ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ನಾಯಕರಿಗೆ ಕುಟುಕಿದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್…!

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಪಾಲುದಾರ ರಾಷ್ಟ್ರಗಳಿಗೆ ತೆರಳಿರುವ ಸರ್ವಪಕ್ಷಗಳ ನಿಯೋಗದ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ತಮ್ಮ ಪಕ್ಷ ಕಾಂಗ್ರೆಸ್‌ ಸೇರಿದಂತೆ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ಹೇಳುವುದರ ಬಗ್ಗೆಯೂ ಜನರು ರಾಜಕೀಯ ನಿಷ್ಠೆಯನ್ನು ಲೆಕ್ಕ … Continued

ಭಾರತದ 6 ಯುದ್ಧವಿಮಾನ ಹೊಡೆದಿದ್ದೇವೆ ಎಂಬ ಪಾಕ್‌ ಪ್ರಧಾನಿ ಹೇಳಿಕೆ ಶುದ್ಧ ಸುಳ್ಳು ; ಆರಂಭಿಕ ನಷ್ಟ ಸರಿಪಡಿಸಿಕೊಂಡು ಪಾಕ್ ಮೇಲೆ ನಿಖರ ದಾಳಿ-ಸಿಡಿಎಸ್ ಅನಿಲ ಚೌಹಾಣ

ನವದೆಹಲಿ: ಆಪರೇಷನ್ ಸಿಂಧೂರ ನಂತರದ ನಾಲ್ಕು ದಿನಗಳ ಮಿಲಿಟರಿ ಕಾರ್ಯಾಚರಣೆಯಲ್ಲಿ ಆರು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಯನ್ನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ ಚೌಹಾಣ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಆದರೆ, ಅವರ ಮಾತುಗಳಿಂದ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದನ್ನು ಭಾರತದ ಸೇನೆ ಮೊದಲ ಬಾರಿಗೆ ಒಪ್ಪಿಕೊಂಡಂತಿದೆ. ಭಾರತವು “ಯುದ್ಧತಂತ್ರದ … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ಪಾಕಿಸ್ತಾನಕ್ಕೆ ಭಾರತದ ಹೆದರಿಕೆ ; ಚೀನಾ ಜೊತೆ ಸೇರಿ ಪರಮಾಣು ಶಸ್ತ್ರಾಸ್ತ್ರಗಳ ಆಧುನೀಕರಣ : ಅಮೆರಿಕ ಗುಪ್ತಚರ ವರದಿ

ನವದೆಹಲಿ: ಪಾಕಿಸ್ತಾನವು ಭಾರತವನ್ನು “ಅಸ್ತಿತ್ವಕ್ಕೆ ಬೆದರಿಕೆ” ಎಂದು ಪರಿಗಣಿಸುತ್ತದೆ, ಆದರೆ ಭಾರತವು ಚೀನಾವನ್ನು ತನ್ನ “ಪ್ರಾಥಮಿಕ ಎದುರಾಳಿ” ಪರಿಗಣಿಸುತ್ತದೆ ಹಾಗೂ ಪಾಕಿಸ್ತಾನವನ್ನು ನಿರ್ವಹಿಸಬೇಕಾದ “ಭದ್ರತಾ ಸಮಸ್ಯೆ” ಎಂದು ಪರಿಗಣಿಸುತ್ತದೆ ಎಂದು ಅಮೆರಿಕದ ರಕ್ಷಣಾ ಗುಪ್ತಚರ ಸಂಸ್ಥೆ 2025 ರ ತನ್ನ ವಿಶ್ವಾದ್ಯಂತ ಬೆದರಿಕೆ ಮೌಲ್ಯಮಾಪನ ವರದಿಯಲ್ಲಿ ತಿಳಿಸಿದೆ. 2025ರ ಮೇ 25ರಂದು ಬಿಡುಗಡೆಯಾದ ಅಮೆರಿಕ ಡಿಫೆನ್ಸ್ … Continued

ಪಹಲ್ಗಾಮ್ ದಾಳಿ : ಪ್ರವಾಸಿಗರು ಹೋರಾಡಬೇಕಿತ್ತು, ಮಹಿಳೆಯರು ‘ವೀರತ್ವʼ ತೋರಬೇಕಿತ್ತು ; ನಾಲಿಗೆ ಹರಿಬಿಟ್ಟ ಬಿಜೆಪಿ ಸಂಸದ

ಚಂಡೀಗಢ : ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಪ್ರವಾಸಿಗರು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು ಎಂದು ರಾಜ್ಯಸಭಾ ಸಂಸದ ರಾಮಚಂದರ ಜಂಗ್ರಾ ಶನಿವಾರ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ದಾಳಿಯಲ್ಲಿ ಗಂಡಂದಿರನ್ನು ಕಳೆದುಕೊಂಡ ಮಹಿಳೆಯರಲ್ಲಿ “ಸ್ಫೂರ್ತಿಯ ಕೊರತೆ ಇತ್ತು” ಮತ್ತು ಅವರು ‘ವೀರಾಂಗನೆ'(ಯೋಧ ಮಹಿಳೆಯರು)ಯರಂತೆ ವರ್ತಿಸಬೇಕಾಗಿತ್ತು ಎಂದು ಅವರು … Continued

ಆಪರೇಷನ್ ಸಿಂಧೂರ | ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನದ ಸೇನಾ ಮುಖ್ಯಸ್ಥನಿಗೆ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ…!

ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಎಂಬ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ ನೀಡಲಾಗಿದೆ – ಇದು ಅಪರೂಪದ ಸಂದರ್ಭಗಳಲ್ಲಿ ಮತ್ತು ಸಶಸ್ತ್ರ ಪಡೆಗಳಲ್ಲಿ ತಮ್ಮ ವೃತ್ತಿಜೀವನದುದ್ದಕ್ಕೂ ಅದ್ಭುತ ಕಾರ್ಯಾಚರಣೆ ದಾಖಲೆಯನ್ನು ಸಾಧಿಸಿದ ನಂತರ ಮಾತ್ರ ನೀಡಲಾಗುವ ಗೌರವವಾಗಿದೆ. ಆದರೆ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಸೈನ್ಯದ ಹಿನ್ನಡೆಯ … Continued

ಭಯೋತ್ಪಾದನೆ ವಿರುದ್ಧ ಭಾರತವು ಜಾಗತಿಕವಾಗಿ ತಲುಪುವ ಪ್ರಯತ್ನಕ್ಕೆ ಸ್ಥಳೀಯ ರಾಜಕೀಯ ತರಬೇಡಿ ; ಸಂಜಯ ರಾವತಗೆ ಶರದ್ ಪವಾರ್

ಪುಣೆ: ಎನ್‌ಸಿಪಿ (ಶರದ್‌ ಪವಾರ್‌) ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಮೈತ್ರಿಕೂಟದ ನಾಯಕ ಸಂಜಯ ರಾವತ್ ಅವರ ಹೇಳಿಕೆಯನ್ನು  ತಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ಹಾಗೂ ಅದರ ವಿರುದ್ಧ ದೇಶ ಕೈಗೊಂಡ ಕ್ರಮಗಳ ಕುರಿತು ಭಾರತದ ಜಾಗತಿಕ ಸಂಪರ್ಕ ಪ್ರಯತ್ನಗಳಲ್ಲಿ “ಸ್ಥಳೀಯ ಮಟ್ಟದ ರಾಜಕೀಯ”ವನ್ನು ತರಬೇಡಿ ಎಂದು … Continued

ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

ಅಮೃತಸರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತೀಕಾರವಾಗಿ ಮೇ 7-8ರ ಮಧ್ಯರಾತ್ರಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರದ ಸ್ವರ್ಣ ಮಂದಿರದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು ಎಂದು 15 ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ … Continued

‘ಅಜೇಯ ಬೆಂಕಿಯ ಗೋಡೆ’: ಆಪರೇಷನ್ ಸಿಂಧೂರದ ಹೊಸ ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ | ವೀಕ್ಷಿಸಿ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿನ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಹೊಸ ವೀಡಿಯೊವನ್ನು ಭಾರತೀಯ ಸೇನೆ ಭಾನುವಾರ ಹಂಚಿಕೊಂಡಿದೆ. ಸೇನೆಯ ವೆಸ್ಟರ್ನ್ ಕಮಾಂಡ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ “ಶತ್ರು ಕ್ಷಿಪಣಿಗಳು ತಟಸ್ಥಗೊಳಿಸಲ್ಪಟ್ಟವು…ಭಾರತೀಯ ಸೇನೆ … Continued

ಆಪರೇಶನ್‌ ಸಿಂಧೂರ ಪರಿಣಾಮ : ಪಾಕಿಸ್ತಾನಕ್ಕೆ 11 ಹೊಸ ಷರತ್ತು ವಿಧಿಸಿದ ಐಎಂಎಫ್‌

ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ತನ್ನ ಬೇಲ್‌ಔಟ್ ಕಾರ್ಯಕ್ರಮದ ಮುಂದಿನ ಕಂತನ್ನು ಬಿಡುಗಡೆ ಮಾಡಲು ಪಾಕಿಸ್ತಾನಕ್ಕೆ 11 ಹೊಸ ಷರತ್ತುಗಳನ್ನು ವಿಧಿಸಿದೆ ಮತ್ತು ಭಾರತದ ಜೊತೆಗೆ ಸಂಘರ್ಷವು ಯೋಜನೆಯ ಹಣಕಾಸು, ಬಾಹ್ಯ ಮತ್ತು ಸುಧಾರಣಾ ಉದ್ದೇಶಗಳಿಗೆ ಅಪಾಯ ಹೆಚ್ಚಿಸಬಹುದು ಎಂದು ಭಾನುವಾರ ಮಾಧ್ಯಮ ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಮೇಲೆ ವಿಧಿಸಲಾದ ಹೊಸ ಷರತ್ತುಗಳಲ್ಲಿ 17.6 … Continued