೨ಎ ಮೀಸಲಾತಿಗೆ ಸೇರ್ಪಡೆ ಮಾಡಿ: ಬೆಂಗಳೂರು ಸಮಾವೇಶದಲ್ಲಿ ಪಂಚಮಸಾಲಿಗಳ ಹಕ್ಕೊತ್ತಾಯ

ಬೆಂಗಳೂರು: ೨ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಸಮಾವೇಶಕ್ಕೆ ವಿಶೇಷವಾಗಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಕಲಬುರಗಿ, ಬಾಗಲಕೋಟೆ, ವಿಜಯಪುರ,ಯಾದಗಿರಿ, ಬೀದರ್, ರಾಯಚೂರು,ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಮೊದಲಾದ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. … Continued