಅದನ್ನು ಖಾತರಿಪಡಿಸಲು … Continued