ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued

ವೀಡಿಯೊ..| ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲರ ಹೃದಯಗೆದ್ದ ವಿಶೇಷಚೇತನ ಸಮಾಜ ಸೇವಕ ಬೆಂಗಳೂರಿನ ಡಾ.ರಾಜಣ್ಣ ; ವೀಡಿಯೊ ಭಾರೀ ವೈರಲ್‌

ನವದೆಹಲಿ: ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ವಿಶೇಷಚೇತನ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಭಾರೀ ಕರತಾಡನದ ಮಧ್ಯೆ ಅವರು ಪ್ರಶ್ತಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು … Continued